<p><strong>ಬೆಂಗಳೂರು</strong>: ಅರಣ್ಯ ಪ್ರದೇಶದಿಂದ ಹೊರಗೆ ಉಳಿದಿರುವ 200ಕ್ಕೂ ಹೆಚ್ಚು ಆನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಮರಳಿಸಲು ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಾಗುವುದು. ಅದಕ್ಕಾಗಿ ಪ್ರತ್ಯೇಕ ಕೇಂದ್ರ ತೆರೆಯಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ವಿಧಾನಪರಿಷತ್ನಲ್ಲಿ ಬಿಜೆಪಿಯ ಶಾಂತಾರಾಮ ಬುಡ್ನಸಿದ್ಧಿ ಅವರ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ಮಾನವ–ಆನೆ ಸಂಘರ್ಷ ತಡೆಯಲು ರೈಲ್ವೆ ಹಳಿಗಳನ್ನು ಬಳಸಿಕೊಂಡು ಬ್ಯಾರಿಕೇಡ್ ನಿರ್ಮಿಸಲಾಗುತ್ತಿದೆ. ಕಾಡಿನಿಂದ ಜನವಸತಿ ಪ್ರದೇಶಕ್ಕೆ ಬರುವ ಆನೆಗಳ ತಡೆಗೆ ಈ ಯೋಜನೆ ಸಹಕಾರಿಯಾಗಿದೆ. ಆದರೆ, ಕಾಡಿನಿಂದ ಹೊರಬಂದು ಕಾಫಿ ತೋಟಗಳು, ಜನವಸತಿ ಪ್ರದೇಶಗಳ ಸುತ್ತ ಹಲವು ವರ್ಷಗಳಿಂದ ಬೀಡುಬಿಟ್ಟಿರುವ ಆನೆಗಳನ್ನು ಕಾಡಿಗೆ ಮರಳಿಸಬೇಕಿದೆ. ಇದು ಅತ್ಯಂತ ಕಷ್ಟಕರ ಕಾರ್ಯಾಚರಣೆ ಎಂದರು.</p>.<p>ಕಾಡಿನಿಂದ ಸೊಪ್ಪು, ದರಗು, ಮೇವು ಸಂಗ್ರಹಿಸುವ ಅರಣ್ಯ ವಾಸಿಗಳಿಗೆ ಕಿರುಕುಳ ಆಗದಂತೆ ಕ್ರಮ ಕೈಗೊಳ್ಳಲು ಸ್ಥಳೀಯರ ಜತೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸಭೆ ನಡೆಸಲು ಸೂಚಿಸಲಾಗುವುದು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅರಣ್ಯ ಪ್ರದೇಶದಿಂದ ಹೊರಗೆ ಉಳಿದಿರುವ 200ಕ್ಕೂ ಹೆಚ್ಚು ಆನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಮರಳಿಸಲು ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಾಗುವುದು. ಅದಕ್ಕಾಗಿ ಪ್ರತ್ಯೇಕ ಕೇಂದ್ರ ತೆರೆಯಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.</p>.<p>ವಿಧಾನಪರಿಷತ್ನಲ್ಲಿ ಬಿಜೆಪಿಯ ಶಾಂತಾರಾಮ ಬುಡ್ನಸಿದ್ಧಿ ಅವರ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ಮಾನವ–ಆನೆ ಸಂಘರ್ಷ ತಡೆಯಲು ರೈಲ್ವೆ ಹಳಿಗಳನ್ನು ಬಳಸಿಕೊಂಡು ಬ್ಯಾರಿಕೇಡ್ ನಿರ್ಮಿಸಲಾಗುತ್ತಿದೆ. ಕಾಡಿನಿಂದ ಜನವಸತಿ ಪ್ರದೇಶಕ್ಕೆ ಬರುವ ಆನೆಗಳ ತಡೆಗೆ ಈ ಯೋಜನೆ ಸಹಕಾರಿಯಾಗಿದೆ. ಆದರೆ, ಕಾಡಿನಿಂದ ಹೊರಬಂದು ಕಾಫಿ ತೋಟಗಳು, ಜನವಸತಿ ಪ್ರದೇಶಗಳ ಸುತ್ತ ಹಲವು ವರ್ಷಗಳಿಂದ ಬೀಡುಬಿಟ್ಟಿರುವ ಆನೆಗಳನ್ನು ಕಾಡಿಗೆ ಮರಳಿಸಬೇಕಿದೆ. ಇದು ಅತ್ಯಂತ ಕಷ್ಟಕರ ಕಾರ್ಯಾಚರಣೆ ಎಂದರು.</p>.<p>ಕಾಡಿನಿಂದ ಸೊಪ್ಪು, ದರಗು, ಮೇವು ಸಂಗ್ರಹಿಸುವ ಅರಣ್ಯ ವಾಸಿಗಳಿಗೆ ಕಿರುಕುಳ ಆಗದಂತೆ ಕ್ರಮ ಕೈಗೊಳ್ಳಲು ಸ್ಥಳೀಯರ ಜತೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸಭೆ ನಡೆಸಲು ಸೂಚಿಸಲಾಗುವುದು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>