<p><strong>ಬೆಂಗಳೂರು: </strong>ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಗೆ ವಿವಿಧ ಮಾದರಿಯ 2499 ಹೊಸ ಬಸ್ಗಳು ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<br /> <br /> ವಿಧಾನಸೌಧದ ಮುಂಭಾಗ 241 ನಗರ ಸಾರಿಗೆ ಬಸ್ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಬಳಿಕ ಮಾತನಾಡಿದ ಅವರು, ಹೊಸ ಬಸ್ಗಳು ಮುಂದಿನ ಆರ್ಥಿಕ ವರ್ಷದಲ್ಲಿ ಪ್ರಯಾಣಿಕರ ಸೇವೆಗೆ ಲಭ್ಯವಾಗಲಿವೆ ಎಂದು ಹೇಳಿದರು.<br /> <br /> ಮೂರು ವರ್ಷದ ಅವಧಿಯಲ್ಲಿ 26,660 ಜನರಿಗೆ ಕೆಎಸ್ಆರ್ಟಿಸಿ ಉದ್ಯೋಗ ಕಲ್ಪಿಸಿದೆ. ದೇಶದಲ್ಲಿ ಅತ್ಯುತ್ತಮ ಸಾರಿಗೆ ವ್ಯವಸ್ಥೆ ಹೊಂದಿರುವ ಹೆಗ್ಗಳಿಕೆಗೆ ರಾಜ್ಯ ಸಾರಿಗೆ ಸಂಸ್ಥೆ ಪಾತ್ರವಾಗಿದೆ ಎಂದರು.<br /> <br /> ನೌಕರರ ವೇತನವನ್ನು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಪರಿಷ್ಕರಣೆ ಮಾಡಲಾಗುತ್ತಿದೆ. ಶೇ 1ರಷ್ಟು ವೇತನ ಹೆಚ್ಚಳ ಮಾಡಿದರೆ ಸರ್ಕಾರಕ್ಕೆ ₹ 150 ಕೋಟಿ ಹೊರೆಯಾಗಲಿದೆ. ಆ ಭಾರ ತಡೆದುಕೊಂಡು ಇದೇ ಮೊದಲ ಬಾರಿಗೆ ಶೇ 12.5ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. ನೌಕರರು ಪ್ರಯಾಣಿಕರ ಹಿತಕ್ಕಾಗಿ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆ ಹೆಸರು ತರಬೇಕು ಎಂದು ಸಲಹೆ ಮಾಡಿದರು.<br /> <br /> ಈಗಿರುವ ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಜೊತೆಗೆ ಹೊಸ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು. ಎಲ್ಲಾ ಬಸ್ ಡಿಪೋ, ಬಸ್ ನಿಲ್ದಾಣ, ಪ್ರಾದೇಶಿಕ ಹಾಗೂ ಎಂದು ಅವರ ಸಿಸಿ ಟಿವಿ ಕ್ಯಾಮರಾ ಅಳವಡಿಸಲಾಗುತ್ತದೆ ಎಂದರು.<br /> <br /> ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ರಾಜ್ಯದ 38 ನಗರಗಳಿಗೆ 637 ನಗರ ಸಾರಿಗೆ ಬಸ್ಗಳ ಸೇವೆ ಆರಂಭಿಸಲಾಗುತ್ತಿದೆ. ಅದರಲ್ಲಿ ಮೊದಲ ಹಂತದಲ್ಲಿ 241 ಬಸ್ಗಳನ್ನು ಮುಖ್ಯಮಂತ್ರಿ ಅವರು ಸೇವೆಗೆ ಸಮರ್ಪಿಸಿದ್ದಾರೆ.<br /> <br /> ಇವು ಹಾಸನ, ಶಿವಮೊಗ್ಗ, ಮೈಸೂರು, ತುಮಕೂರು, ಮಂಡ್ಯ, ರಾಮನಗರ, ಕೋಲಾರ, ದಾವಣಗೆರೆ, ಭದ್ರಾವತಿ, ಚಿತ್ರದುರ್ಗ, ಮಂಗಳೂರು ಮತ್ತು ಉಡುಪಿ ಸೇರಿದಂತೆ 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ ಸಂಚರಿಸಲಿವೆ ಎಂದರು.