‘ಕಳೆದ ಬಾರಿ ಪ್ರವಾಹದಿಂದ ಬೆಳೆ ಹಾನಿಯಾದವರಿಗೆ ಯಡಿಯೂರಪ್ಪ ಸರ್ಕಾರ ಹೆಕ್ಟೇರ್ಗೆ ₹ 24 ಸಾವಿರ ಒದಗಿಸಿತ್ತು. ಗ್ಯಾರಂಟಿ ಹೆಸರಲ್ಲಿ ₹ 2 ಸಾವಿರ ಕೊಡುತ್ತಿರುವ ಸರ್ಕಾರ, 800 ರೈತರ ಆತ್ಮಹತ್ಯೆಗೆ ಪರಿಹಾರ ಒದಗಿಸಿಲ್ಲ. ನಾಲ್ಕು ತಿಂಗಳಿಂದ ಸಂಧ್ಯಾ ಸುರಕ್ಷಾ, ವಿವಿಧ ಪಿಂಚಣಿಗಳಿಗೆ ಹಣ ಬಿಡುಗಡೆ ಮಾಡಿಲ್ಲ. 10 ಕೆ.ಜಿ ಅಕ್ಕಿ ಕೊಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಅದರಲ್ಲಿ 5 ಕೆ.ಜಿ ಕೇಂದ್ರ ಸರ್ಕಾರ ನೀಡುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಮಾಡಿ ಪುರುಷರ ಟಿಕೆಟ್ ದರವನ್ನು ಶೇ 30ರಷ್ಟು ಹೆಚ್ಚಿಸಿದ್ದಾರೆ. ವಿದ್ಯುತ್ ದರ ಹೆಚ್ಚಿಸಿದ್ದಾರೆ. ರೈತರು ಜಮೀನಿನಲ್ಲಿ ಟ್ರಾನ್ಸ್ಫಾರ್ಮರ್ ಅಳವಡಿಸಲು ಕೇವಲ ₹ 25 ಸಾವಿರ ಇತ್ತು. ಕಾಂಗ್ರೆಸ್ ಸರ್ಕಾರ ಅದನ್ನು ₹ 2 ಲಕ್ಷಕ್ಕೆ ಹೆಚ್ಚಿಸಿದೆ. ಮದ್ಯದ ದರ, ನೋಂದಣಿ ಮುದ್ರಾಂಕ ದರ ಹೆಚ್ಚಿಸಿ ಜನರ ಸುಲಿಗೆ ಮಾಡುತ್ತಿದೆ’ ಎಂದು ಆರೋಪಿಸಿದರು.