‘ಗಡಿಭಾಗದ ಹಳ್ಳಿಯಲ್ಲಿ ಅಥವಾ ಗಡಿಗೆ ಹೊಂದಿಕೊಂಡ ಹೊರರಾಜ್ಯದ ಕನ್ನಡ ಪ್ರದೇಶದಲ್ಲಿ ಸ್ಥಳೀಯ ಸಾಂಸ್ಕೃತಿಕ ಮತ್ತು ಕಲಾಪ್ರತಿಭೆಯನ್ನು ಪ್ರೋತ್ಸಾಹಿಸಬೇಕಿದೆ. ಜೊತೆಗೆ, ಗಡಿಭಾಗದ ಜನರ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳ ಕುರಿತು ವಿಚಾರಗೋಷ್ಠಿ, ಸಂವಾದಗಳನ್ನು ಅಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕಗಳು ಆಯೋಜಿಸಬೇಕು. ಅದಕ್ಕೆ ನೆರವಾಗುವ ಉದ್ದೇಶದಿಂದ ಈ ಅನುದಾನ ನೀಡಲಾಗಿದೆ. ಈ ಅನುದಾನದ ಜೊತೆಗೆ ಆಯಾ ಜಿಲ್ಲಾ ಘಟಕಗಳು ತಮ್ಮ ಸಂಪನ್ಮೂಲವನ್ನೂ ಕ್ರೋಡೀಕರಿಸಿ ಅರ್ಥಪೂರ್ಣವಾಗಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು’ ಎಂದೂ ಅವರು ಮನವಿ ಮಾಡಿದರು.