<p><strong>ಬೆಂಗಳೂರು:</strong> ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನಿಗದಿ ಮಾಡಿರುವ ಮೀಸಲಾತಿ ಪ್ರಮಾಣವನ್ನು ಶೇ 10ರಿಂದ ಶೇ 15ಕ್ಕೆ ಹೆಚ್ಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಈ ಮೀಸಲಾತಿಯು ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಪಾರ್ಸಿಗಳಿಗೂ ಅನ್ವಯವಾಗುತ್ತದೆ ಎಂದರು.</p>.<p>‘ಅಲ್ಪಸಂಖ್ಯಾತರಲ್ಲಿ ವಸತಿಹೀನರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಕೇಂದ್ರ ಸರ್ಕಾರವೂ ಇದನ್ನು ಗಮನಿಸಿ ಸೂಚನೆಯನ್ನು ನೀಡಿದೆ. ಸಾಚಾರ್ ಸಮಿತಿಯೂ ತನ್ನ ವರದಿಯಲ್ಲಿ ಈ ಅಂಶವನ್ನು ಗುರುತಿಸಿದೆ. ನಮ್ಮ ಸರ್ಕಾರವು ಈ ಸಮುದಾಯದ ವಸತಿರಹಿತರನ್ನು ಗಮನದಲ್ಲಿಟ್ಟುಕೊಂಡು ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಮೀಸಲಾತಿ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಿದೆ’ ಎಂದರು.</p>.<p>‘ಮೀಸಲಾತಿ ಹೆಚ್ಚಳಕ್ಕೆ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿಲ್ಲ. ಒಂದು ಆದೇಶವನ್ನು ಹೊರಡಿಸಿದರೆ ಸಾಕು. ಶೇ 15 ಮೀಸಲಾತಿಯಲ್ಲಿ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧರಿಗೆ ಇಂತಿಷ್ಟು ಪ್ರಮಾಣ ಎಂದು ಪ್ರತ್ಯೇಕಿಸುವ ಪ್ರಶ್ನೆಯೇ ಇಲ್ಲ. ಈ ತೀರ್ಮಾನದಲ್ಲಿ ಯಾವುದೇ ರಾಜಕೀಯ ಇಲ್ಲ’ ಎಂದು ಪಾಟೀಲ ಅವರು ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<h2>ಖಾಲಿ ಮನೆಗೆ ಹೋಗಲು ಅಲ್ಪಸಂಖ್ಯಾತರು ಸಿದ್ಧ: ಡಿಕೆಶಿ</h2>.<p>ವಸತಿ ಇಲಾಖೆ ನಿರ್ಮಿಸುವ ವಸತಿಗಳಿಗೆ ಇತರೆ ಸಮುದಾಯದವರು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಬೆಂಗಳೂರಿನಲ್ಲೂ ಅನೇಕ ವಸತಿ ಸಮುಚ್ಚಯಗಳಲ್ಲಿ ಮನೆಗಳು ಖಾಲಿ ಇವೆ. ಈ ಮನೆಗಳಿಗೆ ಯಾರೂ ಅರ್ಜಿ ಹಾಕದೇ ಇದ್ದಾಗ ನಾವು ಏನು ಮಾಡಬೇಕು? ಮನೆಯನ್ನು ಹಾಗೇ ಖಾಲಿ ಬಿಡಬೇಕೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.</p>.<p>ಸಂಪುಟ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ಸರ್ಕಾರದ ತೀರ್ಮಾನವನ್ನು ಬಲವಾಗಿ ಸಮರ್ಥಿಸಿಕೊಂಡರು.</p>.<p>‘ಕೆಲವು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಡವರ ಪ್ರಮಾಣ ಶೇ 20ರಿಂದ 30ರಷ್ಟಿದೆ. ಹೀಗಾಗಿ ಅವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಈ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಸಹಾಯಧನ ತೀರಾ ಕಡಿಮೆ ಇದೆ. ಖಾಲಿ ಬಿದ್ದ ಮನೆಗಳನ್ನು ಯಾರಿಗೆ ನೀಡಬೇಕು’ ಎಂದು ಪ್ರಶ್ನಿಸಿದರು.</p>.