<br /> <br /> ರಾಜ್ಯದ ಸಾರಿಗೆ ಸಂಸ್ಥೆ ಕಾರ್ಯ ನಿರ್ವಹಣೆ ಉತ್ತಮವಾಗಿದ್ದು, ಈವರಗೆ ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಮಟ್ಟದ 215 ಪ್ರಶಸ್ತಿಗಳು ಬಂದಿವೆ. ಅದರಲ್ಲಿ ಕೆಎಸ್ಆರ್ಟಿಸಿಗೆ 131 ಪ್ರಶಸ್ತಿಗಳು ಲಭಿಸಿವೆ ಅವರು ವಿವರಿಸಿದರು.<br /> <br /> ಇದೇ ಸಂದರ್ಭದಲ್ಲಿ ಕಲಾಸಿಪಾಳ್ಯದಲ್ಲಿ ₹ 60 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ, ಅಂಜನಾಪುರ ಬಸ್ ಡಿಪೋ ಮತ್ತು ಗುಂಜೂರಿನಲ್ಲಿ ₹ 7.79 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಸಿಬ್ಬಂದಿ ವಸತಿ ಗೃಹಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.</p>.<p><strong>ವಿಶೇಷ ಸೌಲಭ್ಯಗಳು</strong><br /> * ಚಾಲನಾ ಸುರಕ್ಷತೆಗಾಗಿ ಹಿಂಬದಿ ನೋಟದ ಕ್ಯಾಮೆರಾ<br /> * ಪ್ರಯಾಣಿಕರ ಸುರಕ್ಷತೆಗಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ<br /> * ಧ್ವನಿ ಮತ್ತು ಎಲ್ಇಡಿ ಸ್ಕ್ರೀನ್ ಮೂಲಕ ಮುಂಬರುವ ನಿಲ್ದಾಣಗಳ ಮಾಹಿತಿ<br /> * ಸ್ವಯಂ ಚಾಲಿತ ಬಾಗಿಲು ಮುಚ್ಚಿದಾಗ ಮಾತ್ರ ವಾಹನ ಚಾಲನೆಯಾಗುವ ವ್ಯವಸ್ಥೆ<br /> * ಅಂಗವಿಕಲರು ಹತ್ತಲು ಮತ್ತು ಇಳಿಯಲು ರ್್ಯಾಂಪ್ ವ್ಯವಸ್ಥೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಗೆ ವಿವಿಧ ಮಾದರಿಯ 2499 ಹೊಸ ಬಸ್ಗಳು ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<br /> <br /> ವಿಧಾನಸೌಧದ ಮುಂಭಾಗ 241 ನಗರ ಸಾರಿಗೆ ಬಸ್ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಬಳಿಕ ಮಾತನಾಡಿದ ಅವರು, ಹೊಸ ಬಸ್ಗಳು ಮುಂದಿನ ಆರ್ಥಿಕ ವರ್ಷದಲ್ಲಿ ಪ್ರಯಾಣಿಕರ ಸೇವೆಗೆ ಲಭ್ಯವಾಗಲಿವೆ ಎಂದು ಹೇಳಿದರು.<br /> <br /> ಮೂರು ವರ್ಷದ ಅವಧಿಯಲ್ಲಿ 26,660 ಜನರಿಗೆ ಕೆಎಸ್ಆರ್ಟಿಸಿ ಉದ್ಯೋಗ ಕಲ್ಪಿಸಿದೆ. ದೇಶದಲ್ಲಿ ಅತ್ಯುತ್ತಮ ಸಾರಿಗೆ ವ್ಯವಸ್ಥೆ ಹೊಂದಿರುವ ಹೆಗ್ಗಳಿಕೆಗೆ ರಾಜ್ಯ ಸಾರಿಗೆ ಸಂಸ್ಥೆ ಪಾತ್ರವಾಗಿದೆ ಎಂದರು.<br /> <br /> ನೌಕರರ ವೇತನವನ್ನು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಪರಿಷ್ಕರಣೆ ಮಾಡಲಾಗುತ್ತಿದೆ. ಶೇ 1ರಷ್ಟು ವೇತನ ಹೆಚ್ಚಳ ಮಾಡಿದರೆ ಸರ್ಕಾರಕ್ಕೆ ₹ 150 ಕೋಟಿ ಹೊರೆಯಾಗಲಿದೆ. ಆ ಭಾರ ತಡೆದುಕೊಂಡು ಇದೇ ಮೊದಲ ಬಾರಿಗೆ ಶೇ 12.5ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. ನೌಕರರು ಪ್ರಯಾಣಿಕರ ಹಿತಕ್ಕಾಗಿ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆ ಹೆಸರು ತರಬೇಕು ಎಂದು ಸಲಹೆ ಮಾಡಿದರು.