<p><strong>ಕೊಪ್ಪಳ: </strong>ಭಾರತೀಯ ವೈದ್ಯಕೀಯ ಮಂಡಳಿಯ (ಎಂಸಿಐ) ಮಾನದಂಡ ಪಾಲಿಸದಿರುವುದರಿಂದ ಕೊಪ್ಪಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಕಿಮ್ಸ್) ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ರದ್ದುಗೊಳ್ಳುವ ಭೀತಿಯಿದ್ದು, ಪ್ರಥಮ ವರ್ಷದ 150 ಸರ್ಕಾರಿ ಸೀಟುಗಳು ಕೈತಪ್ಪುವ ಸಾಧ್ಯತೆ ಇದೆ.</p>.<p>ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ, ಬೋಧನಾ ಸಾಮಗ್ರಿ ಹಾಗೂ ವಿಶೇಷ ವೈದ್ಯಕೀಯ ಸೌಲಭ್ಯ ಇಲ್ಲದಿರುವುದನ್ನು ಮನಗಂಡು ಕೇಂದ್ರ ವೈದ್ಯಕೀಯ ಮಂಡಳಿಯು 2018-19ನೇ ಸಾಲಿನ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನಿರಾಕರಿಸಿದೆ.</p>.<p>ಮೂರು ವರ್ಷಗಳ ಹಿಂದೆ ಕಾಲೇಜು ಆರಂಭಗೊಂಡಿದ್ದು,ಮೂಲಸೌಕರ್ಯಗಳ ಕೊರತೆ ಇದೆ. ಶೈಕ್ಷಣಿಕ ಸೌಲಭ್ಯಗಳೂ ಸಹ ಸಮರ್ಪಕವಾಗಿಲ್ಲ.</p>.<p>‘ಅನುದಾನದ ಕೊರತೆಯ ನಡುವೆಯೂ ಇತರ ಮೂಲಗಳಿಂದ₹27 ಕೋಟಿ ಆರ್ಥಿಕ ನೆರವು ಪಡೆಯಲಾಗಿದೆ. ಒಟ್ಟು 450 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ.ಅವರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಬಜೆಟ್ನಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪನೆಗೆ ₹ 30 ಕೋಟಿ ಅನುದಾನ ನೀಡಿರುವುದು ಸಂತಸ ತಂದಿದೆ’ ಎಂದು ಕಿಮ್ಸ್ ನಿರ್ದೇಶಕ ಡಾ.ಶಂಕರ ಮಲಪುರೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಎ, ಬಿ, ಸಿ ದರ್ಜೆಯ 197 ಹುದ್ದೆಗಳಿದ್ದು, 122 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. 75 ಹುದ್ದೆಗಳು ಖಾಲಿ ಇವೆ. ಹೆಚ್ಚಿನವರು ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ.</p>.<p><strong>ಸುಪ್ರೀಂ ಕೋರ್ಟ್ಗೆ ಮೊರೆ</strong><br />ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಸೂಕ್ತ ಸೌಲಭ್ಯಗಳು ಇಲ್ಲ. ಆದ್ದರಿಂದ ಪ್ರವೇಶ ಅನುಮತಿಯನ್ನು ರದ್ದುಪಡಿಸಬೇಕು ಎಂದು ಭಾರತೀಯ ವೈದ್ಯಕೀಯ ಮಂಡಳಿ ಸದಸ್ಯರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.</p>.<p>‘ಹಿಂದುಳಿದ ಭಾಗದಲ್ಲಿ ಸ್ಥಾಪನೆಯಾಗಿರುವ ಕಾಲೇಜಿನಿಂದ ಹಲವು ಅನುಕೂಲಗಳಿವೆ. ಏಕಾಏಕಿ ಅನುಮತಿ ರದ್ದು ಪಡಿಸುವುದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ತೊಂದರೆಯಾಗುತ್ತದೆ. ಆದ್ದರಿಂದ ಅನುಮತಿ ನೀಡಬೇಕು’ ಎಂದು ಕಿಮ್ಸ್ ಆಡಳಿತ ಮಂಡಳಿ ಹೈಕೋರ್ಟ್ ಮೊರೆ ಹೋಗಿತ್ತು.</p>.<p>‘ಈ ವಿಷಯ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಹೆಚ್ಚಿನ ನಿರ್ದೇಶನ ಹಾಗೂ ಮಾರ್ಗದರ್ಶನಕ್ಕೆ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಬಹುದು’ ಎಂದು ಹೇಳಿ ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ.</p>.<p>‘ಕಾಲೇಜಿನ ವಾಸ್ತವ ಸ್ಥಿತಿ ತಿಳಿಸಿ, ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ. ಅಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ’ ಎಂದು ಕಿಮ್ಸ್ ನಿರ್ದೇಶಕ ಡಾ.ಶಂಕರ ಮಲಪುರೆ ತಿಳಿಸಿದರು.</p>.<p>***<br />ಕಾಲೇಜಿಗೆ ಅವಶ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲು ಖಾಸಗಿ ಸಂಸ್ಥೆ, ಉದ್ಯಮಿಗಳು ಹಾಗೂ ಗಣ್ಯವ್ಯಕ್ತಿಗಳಿಂದ ದಾನದ ರೂಪದಲ್ಲಿ ಹಣ ಪಡೆಯುವ ಯೋಚನೆ ಇದೆ<br /><em><strong>- ಡಾ.