<p><strong>ಬೆಳಗಾವಿ:</strong> ಮಹಾರಾಷ್ಟ್ರದ ಜಲಾಶಯಗಳಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಕೃಷ್ಣಾ ಹಾಗೂ ಮಲಪ್ರಭಾ ನದಿಗಳಲ್ಲಿ ಭಾನುವಾರ ಪ್ರವಾಹ ಇಳಿಮುಖವಾಗಿದೆ. <br /> <br /> ರಾಜಾಪುರ ಬ್ಯಾರೇಜ್ನಿಂದ ಕೃಷ್ಣಾ ನದಿಗೆ 73,446 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಪ್ರವಾಹ ಇಳಿದ ಪರಿಣಾಮ ಜಿಲ್ಲೆಯಲ್ಲಿ ಭಾನುವಾರ 10 ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ರಾಯಬಾಗ ತಾಲ್ಲೂಕಿನ ಕುಡಚಿ, ಚಿಕ್ಕೋಡಿ ತಾಲ್ಲೂಕಿನ ಕಾರದಗಾ- ಭೋಜ್ ಸೇತುವೆಗಳಲ್ಲಿ ಭಾನುವಾರ ವಾಹನಗಳು ನಿರಾತಂಕವಾಗಿ ಸಂಚರಿಸಿದವು. <br /> <br /> ಚಿಕ್ಕೋಡಿ ತಾಲ್ಲೂಕಿನ ಏಳು ಸೇತುವೆ, ಗೋಕಾಕಿನ ಒಂದು ಸೇತುವೆ ಇನ್ನೂ ನೀರಿನಲ್ಲಿ ಮುಳುಗಿದ್ದು, ಜನರು ಪರ್ಯಾಯ ರಸ್ತೆಯ ಮೂಲಕ ಸಂಚರಿಸುತ್ತಿದ್ದಾರೆ. <br /> <br /> ರಾಮದುರ್ಗ ಪಟ್ಟಣ ಹಾಗೂ ಕೆಲವು ಗ್ರಾಮಗಳಲ್ಲಿ ಮನೆಗೆ ನೀರು ನುಗ್ಗಿರುವುದು ಸಂಪೂರ್ಣವಾಗಿ ಇಳಿದಿದೆ. ಆದರೆ ಮನೆಯೊಳಗೆ ಹಾಗೂ ಗ್ರಾಮದಲ್ಲಿ ತುಂಬಿಕೊಂಡಿರುವ ಕೆಸರು ಜನರನ್ನು ಕಾಡುತ್ತಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮಹಾರಾಷ್ಟ್ರದ ಜಲಾಶಯಗಳಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಕೃಷ್ಣಾ ಹಾಗೂ ಮಲಪ್ರಭಾ ನದಿಗಳಲ್ಲಿ ಭಾನುವಾರ ಪ್ರವಾಹ ಇಳಿಮುಖವಾಗಿದೆ. <br /> <br /> ರಾಜಾಪುರ ಬ್ಯಾರೇಜ್ನಿಂದ ಕೃಷ್ಣಾ ನದಿಗೆ 73,446 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಪ್ರವಾಹ ಇಳಿದ ಪರಿಣಾಮ ಜಿಲ್ಲೆಯಲ್ಲಿ ಭಾನುವಾರ 10 ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ರಾಯಬಾಗ ತಾಲ್ಲೂಕಿನ ಕುಡಚಿ, ಚಿಕ್ಕೋಡಿ ತಾಲ್ಲೂಕಿನ ಕಾರದಗಾ- ಭೋಜ್ ಸೇತುವೆಗಳಲ್ಲಿ ಭಾನುವಾರ ವಾಹನಗಳು ನಿರಾತಂಕವಾಗಿ ಸಂಚರಿಸಿದವು. <br /> <br /> ಚಿಕ್ಕೋಡಿ ತಾಲ್ಲೂಕಿನ ಏಳು ಸೇತುವೆ, ಗೋಕಾಕಿನ ಒಂದು ಸೇತುವೆ ಇನ್ನೂ ನೀರಿನಲ್ಲಿ ಮುಳುಗಿದ್ದು, ಜನರು ಪರ್ಯಾಯ ರಸ್ತೆಯ ಮೂಲಕ ಸಂಚರಿಸುತ್ತಿದ್ದಾರೆ. <br /> <br /> ರಾಮದುರ್ಗ ಪಟ್ಟಣ ಹಾಗೂ ಕೆಲವು ಗ್ರಾಮಗಳಲ್ಲಿ ಮನೆಗೆ ನೀರು ನುಗ್ಗಿರುವುದು ಸಂಪೂರ್ಣವಾಗಿ ಇಳಿದಿದೆ. ಆದರೆ ಮನೆಯೊಳಗೆ ಹಾಗೂ ಗ್ರಾಮದಲ್ಲಿ ತುಂಬಿಕೊಂಡಿರುವ ಕೆಸರು ಜನರನ್ನು ಕಾಡುತ್ತಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>