<p><strong>ವಿಜಯಪುರ</strong>: ರಾಜ್ಯಕ್ಕೆ ಫಾಕ್ಸ್-ಕಾನ್, ಜಿಂದಾಲ್, ಟೊಯೊಟಾ, ಏರ್ ಇಂಡಿಯಾ ಮುಂತಾದ ಪ್ರತಿಷ್ಠಿತ ಕಂಪನಿಗಳಿಂದ ₹1.15 ಲಕ್ಷ ಕೋಟಿ ಬಂಡವಾಳ ಹೂಡಿಕೆ ಹರಿದುಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.</p><p>ವಿಜಯಪುರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐ-ಫೋನ್ ಬಿಡಿಭಾಗಗಳ ತಯಾರಿಕೆ, ಪವನ ವಿದ್ಯುತ್, ಕಾರು ಉತ್ಪಾದನೆ ಮತ್ತು ವಿಮಾನಗಳ ದುರಸ್ತಿ ಹಾಗೂ ನಿರ್ವಹಣೆ ಇತ್ಯಾದಿ ಕ್ಷೇತ್ರಗಳಲ್ಲಿ ಈ ಹೂಡಿಕೆ ಆಗಿದೆ. ಇದರ ಜೊತೆಗೆ ಇನ್ನೂ ₹ 1 ಲಕ್ಷ ಕೋಟಿಗೂ ಹೆಚ್ಚಿನ ಹೂಡಿಕೆಯ ಖಾತ್ರಿ ರಾಜ್ಯಕ್ಕೆ ಸಿಕ್ಕಿದೆ ಎಂದರು.</p><p>ಫೆಬ್ರವರಿ 11 ರಿಂದ 14 ರವರೆಗೆ ಬೆಂಗಳೂರಿನಲ್ಲಿ ‘ಜಾಗತಿಕ ಹೂಡಿಕೆದಾರರ ಸಮಾವೇಶ’ ನಡೆಯಲಿದೆ. ಇದು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ವರದಾನವಾಗಲಿದೆ ಎಂದು ಹೇಳಿದರು.</p><p>ಬೆಂಗಳೂರು ನಗರದ ಜನತೆ ಮತ್ತು ಉದ್ಯಮಿಗಳ ಅನುಕೂಲಕ್ಕೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಇದರ ಸ್ಥಳ ಅಂತಿಮಗೊಳ್ಳಲಿದೆ ಎಂದರು.</p><p>ರಾಜ್ಯ ಸರ್ಕಾರವು ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರುತ್ತಿದ್ದು, ಇದರಲ್ಲಿ ರಫ್ತು ವಹಿವಾಟಿಗೆ ಆದ್ಯತೆ ಕೊಡಲಾಗಿದೆ. ಬಂಡವಾಳ ಹೂಡಿಕೆ. ಉದ್ಯೋಗ ಸೃಷ್ಟಿ, ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಕೈಗಾರಿಕಾ ಪ್ರಗತಿ. ಇವು ನಮ್ಮ ಮೂಲಮಂತ್ರಗಳಾಗಿವೆ ಎಂದರು.</p><p>ಮಹಿಳಾ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅಂತಹ ಸಂಸ್ಥೆಗಳಿಗೂ ಹೆಚ್ಚಿನ ರಿಯಾಯಿತಿ, ಸಂಶೋಧನೆ ಮತ್ತು ವಿನ್ಯಾಸ ಸಂಸ್ಥೆಗಳು ತಮ್ಮ ಉತ್ಪನ್ನಗಳನ್ನು ರಾಜ್ಯದಲ್ಲೇ ಉತ್ಪಾದನೆ ಮಾಡಿದರೆ ಅದಕ್ಕೊಂದು ವಿಶೇಷ ರಿಯಾಯಿತಿ ನೀಡುವ ವ್ಯವಸ್ಥೆ ಕೂಡ ಹೊಸ ಕೈಗಾರಿಕಾ ನೀತಿಯಲ್ಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ರಾಜ್ಯಕ್ಕೆ ಫಾಕ್ಸ್-ಕಾನ್, ಜಿಂದಾಲ್, ಟೊಯೊಟಾ, ಏರ್ ಇಂಡಿಯಾ ಮುಂತಾದ ಪ್ರತಿಷ್ಠಿತ ಕಂಪನಿಗಳಿಂದ ₹1.15 ಲಕ್ಷ ಕೋಟಿ ಬಂಡವಾಳ ಹೂಡಿಕೆ ಹರಿದುಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.