<p><strong>ಬೆಂಗಳೂರು:</strong> ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ 19 ಲಕ್ಷ ಶೌಚಾಲಯಗಳು ನಾಪತ್ತೆಯಾಗಿವೆ.<br /> <br /> ‘ದಾಖಲೆಗಳ ಪ್ರಕಾರ ಕಳೆದ ಐದು ವರ್ಷಗಳಲ್ಲಿ 44 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಆದರೆ, ಈ ಪೈಕಿ 19 ಲಕ್ಷ ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ. ಕೇವಲ ದಾಖಲೆಗಳಲ್ಲಷ್ಟೇ ಈ ಶೌಚಾಲಯಗಳಿವೆ’ ಎಂದು ಗ್ರಾಮೀಣಾಭಿವೃದ್ಧಿ ಎಚ್.ಕೆ.ಪಾಟೀಲ ತಿಳಿಸಿದರು.<br /> <br /> ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿನೀಡಿ ಪಕ್ಷದ ಕಾರ್ಯಕರ್ತರ ಜೊತೆ ಸಂವಾದ ನಡೆಸಿದ ಬಳಿಕ ಪತ್ರಕರ್ತರ ಜೊತೆ ಅವರು ಮಾತನಾಡಿದರು.<br /> <br /> ಗಾಳಿ ಬಳಕೆಯ ಶೌಚಾಲಯ: ನೀರಿನ ಲಭ್ಯತೆ ಕಡಿಮೆ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಗಾಳಿಯ ಒತ್ತಡದಿಂದ ಕಾರ್ಯನಿರ್ವಹಿಸುವ ಶೌಚಾಲಯಗಳನ್ನು (ಪ್ರೆಷರ್ ಅಸಿಸ್ಟೆಡ್ ಟಾಯ್ಲೆಟ್) ನಿರ್ಮಿಸಲು ಇಲಾಖೆ ಚಿಂತನೆ ನಡೆಸಿದೆ.<br /> <br /> ಕಡಿಮೆ ವೆಚ್ಚದಲ್ಲಿ ಈ ರೀತಿಯ ಶೌಚಾಲಯಗಳನ್ನು ನಿರ್ಮಿಸುವ ವಿಧಾನಗಳ ಕುರಿತು ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗ ಅಧ್ಯಯನ ನಡೆಸುತ್ತಿದೆ. ಈ ವರ್ಷ ಆರು ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಹೊಂದಿದೆ ಎಂದರು.<br /> <br /> ಬಿಜೆಪಿ ಆಡಳಿತದ ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ₨ 3,500 ಕೋಟಿ ಅನುದಾನವನ್ನು ಬಳಕೆ ಮಾಡದೇ ಉಳಿಸಲಾಗಿತ್ತು. ಬಳಕೆ ಮಾಡಿದ ಅನುದಾನವನ್ನೂ ಮನಸ್ಸಿಗೆ ಬಂದಂತೆ ಹಂಚಿಕೆ ಮಾಡಲಾಗಿತ್ತು ಎಂದು ದೂರಿದರು.<br /> <br /> ಆಸ್ತಿ ನೋಂದಣಿ ತೊಡಕು ನಿವಾರಣೆ: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಆಸ್ತಿಗಳ ನೋಂದಣಿ ಪ್ರಕ್ರಿಯೆಯನ್ನು ಸರಾಗವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಸಚಿವರು ಭರವಸೆ ನೀಡಿದರು.<br /> <br /> ‘ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳ ನೋಂದಣಿಗೆ ಕಂಪ್ಯೂಟರ್ ಮೂಲಕ ಪಡೆದ ನಮೂನೆ 9 ಮತ್ತು 11ರ ಬಳಕೆ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ಪಂಚಾಯಿತಿಗಳಲ್ಲೂ ಶೀಘ್ರವಾಗಿ ಈ ದಾಖಲೆಗಳನ್ನು ವಿತರಿಸಲು ಅಗತ್ಯ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.