ನಗರದ ಮಿಲಾಗ್ರಿಸ್ ಬಳಿಯ ಎಡೋರೇಶನ್ ಮಾನೆಸ್ಟ್ರಿಯಲ್ಲಿ 2008ರ ಸೆಪ್ಟೆಂಬರ್ 14ರಂದು ಧರ್ಮ ಭಗಿನಿಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ದಾಳಿ ನಡೆಸಿದ್ದ ಗುಂಪು ಕಿಟಕಿ ಗಾಜುಗಳನ್ನು ಪುಡಿ ಮಾಡಿತ್ತು. ಪೂಜಾಪೀಠ ಮತ್ತು ಏಸು ಕ್ರಿಸ್ತನ ಮೂರ್ತಿಯನ್ನು ಧ್ವಂಸ ಮಾಡಿತ್ತು. ಅದೇ ದಿನಗಳಲ್ಲಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಉಡುಪಿ ಸೇರಿದಂತೆ ಹಲವೆಡೆ ಇಂತಹ ಘಟನೆಗಳು ನಡದಿದ್ದವು.