</p><p>ವಿಜಯಪುರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐ-ಫೋನ್ ಬಿಡಿಭಾಗಗಳ ತಯಾರಿಕೆ, ಪವನ ವಿದ್ಯುತ್, ಕಾರು ಉತ್ಪಾದನೆ ಮತ್ತು ವಿಮಾನಗಳ ದುರಸ್ತಿ ಹಾಗೂ ನಿರ್ವಹಣೆ ಇತ್ಯಾದಿ ಕ್ಷೇತ್ರಗಳಲ್ಲಿ ಈ ಹೂಡಿಕೆ ಆಗಿದೆ. ಇದರ ಜೊತೆಗೆ ಇನ್ನೂ ₹ 1 ಲಕ್ಷ ಕೋಟಿಗೂ ಹೆಚ್ಚಿನ ಹೂಡಿಕೆಯ ಖಾತ್ರಿ ರಾಜ್ಯಕ್ಕೆ ಸಿಕ್ಕಿದೆ ಎಂದರು.</p><p>ಫೆಬ್ರವರಿ 11 ರಿಂದ 14 ರವರೆಗೆ ಬೆಂಗಳೂರಿನಲ್ಲಿ ‘ಜಾಗತಿಕ ಹೂಡಿಕೆದಾರರ ಸಮಾವೇಶ’ ನಡೆಯಲಿದೆ. ಇದು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ವರದಾನವಾಗಲಿದೆ ಎಂದು ಹೇಳಿದರು.</p><p>ಬೆಂಗಳೂರು ನಗರದ ಜನತೆ ಮತ್ತು ಉದ್ಯಮಿಗಳ ಅನುಕೂಲಕ್ಕೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಇದರ ಸ್ಥಳ ಅಂತಿಮಗೊಳ್ಳಲಿದೆ ಎಂದರು.</p><p>ರಾಜ್ಯ ಸರ್ಕಾರವು ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರುತ್ತಿದ್ದು, ಇದರಲ್ಲಿ ರಫ್ತು ವಹಿವಾಟಿಗೆ ಆದ್ಯತೆ ಕೊಡಲಾಗಿದೆ. ಬಂಡವಾಳ ಹೂಡಿಕೆ. ಉದ್ಯೋಗ ಸೃಷ್ಟಿ, ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಕೈಗಾರಿಕಾ ಪ್ರಗತಿ. ಇವು ನಮ್ಮ ಮೂಲಮಂತ್ರಗಳಾಗಿವೆ ಎಂದರು.</p><p>ಮಹಿಳಾ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅಂತಹ ಸಂಸ್ಥೆಗಳಿಗೂ ಹೆಚ್ಚಿನ ರಿಯಾಯಿತಿ, ಸಂಶೋಧನೆ ಮತ್ತು ವಿನ್ಯಾಸ ಸಂಸ್ಥೆಗಳು ತಮ್ಮ ಉತ್ಪನ್ನಗಳನ್ನು ರಾಜ್ಯದಲ್ಲೇ ಉತ್ಪಾದನೆ ಮಾಡಿದರೆ ಅದಕ್ಕೊಂದು ವಿಶೇಷ ರಿಯಾಯಿತಿ ನೀಡುವ ವ್ಯವಸ್ಥೆ ಕೂಡ ಹೊಸ ಕೈಗಾರಿಕಾ ನೀತಿಯಲ್ಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>