ರಾಜ್ಯ ಮುಖ್ಯ ಕಾರ್ಯದರ್ಶಿಗೆ (ಸಿ.ಎಸ್) ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿರುವ ಸಮಿತಿಯ ಪದಾಧಿಕಾರಿಗಳು, ‘ಬಿ.ಕೆ. ಪವಿತ್ರ ಪ್ರಕರಣದಲ್ಲಿ ಈ ಹಿಂದೆ ನೀಡಿದ್ದ ತೀರ್ಪು ಅನ್ವಯ ಎಸ್.ಟಿ, ಎಸ್.ಟಿ ನೌಕರರನ್ನು ಹಿಂಬಡ್ತಿಗೊಳಿಸಿ ನೀಡಿದ್ದ ಆದೇಶವನ್ನು ಎರಡು ದಿನಗಳ ಒಳಗೆ ವಾಪಸ್ ಪಡೆಯಬೇಕು. 15 ದಿನಗಳ ಒಳಗೆ ಎಲ್ಲ ಇಲಾಖೆಗಳ ಜ್ಯೇಷ್ಠತಾ ಪಟ್ಟಿಯನ್ನು ಪುನರ್ಅವಲೋಕಿಸಬೇಕು’ ಎಂದು ಆಗ್ರಹಿಸಿದ್ದಾರೆ.