<p><strong>ಬೆಂಗಳೂರು: </strong>ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿಯ ಮೊದಲ ಸಭೆ ಶಾಸಕ ಎಂ. ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಶಾಸಕರ ಭವನದಲ್ಲಿ ಬುಧವಾರ ನಡೆಯಿತು. ಈ ಸಮಿತಿ ವಿಧಾನಸಭೆಯ 15 ಮತ್ತು ಪರಿಷತ್ತಿನ ನಾಲ್ವರು ಸದಸ್ಯರನ್ನು ಒಳಗೊಂಡಿದೆ.<br /> <br /> ಸಭೆಯಲ್ಲಿ ಚರ್ಚೆಗೆ ಬಂದ ವಿಚಾರಗಳ ಕುರಿತು `ಪ್ರಜಾವಾಣಿ~ಗೆ ಮಾಹಿತಿ ನೀಡಿದ ವಿಧಾನ ಪರಿಷತ್ ಸದಸ್ಯ ಡಾ. ಮುಮ್ತಾಜ್ ಅಲಿ ಖಾನ್ ಅವರು, `ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಸರ್ಕಾರ ಹಾಕಿಕೊಂಡಿರುವ ಯೋಜನೆಗಳು ಯಾವ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಬಂದಿವೆ ಎಂಬ ಕುರಿತು ಸಭೆ ಚರ್ಚಿಸಿತು~ ಎಂದು ತಿಳಿಸಿದರು.<br /> <br /> `ಪರಿಶಿಷ್ಟರಿಗಾಗಿ ಆರಂಭಿಸಲಾದ ಯೋಜನೆಗಳ ಪರಿಣಾಮ ಏನು, ತಳ ಸಮುದಾಯಗಳ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನ ಯಾವ ಪ್ರಮಾಣದಲ್ಲಿ ಬಳಕೆಯಾಗಿದೆ ಎಂಬ ಕುರಿತು ಗಮನಹರಿಸಲು ಈ ಸಮಿತಿಯನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಯಿತು~ ಎಂದು ಅವರು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿಯ ಮೊದಲ ಸಭೆ ಶಾಸಕ ಎಂ. ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಶಾಸಕರ ಭವನದಲ್ಲಿ ಬುಧವಾರ ನಡೆಯಿತು. ಈ ಸಮಿತಿ ವಿಧಾನಸಭೆಯ 15 ಮತ್ತು ಪರಿಷತ್ತಿನ ನಾಲ್ವರು ಸದಸ್ಯರನ್ನು ಒಳಗೊಂಡಿದೆ.<br /> <br /> ಸಭೆಯಲ್ಲಿ ಚರ್ಚೆಗೆ ಬಂದ ವಿಚಾರಗಳ ಕುರಿತು `ಪ್ರಜಾವಾಣಿ~ಗೆ ಮಾಹಿತಿ ನೀಡಿದ ವಿಧಾನ ಪರಿಷತ್ ಸದಸ್ಯ ಡಾ. ಮುಮ್ತಾಜ್ ಅಲಿ ಖಾನ್ ಅವರು, `ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಸರ್ಕಾರ ಹಾಕಿಕೊಂಡಿರುವ ಯೋಜನೆಗಳು ಯಾವ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಬಂದಿವೆ ಎಂಬ ಕುರಿತು ಸಭೆ ಚರ್ಚಿಸಿತು~ ಎಂದು ತಿಳಿಸಿದರು.<br /> <br /> `ಪರಿಶಿಷ್ಟರಿಗಾಗಿ ಆರಂಭಿಸಲಾದ ಯೋಜನೆಗಳ ಪರಿಣಾಮ ಏನು, ತಳ ಸಮುದಾಯಗಳ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನ ಯಾವ ಪ್ರಮಾಣದಲ್ಲಿ ಬಳಕೆಯಾಗಿದೆ ಎಂಬ ಕುರಿತು ಗಮನಹರಿಸಲು ಈ ಸಮಿತಿಯನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಯಿತು~ ಎಂದು ಅವರು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>