<br /> <br /> ಈಗಿರುವ ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಜೊತೆಗೆ ಹೊಸ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು. ಎಲ್ಲಾ ಬಸ್ ಡಿಪೋ, ಬಸ್ ನಿಲ್ದಾಣ, ಪ್ರಾದೇಶಿಕ ಹಾಗೂ ಎಂದು ಅವರ ಸಿಸಿ ಟಿವಿ ಕ್ಯಾಮರಾ ಅಳವಡಿಸಲಾಗುತ್ತದೆ ಎಂದರು.<br /> <br /> ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ರಾಜ್ಯದ 38 ನಗರಗಳಿಗೆ 637 ನಗರ ಸಾರಿಗೆ ಬಸ್ಗಳ ಸೇವೆ ಆರಂಭಿಸಲಾಗುತ್ತಿದೆ. ಅದರಲ್ಲಿ ಮೊದಲ ಹಂತದಲ್ಲಿ 241 ಬಸ್ಗಳನ್ನು ಮುಖ್ಯಮಂತ್ರಿ ಅವರು ಸೇವೆಗೆ ಸಮರ್ಪಿಸಿದ್ದಾರೆ.<br /> <br /> ಇವು ಹಾಸನ, ಶಿವಮೊಗ್ಗ, ಮೈಸೂರು, ತುಮಕೂರು, ಮಂಡ್ಯ, ರಾಮನಗರ, ಕೋಲಾರ, ದಾವಣಗೆರೆ, ಭದ್ರಾವತಿ, ಚಿತ್ರದುರ್ಗ, ಮಂಗಳೂರು ಮತ್ತು ಉಡುಪಿ ಸೇರಿದಂತೆ 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ ಸಂಚರಿಸಲಿವೆ ಎಂದರು.<br /> <br /> ರಾಜ್ಯದ ಸಾರಿಗೆ ಸಂಸ್ಥೆ ಕಾರ್ಯ ನಿರ್ವಹಣೆ ಉತ್ತಮವಾಗಿದ್ದು, ಈವರಗೆ ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಮಟ್ಟದ 215 ಪ್ರಶಸ್ತಿಗಳು ಬಂದಿವೆ. ಅದರಲ್ಲಿ ಕೆಎಸ್ಆರ್ಟಿಸಿಗೆ 131 ಪ್ರಶಸ್ತಿಗಳು ಲಭಿಸಿವೆ ಅವರು ವಿವರಿಸಿದರು.<br /> <br /> ಇದೇ ಸಂದರ್ಭದಲ್ಲಿ ಕಲಾಸಿಪಾಳ್ಯದಲ್ಲಿ ₹ 60 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ, ಅಂಜನಾಪುರ ಬಸ್ ಡಿಪೋ ಮತ್ತು ಗುಂಜೂರಿನಲ್ಲಿ ₹ 7.79 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಸಿಬ್ಬಂದಿ ವಸತಿ ಗೃಹಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.</p>.<p><strong>ವಿಶೇಷ ಸೌಲಭ್ಯಗಳು</strong><br /> * ಚಾಲನಾ ಸುರಕ್ಷತೆಗಾಗಿ ಹಿಂಬದಿ ನೋಟದ ಕ್ಯಾಮೆರಾ<br /> * ಪ್ರಯಾಣಿಕರ ಸುರಕ್ಷತೆಗಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ<br /> * ಧ್ವನಿ ಮತ್ತು ಎಲ್ಇಡಿ ಸ್ಕ್ರೀನ್ ಮೂಲಕ ಮುಂಬರುವ ನಿಲ್ದಾಣಗಳ ಮಾಹಿತಿ<br /> * ಸ್ವಯಂ ಚಾಲಿತ ಬಾಗಿಲು ಮುಚ್ಚಿದಾಗ ಮಾತ್ರ ವಾಹನ ಚಾಲನೆಯಾಗುವ ವ್ಯವಸ್ಥೆ<br /> * ಅಂಗವಿಕಲರು ಹತ್ತಲು ಮತ್ತು ಇಳಿಯಲು ರ್್ಯಾಂಪ್ ವ್ಯವಸ್ಥೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>