<p><strong>ಬೆಂಗಳೂರು:</strong> ‘ಕೋವಿಡ್ನಿಂದ ಮೃತಪಟ್ಟ ಎಪಿಎಲ್ ಕುಟುಂಬದವರಿಗೆ ₹1 ಲಕ್ಷ ಪರಿಹಾರ ನೀಡುವ ಬಗ್ಗೆ ಸಕಾರಾತ್ಮಕ ಚಿಂತನೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.</p>.<p>ಕೋವಿಡ್ನಿಂದ ಮೃತಪಟ್ಟವರ ಕುಟುಂಬದವರಿಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಹಾರ ಧನ ವಿತರಿಸಿ ಅವರು ಮಾತನಾಡಿದರು.</p>.<p>‘ಬಿಪಿಎಲ್ ಮಾತ್ರವಲ್ಲದೇ ಎಪಿಎಲ್ ಕುಟುಂಬಕ್ಕೂ ಕೇಂದ್ರ ಸರ್ಕಾರದಿಂದ ತಲಾ ₹50 ಸಾವಿರ ಪರಿಹಾರ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬಕ್ಕೆ ಮಾತ್ರ ₹1 ಲಕ್ಷ ಸೇರಿಸಿ ಒಟ್ಟು ₹1.50 ಲಕ್ಷ ಕೊಡುತ್ತಿದೆ. ಈ ಒಂದು ಲಕ್ಷವನ್ನು ಎಪಿಎಲ್ ಕುಟುಂಬಕ್ಕೂ ನೀಡಬೇಕು’ ಎಂದು ಶಾಸಕ ಬಿ.ಝಡ್. ಜಮೀರ್ ಅಹಮ್ಮದ್ ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಹಣಕಾಸಿನ ಸ್ಥಿತಿಗತಿ ನೋಡಿ ಕೊಂಡು ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋವಿಡ್ನಿಂದ ಮೃತಪಟ್ಟ ಎಪಿಎಲ್ ಕುಟುಂಬದವರಿಗೆ ₹1 ಲಕ್ಷ ಪರಿಹಾರ ನೀಡುವ ಬಗ್ಗೆ ಸಕಾರಾತ್ಮಕ ಚಿಂತನೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.</p>.<p>ಕೋವಿಡ್ನಿಂದ ಮೃತಪಟ್ಟವರ ಕುಟುಂಬದವರಿಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಹಾರ ಧನ ವಿತರಿಸಿ ಅವರು ಮಾತನಾಡಿದರು.</p>.<p>‘ಬಿಪಿಎಲ್ ಮಾತ್ರವಲ್ಲದೇ ಎಪಿಎಲ್ ಕುಟುಂಬಕ್ಕೂ ಕೇಂದ್ರ ಸರ್ಕಾರದಿಂದ ತಲಾ ₹50 ಸಾವಿರ ಪರಿಹಾರ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬಕ್ಕೆ ಮಾತ್ರ ₹1 ಲಕ್ಷ ಸೇರಿಸಿ ಒಟ್ಟು ₹1.50 ಲಕ್ಷ ಕೊಡುತ್ತಿದೆ. ಈ ಒಂದು ಲಕ್ಷವನ್ನು ಎಪಿಎಲ್ ಕುಟುಂಬಕ್ಕೂ ನೀಡಬೇಕು’ ಎಂದು ಶಾಸಕ ಬಿ.ಝಡ್. ಜಮೀರ್ ಅಹಮ್ಮದ್ ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಹಣಕಾಸಿನ ಸ್ಥಿತಿಗತಿ ನೋಡಿ ಕೊಂಡು ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>