<p><strong>ತುಮಕೂರು:</strong> ತುಮಕೂರು, ಗುಬ್ಬಿ ಮತ್ತು ಕುಣಿಗಲ್ ತಾಲ್ಲೂಕಿನ ಜನರನ್ನು ಬೆಚ್ಚಿ ಬೀಳಿಸಿರುವ ನರಹಂತಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಹೆಬ್ಬೂರು, ಸಿ.ಎಸ್.ಪುರ ಹೋಬಳಿ ಹಾಗೂ ಕುಣಿಗಲ್ ತಾಲ್ಲೂಕಿನ ದೊಡ್ಡಮಳಲವಾಡಿ, ಚಿಕ್ಕಮಳಲವಾಡಿ ಭಾಗದಲ್ಲಿ 20 ಬೋನ್ಗಳನ್ನು ಇಟ್ಟಿದೆ. ಚಲನವಲನಗಳನ್ನು ಗಮನಿಸಲು 36 ಕಡೆಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ.</p>.<p>ಆದರೂ ಚಿರತೆ ಸೆರೆ ಅರಣ್ಯ ಇಲಾಖೆಗೆ ಸವಾಲಾಗಿದೆ. ಈ ಮೂರು ತಾಲ್ಲೂಕುಗಳು ಕೂಡುವ ಹೆಬ್ಬೂರು ಹೋಬಳಿ ಸುತ್ತಮುತ್ತ ಚಿರತೆ ದಾಳಿಗೆ ಮೂರು ತಿಂಗಳಲ್ಲಿ ಮೂರು ಮಂದಿ ಬಲಿಯಾಗಿದ್ದಾರೆ. ಇಲ್ಲಿನ ಜನರು ದಿನ ಬೆಳಗಾದರೆ ಚಿರತೆ ದಾಳಿಗೆ ಹಸು ಬಲಿ, ಕುರಿ ಬಲಿ ಎನ್ನುವ ಸುದ್ದಿಗಳನ್ನು ಕೇಳುತ್ತಿದ್ದರು.</p>.<p>ಈಗ ಚಿರತೆಗೆ ಮನುಷ್ಯರು ಬಲಿ ಆಗುತ್ತಿರುವುದು ಆತಂಕವನ್ನು ಹೆಚ್ಚಿಸಿದೆ. ಶುಕ್ರವಾರ ಸಂಜೆ 6.45ರ ಸುಮಾರಿನಲ್ಲಿ ಹೆಬ್ಬೂರು ಹೋಬಳಿಯ ಕಮ್ಮನಹಳ್ಳಿಯಲ್ಲಿ ಚಿರತೆಯ ಚಲನವಲನ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೇ ಚಿರತೆ ಬಲಿಗಳಿಗೆ ಕಾರಣ ಎನ್ನಲಾಗಿದೆ.</p>.<p>‘ನಾಲ್ಕು ಕಡೆ ಕ್ಯಾಮೆರಾಗಳಲ್ಲಿ ಚಿರತೆ ಚಲನವಲನಗಳು ಸೆರೆ ಆಗಿವೆ. ಯಾವ ಚಿರತೆ ಮನುಷ್ಯರ ಮೇಲೆ ದಾಳಿ ನಡೆಸುತ್ತಿದೆ ಎನ್ನುವುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತುಮಕೂರು, ಗುಬ್ಬಿ ಮತ್ತು ಕುಣಿಗಲ್ ತಾಲ್ಲೂಕಿನ ಜನರನ್ನು ಬೆಚ್ಚಿ ಬೀಳಿಸಿರುವ ನರಹಂತಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಹೆಬ್ಬೂರು, ಸಿ.ಎಸ್.ಪುರ ಹೋಬಳಿ ಹಾಗೂ ಕುಣಿಗಲ್ ತಾಲ್ಲೂಕಿನ ದೊಡ್ಡಮಳಲವಾಡಿ, ಚಿಕ್ಕಮಳಲವಾಡಿ ಭಾಗದಲ್ಲಿ 20 ಬೋನ್ಗಳನ್ನು ಇಟ್ಟಿದೆ. ಚಲನವಲನಗಳನ್ನು ಗಮನಿಸಲು 36 ಕಡೆಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ.</p>.<p>ಆದರೂ ಚಿರತೆ ಸೆರೆ ಅರಣ್ಯ ಇಲಾಖೆಗೆ ಸವಾಲಾಗಿದೆ. ಈ ಮೂರು ತಾಲ್ಲೂಕುಗಳು ಕೂಡುವ ಹೆಬ್ಬೂರು ಹೋಬಳಿ ಸುತ್ತಮುತ್ತ ಚಿರತೆ ದಾಳಿಗೆ ಮೂರು ತಿಂಗಳಲ್ಲಿ ಮೂರು ಮಂದಿ ಬಲಿಯಾಗಿದ್ದಾರೆ. ಇಲ್ಲಿನ ಜನರು ದಿನ ಬೆಳಗಾದರೆ ಚಿರತೆ ದಾಳಿಗೆ ಹಸು ಬಲಿ, ಕುರಿ ಬಲಿ ಎನ್ನುವ ಸುದ್ದಿಗಳನ್ನು ಕೇಳುತ್ತಿದ್ದರು.</p>.<p>ಈಗ ಚಿರತೆಗೆ ಮನುಷ್ಯರು ಬಲಿ ಆಗುತ್ತಿರುವುದು ಆತಂಕವನ್ನು ಹೆಚ್ಚಿಸಿದೆ. ಶುಕ್ರವಾರ ಸಂಜೆ 6.45ರ ಸುಮಾರಿನಲ್ಲಿ ಹೆಬ್ಬೂರು ಹೋಬಳಿಯ ಕಮ್ಮನಹಳ್ಳಿಯಲ್ಲಿ ಚಿರತೆಯ ಚಲನವಲನ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೇ ಚಿರತೆ ಬಲಿಗಳಿಗೆ ಕಾರಣ ಎನ್ನಲಾಗಿದೆ.</p>.<p>‘ನಾಲ್ಕು ಕಡೆ ಕ್ಯಾಮೆರಾಗಳಲ್ಲಿ ಚಿರತೆ ಚಲನವಲನಗಳು ಸೆರೆ ಆಗಿವೆ. ಯಾವ ಚಿರತೆ ಮನುಷ್ಯರ ಮೇಲೆ ದಾಳಿ ನಡೆಸುತ್ತಿದೆ ಎನ್ನುವುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>