ಬೆಂಗಳೂರು: ವಿಧಾನಸಭೆಯ ಕಲಾಪದ ವೇಳೆ ಮಸೂದೆಗಳ ಪ್ರತಿಗಳನ್ನು ಹರಿದು ಉಪ ಸಭಾಧ್ಯಕ್ಷರ ಮೇಲೆ ಎಸೆದು ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ ಹತ್ತು ಸದಸ್ಯರನ್ನು ಪ್ರಸ್ತುತ ಅಧಿವೇಶನದ ಅವಧಿಗೆ ಅಮಾನತು ಮಾಡಿ ಸ್ಪೀಕರ್ ಯು.ಟಿ. ಖಾದರ್ ಆದೇಶ ಹೊರಡಿಸಿದ್ದಾರೆ.
ಮಧ್ಯಾಹ್ನ ವಿರಾಮದ ಬಳಿಕ ಕಲಾಪ ಆರಂಭವಾದ ಬಳಿಕ ಬಿಜೆಪಿ ಸದಸ್ಯರ ವರ್ತನೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸ್ಪೀಕರ್, ಶಿಸ್ತುಕ್ರಮದ ತೀರ್ಮಾನ ಪ್ರಕಟಿಸಿದರು.
‘ಡಾ.ಸಿ.ಎನ್. ಅಶ್ವತ್ಥ ನಾರಾಯಣ, ವಿ. ಸುನಿಲ್ ಕುಮಾರ್, ಆರ್. ಅಶೋಕ, ವೇದವ್ಯಾಸ ಕಾಮತ್, ಯಶಪಾಲ್ ಸುವರ್ಣ, ಧೀರಜ್ ಮುನಿರಾಜು, ಉಮಾನಾಥ ಕೋಟ್ಯಾನ್, ಅರವಿಂದ ಬೆಲ್ಲದ, ಆರಗ ಜ್ಞಾನೇಂದ್ರ ಮತ್ತು ಭರತ್ ವೈ. ಶೆಟ್ಟಿ ಅವರು ಸದನದಲ್ಲಿ ಅಗೌರವದಿಂದ, ಅಸಭ್ಯವಾಗಿ ವರ್ತಿಸಿದ್ದಾರೆ’ ಎಂದು ಸ್ಪೀಕರ್ ಹೆಸರಿಸಿದರು.