ವಿಧಾನ ಪರಿಷತ್ನಲ್ಲಿ ಮಂಗಳವಾರ ಬಜೆಟ್ಗೆ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ‘ನಿಮಗೆ ಅಲ್ಪಸಂಖ್ಯಾತರ ಮೇಲೆ ಸಿಟ್ಟಿರಬಹುದು. ಆದರೆ, ಆ ವರ್ಗದ ಮಕ್ಕಳ ಮೇಲೆ ಅದನ್ನು ತೋರಿಸಬೇಡಿ. ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ವಿದ್ಯಾರ್ಥಿ ವೇತನ ತಡೆ ಹಿಡಿಯಲಾಗಿದೆ. ಅದನ್ನು ಬಿಡುಗಡೆ ಮಾಡಿ’ ಎಂದರು.