<p><strong>ಬೆಂಗಳೂರು: </strong>ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡು ಕೆಲಸ ಮಾಡುತ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.</p>.<p>ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಬಳಿಕ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು 'ಮುಂಬರುವ ಪಂಚಾಯತ್, ಜಿಲ್ಲಾ ಪಂಚಾಯತ್, ವಿಧಾನಪರಿಷತ್ ಚುನಾವಣೆಯಲ್ಲಿ ಶೇ. 80 ಸ್ಥಾನಗಳನ್ನು ಗೆಲ್ಲುವ ಗುರಿ ಇದೆ' ಎಂದರು.</p>.<p>‘ಕರಾವಳಿಯಿಂದ ಬಂದ ನನಗೆ ರಾಜ್ಯದ ಪರಿಚಯ ಇಲ್ಲ ಎಂಬ ಟೀಕೆಗಳು ಕೇಳಿ ಬಂದಿತ್ತು. ಕಳೆದ ಆರು ತಿಂಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ರಾಜಕೀಯ ಮತ್ತು ಸಾಮಾಜಿಕ ವಿಷಯಗಳ ಅವಲೋಕನ ಮಾಡಿದ್ದೇನೆ‘ ಎಂದು ಹೇಳಿದರು.</p>.<p>‘ಪಕ್ಷದ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. 55,700 ಮತಗಟ್ಟೆಗಳಲ್ಲಿ 40, 300 ಮತಗಟ್ಟೆಗಳ ಅಧ್ಯಕ್ಷರ ಚುನಾವಣೆ ನಡೆದಿದೆ. ಅದೇ ರೀತಿ 306 ಮಂಡಲಗಳಲ್ಲಿ 265 ಮಂಡಲಗಳು, 37 ಸಂಘಟನಾತ್ಮಕ ಜಿಲ್ಲೆಗಳಲ್ಲಿ 20 ಜಿಲ್ಲೆಗಳಲ್ಲಿ ಅಧ್ಯಕ್ಷರ ಆಯ್ಕೆ ನಡೆದಿದೆ‘ ಎಂದು ನಳಿನ್ ತಿಳಿಸಿದರು.</p>.<p>ಬೆಳಿಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಚಿವ ಸಿ.ಟಿ.ರವಿ ನಳಿನ್ ಕುಮಾರ್ ಕಟೀಲ್ ಅವರ ಆಯ್ಕೆಯನ್ನು ಪ್ರಕಟಿಸಿದರು. ಚುನಾವಣೆಗೆ ನಳಿನ್ ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡು ಕೆಲಸ ಮಾಡುತ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.</p>.<p>ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಬಳಿಕ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು 'ಮುಂಬರುವ ಪಂಚಾಯತ್, ಜಿಲ್ಲಾ ಪಂಚಾಯತ್, ವಿಧಾನಪರಿಷತ್ ಚುನಾವಣೆಯಲ್ಲಿ ಶೇ. 80 ಸ್ಥಾನಗಳನ್ನು ಗೆಲ್ಲುವ ಗುರಿ ಇದೆ' ಎಂದರು.</p>.<p>‘ಕರಾವಳಿಯಿಂದ ಬಂದ ನನಗೆ ರಾಜ್ಯದ ಪರಿಚಯ ಇಲ್ಲ ಎಂಬ ಟೀಕೆಗಳು ಕೇಳಿ ಬಂದಿತ್ತು. ಕಳೆದ ಆರು ತಿಂಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ರಾಜಕೀಯ ಮತ್ತು ಸಾಮಾಜಿಕ ವಿಷಯಗಳ ಅವಲೋಕನ ಮಾಡಿದ್ದೇನೆ‘ ಎಂದು ಹೇಳಿದರು.</p>.<p>‘ಪಕ್ಷದ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. 55,700 ಮತಗಟ್ಟೆಗಳಲ್ಲಿ 40, 300 ಮತಗಟ್ಟೆಗಳ ಅಧ್ಯಕ್ಷರ ಚುನಾವಣೆ ನಡೆದಿದೆ. ಅದೇ ರೀತಿ 306 ಮಂಡಲಗಳಲ್ಲಿ 265 ಮಂಡಲಗಳು, 37 ಸಂಘಟನಾತ್ಮಕ ಜಿಲ್ಲೆಗಳಲ್ಲಿ 20 ಜಿಲ್ಲೆಗಳಲ್ಲಿ ಅಧ್ಯಕ್ಷರ ಆಯ್ಕೆ ನಡೆದಿದೆ‘ ಎಂದು ನಳಿನ್ ತಿಳಿಸಿದರು.</p>.<p>ಬೆಳಿಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಚಿವ ಸಿ.ಟಿ.ರವಿ ನಳಿನ್ ಕುಮಾರ್ ಕಟೀಲ್ ಅವರ ಆಯ್ಕೆಯನ್ನು ಪ್ರಕಟಿಸಿದರು. ಚುನಾವಣೆಗೆ ನಳಿನ್ ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>