<p>‘ಮಂಡ್ಯದಲ್ಲಿಯೂ ವಸತಿ ಸಮುಚ್ಚಯ ನಿರ್ಮಿಸಲಾಗಿದೆ. ಆದರೆ, ಅಲ್ಲಿಗೆ ಯಾರೂ ಹೋಗದೇ ಖಾಲಿ ಬಿದ್ದಿವೆ. ಈ ಮನೆಗಳಿಗೆ ಹೋಗಲು ಅಲ್ಪಸಂಖ್ಯಾತರು ಮುಂದಾಗಿದ್ದಾರೆ. ಹೀಗಾಗಿ ಸರ್ಕಾರ ಈ ತೀರ್ಮಾನ ಮಾಡಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನಿಗದಿ ಮಾಡಿರುವ ಮೀಸಲಾತಿ ಪ್ರಮಾಣವನ್ನು ಶೇ 10ರಿಂದ ಶೇ 15ಕ್ಕೆ ಹೆಚ್ಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಈ ಮೀಸಲಾತಿಯು ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಪಾರ್ಸಿಗಳಿಗೂ ಅನ್ವಯವಾಗುತ್ತದೆ ಎಂದರು.</p>.<p>‘ಅಲ್ಪಸಂಖ್ಯಾತರಲ್ಲಿ ವಸತಿಹೀನರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಕೇಂದ್ರ ಸರ್ಕಾರವೂ ಇದನ್ನು ಗಮನಿಸಿ ಸೂಚನೆಯನ್ನು ನೀಡಿದೆ. ಸಾಚಾರ್ ಸಮಿತಿಯೂ ತನ್ನ ವರದಿಯಲ್ಲಿ ಈ ಅಂಶವನ್ನು ಗುರುತಿಸಿದೆ. ನಮ್ಮ ಸರ್ಕಾರವು ಈ ಸಮುದಾಯದ ವಸತಿರಹಿತರನ್ನು ಗಮನದಲ್ಲಿಟ್ಟುಕೊಂಡು ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಮೀಸಲಾತಿ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಿದೆ’ ಎಂದರು.</p>.<p>‘ಮೀಸಲಾತಿ ಹೆಚ್ಚಳಕ್ಕೆ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿಲ್ಲ. ಒಂದು ಆದೇಶವನ್ನು ಹೊರಡಿಸಿದರೆ ಸಾಕು. ಶೇ 15 ಮೀಸಲಾತಿಯಲ್ಲಿ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧರಿಗೆ ಇಂತಿಷ್ಟು ಪ್ರಮಾಣ ಎಂದು ಪ್ರತ್ಯೇಕಿಸುವ ಪ್ರಶ್ನೆಯೇ ಇಲ್ಲ. ಈ ತೀರ್ಮಾನದಲ್ಲಿ ಯಾವುದೇ ರಾಜಕೀಯ ಇಲ್ಲ’ ಎಂದು ಪಾಟೀಲ ಅವರು ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<h2>ಖಾಲಿ ಮನೆಗೆ ಹೋಗಲು ಅಲ್ಪಸಂಖ್ಯಾತರು ಸಿದ್ಧ: ಡಿಕೆಶಿ</h2>.<p>ವಸತಿ ಇಲಾಖೆ ನಿರ್ಮಿಸುವ ವಸತಿಗಳಿಗೆ ಇತರೆ ಸಮುದಾಯದವರು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಬೆಂಗಳೂರಿನಲ್ಲೂ ಅನೇಕ ವಸತಿ ಸಮುಚ್ಚಯಗಳಲ್ಲಿ ಮನೆಗಳು ಖಾಲಿ ಇವೆ. ಈ ಮನೆಗಳಿಗೆ ಯಾರೂ ಅರ್ಜಿ ಹಾಕದೇ ಇದ್ದಾಗ ನಾವು ಏನು ಮಾಡಬೇಕು? ಮನೆಯನ್ನು ಹಾಗೇ ಖಾಲಿ ಬಿಡಬೇಕೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.</p>.<p>ಸಂಪುಟ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ಸರ್ಕಾರದ ತೀರ್ಮಾನವನ್ನು ಬಲವಾಗಿ ಸಮರ್ಥಿಸಿಕೊಂಡರು.</p>.<p>‘ಕೆಲವು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಡವರ ಪ್ರಮಾಣ ಶೇ 20ರಿಂದ 30ರಷ್ಟಿದೆ. ಹೀಗಾಗಿ ಅವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಈ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಸಹಾಯಧನ ತೀರಾ ಕಡಿಮೆ ಇದೆ. ಖಾಲಿ ಬಿದ್ದ ಮನೆಗಳನ್ನು ಯಾರಿಗೆ ನೀಡಬೇಕು’ ಎಂದು ಪ್ರಶ್ನಿಸಿದರು.</p>.<p>‘ಮಂಡ್ಯದಲ್ಲಿಯೂ ವಸತಿ ಸಮುಚ್ಚಯ ನಿರ್ಮಿಸಲಾಗಿದೆ. ಆದರೆ, ಅಲ್ಲಿಗೆ ಯಾರೂ ಹೋಗದೇ ಖಾಲಿ ಬಿದ್ದಿವೆ. ಈ ಮನೆಗಳಿಗೆ ಹೋಗಲು ಅಲ್ಪಸಂಖ್ಯಾತರು ಮುಂದಾಗಿದ್ದಾರೆ. ಹೀಗಾಗಿ ಸರ್ಕಾರ ಈ ತೀರ್ಮಾನ ಮಾಡಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>