<br /> <br /> ಸಚಿವರ ಜೊತೆಗಿನ ಸಂವಾದದ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಆಸ್ತಿ ನೋಂದಣಿಯಲ್ಲಿ ಆಗಿರುವ ಗೊಂದಲ ನಿವಾರಿಸುವಂತೆ ಒತ್ತಾಯಿಸಿದರು. ಈಗ ಉಂಟಾಗಿರುವ ಗೊಂದಲದ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಜನರು ತೀವ್ರ ತೊಂದರೆಗೆ ಒಳಗಾಗಿದ್ದಾರೆ ಎಂದೂ ದೂರಿದರು.<br /> <br /> ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಸ್ಥಿರಾಸ್ತಿಗಳ ನೋಂದಣಿಗೆ ಗ್ರಾಮ ಪಂಚಾಯಿತಿಗಳು ಕಂಪ್ಯೂಟರ್ ಮೂಲಕ ವಿತರಿಸಿದ ದಾಖಲೆಗಳನ್ನು ಬಳಸುವುದನ್ನು ಕಡ್ಡಾಯಗೊಳಿಸಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಇತ್ತೀಚೆಗೆ ಆದೇಶ ಹೊರಡಿಸಿತ್ತು.<br /> <br /> ಆದರೆ, ಹಲವು ಗ್ರಾಮ ಪಂಚಾಯತಿಗಳಲ್ಲಿ ಕಂಪ್ಯೂಟರ್ ಮೂಲಕ ದಾಖಲೆ ವಿತರಿಸುವ ವ್ಯವಸ್ಥೆಯೇ ಇಲ್ಲದ ಕಾರಣದಿಂದ ಸಮಸ್ಯೆ ಸೃಷ್ಟಿಯಾಗಿದೆ. ಬೆಂಗಳೂರು ನಗರದ ಹೊರವಲಯದ ಪ್ರದೇಶಗಳು ಹಾಗೂ ಪ್ರಮುಖ ನಗರಗಳ ಸುತ್ತಮುತ್ತಲಿನಲ್ಲಿ ಆಸ್ತಿಗಳ ನೋಂದಣಿಗೆ ತೊಡಕಾಗಿದೆ.<br /> <br /> <strong>ಮೊದಲ ಭೇಟಿ</strong><br /> ಎಲ್ಲ ಸಚಿವರೂ ಕೆಪಿಸಿಸಿ ಕಚೇರಿಗೆ ಅಗಾಗ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಈ ಹಿಂದೆ ಸೂಚನೆ ನೀಡಿದ್ದರು. ಅದರಂತೆ ಎಚ್.ಕೆ.ಪಾಟೀಲ ಅವರು ಗುರುವಾರ ಪಕ್ಷದ ಕಚೇರಿಗೆ ಭೇಟಿ ನೀಡಿದ್ದರು. ಸಚಿವರಾದ ಬಳಿಕ ಪಕ್ಷದ ಕಚೇರಿಗೆ ಇದು ಅವರ ಮೊದಲ ಭೇಟಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ 19 ಲಕ್ಷ ಶೌಚಾಲಯಗಳು ನಾಪತ್ತೆಯಾಗಿವೆ.<br /> <br /> ‘ದಾಖಲೆಗಳ ಪ್ರಕಾರ ಕಳೆದ ಐದು ವರ್ಷಗಳಲ್ಲಿ 44 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಆದರೆ, ಈ ಪೈಕಿ 19 ಲಕ್ಷ ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ. ಕೇವಲ ದಾಖಲೆಗಳಲ್ಲಷ್ಟೇ ಈ ಶೌಚಾಲಯಗಳಿವೆ’ ಎಂದು ಗ್ರಾಮೀಣಾಭಿವೃದ್ಧಿ ಎಚ್.ಕೆ.ಪಾಟೀಲ ತಿಳಿಸಿದರು.<br /> <br /> ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿನೀಡಿ ಪಕ್ಷದ ಕಾರ್ಯಕರ್ತರ ಜೊತೆ ಸಂವಾದ ನಡೆಸಿದ ಬಳಿಕ ಪತ್ರಕರ್ತರ ಜೊತೆ ಅವರು ಮಾತನಾಡಿದರು.<br /> <br /> ಗಾಳಿ ಬಳಕೆಯ ಶೌಚಾಲಯ: ನೀರಿನ ಲಭ್ಯತೆ ಕಡಿಮೆ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಗಾಳಿಯ ಒತ್ತಡದಿಂದ ಕಾರ್ಯನಿರ್ವಹಿಸುವ ಶೌಚಾಲಯಗಳನ್ನು (ಪ್ರೆಷರ್ ಅಸಿಸ್ಟೆಡ್ ಟಾಯ್ಲೆಟ್) ನಿರ್ಮಿಸಲು ಇಲಾಖೆ ಚಿಂತನೆ ನಡೆಸಿದೆ.<br /> <br /> ಕಡಿಮೆ ವೆಚ್ಚದಲ್ಲಿ ಈ ರೀತಿಯ ಶೌಚಾಲಯಗಳನ್ನು ನಿರ್ಮಿಸುವ ವಿಧಾನಗಳ ಕುರಿತು ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗ ಅಧ್ಯಯನ ನಡೆಸುತ್ತಿದೆ. ಈ ವರ್ಷ ಆರು ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಹೊಂದಿದೆ ಎಂದರು.