ಶಂಕರ ಮಲಪುರೆ, ನಿರ್ದೇಶಕ, ಕಿಮ್ಸ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಭಾರತೀಯ ವೈದ್ಯಕೀಯ ಮಂಡಳಿಯ (ಎಂಸಿಐ) ಮಾನದಂಡ ಪಾಲಿಸದಿರುವುದರಿಂದ ಕೊಪ್ಪಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಕಿಮ್ಸ್) ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ರದ್ದುಗೊಳ್ಳುವ ಭೀತಿಯಿದ್ದು, ಪ್ರಥಮ ವರ್ಷದ 150 ಸರ್ಕಾರಿ ಸೀಟುಗಳು ಕೈತಪ್ಪುವ ಸಾಧ್ಯತೆ ಇದೆ.</p>.<p>ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ, ಬೋಧನಾ ಸಾಮಗ್ರಿ ಹಾಗೂ ವಿಶೇಷ ವೈದ್ಯಕೀಯ ಸೌಲಭ್ಯ ಇಲ್ಲದಿರುವುದನ್ನು ಮನಗಂಡು ಕೇಂದ್ರ ವೈದ್ಯಕೀಯ ಮಂಡಳಿಯು 2018-19ನೇ ಸಾಲಿನ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನಿರಾಕರಿಸಿದೆ.</p>.<p>ಮೂರು ವರ್ಷಗಳ ಹಿಂದೆ ಕಾಲೇಜು ಆರಂಭಗೊಂಡಿದ್ದು,ಮೂಲಸೌಕರ್ಯಗಳ ಕೊರತೆ ಇದೆ. ಶೈಕ್ಷಣಿಕ ಸೌಲಭ್ಯಗಳೂ ಸಹ ಸಮರ್ಪಕವಾಗಿಲ್ಲ.</p>.<p>‘ಅನುದಾನದ ಕೊರತೆಯ ನಡುವೆಯೂ ಇತರ ಮೂಲಗಳಿಂದ₹27 ಕೋಟಿ ಆರ್ಥಿಕ ನೆರವು ಪಡೆಯಲಾಗಿದೆ. ಒಟ್ಟು 450 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ.ಅವರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಬಜೆಟ್ನಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪನೆಗೆ ₹ 30 ಕೋಟಿ ಅನುದಾನ ನೀಡಿರುವುದು ಸಂತಸ ತಂದಿದೆ’ ಎಂದು ಕಿಮ್ಸ್ ನಿರ್ದೇಶಕ ಡಾ.ಶಂಕರ ಮಲಪುರೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಎ, ಬಿ, ಸಿ ದರ್ಜೆಯ 197 ಹುದ್ದೆಗಳಿದ್ದು, 122 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. 75 ಹುದ್ದೆಗಳು ಖಾಲಿ ಇವೆ. ಹೆಚ್ಚಿನವರು ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ.</p>.<p><strong>ಸುಪ್ರೀಂ ಕೋರ್ಟ್ಗೆ ಮೊರೆ</strong><br />ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಸೂಕ್ತ ಸೌಲಭ್ಯಗಳು ಇಲ್ಲ. ಆದ್ದರಿಂದ ಪ್ರವೇಶ ಅನುಮತಿಯನ್ನು ರದ್ದುಪಡಿಸಬೇಕು ಎಂದು ಭಾರತೀಯ ವೈದ್ಯಕೀಯ ಮಂಡಳಿ ಸದಸ್ಯರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.</p>.<p>‘ಹಿಂದುಳಿದ ಭಾಗದಲ್ಲಿ ಸ್ಥಾಪನೆಯಾಗಿರುವ ಕಾಲೇಜಿನಿಂದ ಹಲವು ಅನುಕೂಲಗಳಿವೆ. ಏಕಾಏಕಿ ಅನುಮತಿ ರದ್ದು ಪಡಿಸುವುದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ತೊಂದರೆಯಾಗುತ್ತದೆ. ಆದ್ದರಿಂದ ಅನುಮತಿ ನೀಡಬೇಕು’ ಎಂದು ಕಿಮ್ಸ್ ಆಡಳಿತ ಮಂಡಳಿ ಹೈಕೋರ್ಟ್ ಮೊರೆ ಹೋಗಿತ್ತು.</p>.<p>‘ಈ ವಿಷಯ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಹೆಚ್ಚಿನ ನಿರ್ದೇಶನ ಹಾಗೂ ಮಾರ್ಗದರ್ಶನಕ್ಕೆ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಬಹುದು’ ಎಂದು ಹೇಳಿ ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ.</p>.<p>‘ಕಾಲೇಜಿನ ವಾಸ್ತವ ಸ್ಥಿತಿ ತಿಳಿಸಿ, ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ. ಅಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ’ ಎಂದು ಕಿಮ್ಸ್ ನಿರ್ದೇಶಕ ಡಾ.ಶಂಕರ ಮಲಪುರೆ ತಿಳಿಸಿದರು.</p>.<p>***<br />ಕಾಲೇಜಿಗೆ ಅವಶ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲು ಖಾಸಗಿ ಸಂಸ್ಥೆ, ಉದ್ಯಮಿಗಳು ಹಾಗೂ ಗಣ್ಯವ್ಯಕ್ತಿಗಳಿಂದ ದಾನದ ರೂಪದಲ್ಲಿ ಹಣ ಪಡೆಯುವ ಯೋಚನೆ ಇದೆ<br /><em><strong>- ಡಾ.ಶಂಕರ ಮಲಪುರೆ, ನಿರ್ದೇಶಕ, ಕಿಮ್ಸ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>