<p><strong>ಬೆಂಗಳೂರು:</strong> ಮಂಗಳೂರಿನಲ್ಲಿ ನಡೆದ ಭಟ್ಕಳದ ಯುವ ವಕೀಲ ನೌಶಾದ್ ಕಾಸೀಂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು ಭೂಗತ ಪಾತಕಿ ರವಿ ಪೂಜಾರಿಯನ್ನು ವಿಚಾರಣೆ ನಡೆಸಲಿದ್ದಾರೆ.</p>.<p>ಈ ಪ್ರಕರಣದ ತನಿಖೆಯನ್ನು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ (ಡಿಜಿ ಆ್ಯಂಡ್ ಐಜಿಪಿ) ಅವರು ಸಿಸಿಬಿಗೆ ವಹಿಸಿದ್ದಾರೆ. ಹೀಗಾಗಿ, ಈ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸರು ಸಿಸಿಬಿಗೆ ವರ್ಗಾಯಿಸಿದ್ದಾರೆ.</p>.<p>‘ನೌಶಾದ್ ಕೊಲೆ ಪ್ರಕರಣದ ತನಿಖೆಗಾಗಿ ಪೂಜಾರಿಯನ್ನು 10 ದಿನ ಅವಧಿಗೆ ವಶಕ್ಕೆ ಪಡೆಯಲಾಗಿದೆ’ ಎಂದ ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<p>2009 ಏಪ್ರಿಲ್ 9ರಂದು ಮಂಗಳೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ನೌಶಾದ್ ಕೊಲೆ ನಡೆದಿತ್ತು. ಭೂಗತ ಪಾತಕಿ ರಶೀದ್ ಮಲಬಾರಿ ಪರವಾಗಿ ನೌಶಾದ್ ವಾದಿಸಿದ್ದರು ಎಂಬ ಕಾರಣಕ್ಕೆ .ವಿ ಪೂಜಾರಿಯ ಆಣತಿಯಂತೆ ಕೊಲೆ ಮಾಡಲಾಗಿತ್ತು ಎಂಬ ಆರೋಪವಿದೆ. ಪ್ರಕರಣದಲ್ಲಿ ಒಟ್ಟು 12 ಮಂದಿ ಆರೋಪಿಗಳೆಂದು ಹೆಸರಿಸಲಾಗಿತ್ತು. ಆ ಪೈಕಿ, ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಏಳು ಮಂದಿಯಲ್ಲಿ ಶಿವಪ್ರಕಾಶ್ ಮತ್ತು ದಿಲ್ಲಿಯ ರವಿ ಶುಕ್ವಾನಿ ಎಂಬಿಬ್ಬರ ಮೇಲಿನ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿತ್ತು. ಐವರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಂಗಳೂರಿನಲ್ಲಿ ನಡೆದ ಭಟ್ಕಳದ ಯುವ ವಕೀಲ ನೌಶಾದ್ ಕಾಸೀಂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು ಭೂಗತ ಪಾತಕಿ ರವಿ ಪೂಜಾರಿಯನ್ನು ವಿಚಾರಣೆ ನಡೆಸಲಿದ್ದಾರೆ.</p>.<p>ಈ ಪ್ರಕರಣದ ತನಿಖೆಯನ್ನು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ (ಡಿಜಿ ಆ್ಯಂಡ್ ಐಜಿಪಿ) ಅವರು ಸಿಸಿಬಿಗೆ ವಹಿಸಿದ್ದಾರೆ. ಹೀಗಾಗಿ, ಈ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸರು ಸಿಸಿಬಿಗೆ ವರ್ಗಾಯಿಸಿದ್ದಾರೆ.</p>.<p>‘ನೌಶಾದ್ ಕೊಲೆ ಪ್ರಕರಣದ ತನಿಖೆಗಾಗಿ ಪೂಜಾರಿಯನ್ನು 10 ದಿನ ಅವಧಿಗೆ ವಶಕ್ಕೆ ಪಡೆಯಲಾಗಿದೆ’ ಎಂದ ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<p>2009 ಏಪ್ರಿಲ್ 9ರಂದು ಮಂಗಳೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ನೌಶಾದ್ ಕೊಲೆ ನಡೆದಿತ್ತು. ಭೂಗತ ಪಾತಕಿ ರಶೀದ್ ಮಲಬಾರಿ ಪರವಾಗಿ ನೌಶಾದ್ ವಾದಿಸಿದ್ದರು ಎಂಬ ಕಾರಣಕ್ಕೆ .ವಿ ಪೂಜಾರಿಯ ಆಣತಿಯಂತೆ ಕೊಲೆ ಮಾಡಲಾಗಿತ್ತು ಎಂಬ ಆರೋಪವಿದೆ. ಪ್ರಕರಣದಲ್ಲಿ ಒಟ್ಟು 12 ಮಂದಿ ಆರೋಪಿಗಳೆಂದು ಹೆಸರಿಸಲಾಗಿತ್ತು. ಆ ಪೈಕಿ, ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಏಳು ಮಂದಿಯಲ್ಲಿ ಶಿವಪ್ರಕಾಶ್ ಮತ್ತು ದಿಲ್ಲಿಯ ರವಿ ಶುಕ್ವಾನಿ ಎಂಬಿಬ್ಬರ ಮೇಲಿನ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿತ್ತು. ಐವರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>