‘ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಗಳಲ್ಲಿ ವಾಯುಭಾರ ಕುಸಿತ ಆಗುವ ಸೂಚನೆ ಇದೆ. ಇದರಿಂದ ದಕ್ಷಿಣ ಒಳನಾಡು ಭಾಗಗಳಾದ ಕೊಡಗು, ಮೈಸೂರು, ಚಾಮರಾಜನಗರಗಳಲ್ಲಿ ಉತ್ತಮ ಮಳೆಯಾಗಲಿದೆ’ ಎಂದರು. ‘ಸದ್ಯ ಕರಾವಳಿ ಭಾಗದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಇನ್ನೂ 4ದಿನ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ’ ಎಂದರು.