<br /> <br /> ಬಿಜೆಪಿ ಆಡಳಿತದ ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ₨ 3,500 ಕೋಟಿ ಅನುದಾನವನ್ನು ಬಳಕೆ ಮಾಡದೇ ಉಳಿಸಲಾಗಿತ್ತು. ಬಳಕೆ ಮಾಡಿದ ಅನುದಾನವನ್ನೂ ಮನಸ್ಸಿಗೆ ಬಂದಂತೆ ಹಂಚಿಕೆ ಮಾಡಲಾಗಿತ್ತು ಎಂದು ದೂರಿದರು.<br /> <br /> ಆಸ್ತಿ ನೋಂದಣಿ ತೊಡಕು ನಿವಾರಣೆ: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಆಸ್ತಿಗಳ ನೋಂದಣಿ ಪ್ರಕ್ರಿಯೆಯನ್ನು ಸರಾಗವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಸಚಿವರು ಭರವಸೆ ನೀಡಿದರು.<br /> <br /> ‘ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳ ನೋಂದಣಿಗೆ ಕಂಪ್ಯೂಟರ್ ಮೂಲಕ ಪಡೆದ ನಮೂನೆ 9 ಮತ್ತು 11ರ ಬಳಕೆ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ಪಂಚಾಯಿತಿಗಳಲ್ಲೂ ಶೀಘ್ರವಾಗಿ ಈ ದಾಖಲೆಗಳನ್ನು ವಿತರಿಸಲು ಅಗತ್ಯ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.<br /> <br /> ಸಚಿವರ ಜೊತೆಗಿನ ಸಂವಾದದ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಆಸ್ತಿ ನೋಂದಣಿಯಲ್ಲಿ ಆಗಿರುವ ಗೊಂದಲ ನಿವಾರಿಸುವಂತೆ ಒತ್ತಾಯಿಸಿದರು. ಈಗ ಉಂಟಾಗಿರುವ ಗೊಂದಲದ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಜನರು ತೀವ್ರ ತೊಂದರೆಗೆ ಒಳಗಾಗಿದ್ದಾರೆ ಎಂದೂ ದೂರಿದರು.<br /> <br /> ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಸ್ಥಿರಾಸ್ತಿಗಳ ನೋಂದಣಿಗೆ ಗ್ರಾಮ ಪಂಚಾಯಿತಿಗಳು ಕಂಪ್ಯೂಟರ್ ಮೂಲಕ ವಿತರಿಸಿದ ದಾಖಲೆಗಳನ್ನು ಬಳಸುವುದನ್ನು ಕಡ್ಡಾಯಗೊಳಿಸಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಇತ್ತೀಚೆಗೆ ಆದೇಶ ಹೊರಡಿಸಿತ್ತು.<br /> <br /> ಆದರೆ, ಹಲವು ಗ್ರಾಮ ಪಂಚಾಯತಿಗಳಲ್ಲಿ ಕಂಪ್ಯೂಟರ್ ಮೂಲಕ ದಾಖಲೆ ವಿತರಿಸುವ ವ್ಯವಸ್ಥೆಯೇ ಇಲ್ಲದ ಕಾರಣದಿಂದ ಸಮಸ್ಯೆ ಸೃಷ್ಟಿಯಾಗಿದೆ. ಬೆಂಗಳೂರು ನಗರದ ಹೊರವಲಯದ ಪ್ರದೇಶಗಳು ಹಾಗೂ ಪ್ರಮುಖ ನಗರಗಳ ಸುತ್ತಮುತ್ತಲಿನಲ್ಲಿ ಆಸ್ತಿಗಳ ನೋಂದಣಿಗೆ ತೊಡಕಾಗಿದೆ.<br /> <br /> <strong>ಮೊದಲ ಭೇಟಿ</strong><br /> ಎಲ್ಲ ಸಚಿವರೂ ಕೆಪಿಸಿಸಿ ಕಚೇರಿಗೆ ಅಗಾಗ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಈ ಹಿಂದೆ ಸೂಚನೆ ನೀಡಿದ್ದರು. ಅದರಂತೆ ಎಚ್.ಕೆ.ಪಾಟೀಲ ಅವರು ಗುರುವಾರ ಪಕ್ಷದ ಕಚೇರಿಗೆ ಭೇಟಿ ನೀಡಿದ್ದರು. ಸಚಿವರಾದ ಬಳಿಕ ಪಕ್ಷದ ಕಚೇರಿಗೆ ಇದು ಅವರ ಮೊದಲ ಭೇಟಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>