<p><strong>ಬೆಂಗಳೂರು:</strong> ಕನಿಷ್ಠ ಮೂರು ದಾಖಲಾತಿಗಳು ಲಭ್ಯವಿದ್ದರೂ ರೈತರಿಗೆ ಮಂಜೂರಾಗಿರುವ ಜಮೀನುಗಳ ಪೋಡಿ ಕಾರ್ಯ ಪೂರ್ಣಗೊಳಿಸಬಹುದು.</p>.<p>ಈ ಕುರಿತು ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು, ಇನ್ನು ಮುಂದೆ ಕನಿಷ್ಠ ದಾಖಲೆಗಳ ಆಧಾರದಲ್ಲಿ ಆಯಾ ತಹಶೀಲ್ದಾರ್ ಅವರು, ದಾಖಲೆಗಳ ನೈಜತೆಯನ್ನು ಪರಿಶೀಲಿಸಿ, ಪೋಡಿ ಮಾಡಲು ಆದೇಶಿಸಬಹುದಾಗಿದೆ.</p>.<p>ಮೊದಲು ಯಾವುದೇ ಒಂದು ದಾಖಲಾತಿ ಲಭ್ಯವಿಲ್ಲದಿದ್ದರೂ ಆ ಕಡತವನ್ನು ‘ಗೈರುವಿಲೇ ಸಮಿತಿ’ ಮುಂದೆ ಮಂಡಿಸಬೇಕಿತ್ತು. ಈ ಪ್ರಕ್ರಿಯೆ ಸುದೀರ್ಘ ಅವಧಿ ತೆಗೆದುಕೊಳ್ಳುತ್ತಿದ್ದ ಕಾರಣ ಪೋಡಿ ಕಾರ್ಯಗಳು ಸಾಕಷ್ಟು ವಿಳಂಬವಾಗುತ್ತಿದ್ದವು. ಪೋಡಿ ದುರಸ್ತಿಗಾಗಿ ನಮೂನೆ 1ರಿಂದ 5 ಮತ್ತು 6ರಿಂದ 10ರವರೆಗಿನ ಭೂ ದಾಖಲೆಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿತ್ತು. ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದ್ದರೂ, ಸಮರ್ಪಕ ದಾಖಲೆಗಳ ಕೊರತೆಯ ಕಾರಣ ಜಮೀನು ಪೋಡಿ ಆಗಿರಲಿಲ್ಲ. ರೈತರು ಇಂದಿಗೂ ಸರ್ಕಾರಿ ಕಚೇರಿಗಳಿಗೆ ಸುತ್ತುತ್ತಿದ್ದಾರೆ.</p>.<p>ಈಗ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿದ್ದು, ಒಂದು ಸರ್ವೆ ನಂಬರಿನ ಎಲ್ಲ ಮಂಜೂರಾತಿಯ ನಮೂನೆ 1ರಿಂದ 5 ಮತ್ತು ಪೋಡಿ ಕೆಲಸವನ್ನು ಏಕಕಾಲದಲ್ಲಿ ನಿರ್ವಹಿಸಲಾಗುತ್ತದೆ. ಎಲ್ಲ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ, ಅಳವಡಿಸಲಾಗುತ್ತಿದೆ. ಒಂದು ಸರ್ವೆ ನಂಬರಿಗೆ ಒಮ್ಮೆ ದಾಖಲೆಗಳನ್ನು ಅಳವಡಿಸಿದ ನಂತರ ಅವು ಕಾಯಂ ಆಗಿ ಲಭ್ಯವಾಗುತ್ತವೆ. </p>.<p>ದರಖಾಸ್ತು ಪೋಡಿ ಪ್ರಕ್ರಿಯೆಯಲ್ಲಿ ಅಕ್ರಮಗಳನ್ನು ತಡೆಯುವ ಸಲುವಾಗಿ ಗ್ರಾಮ ಆಡಳಿತ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಶಿರಸ್ತೇದಾರರು ಹಾಗೂ ತಹಶೀಲ್ದಾರರು ನಮೂನೆ 1ರಿಂದ 5ರ ಮಾಹಿತಿಯನ್ನು ಭರ್ತಿ ಮಾಡಿ, ಡಿಜಿಟಲ್ ಸಹಿ ಮಾಡುವಂತಹ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಈ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಲಾಗುತ್ತಿದೆ.</p>.<p><strong>ದಾರಿಗೆ ಪ್ರತ್ಯೇಕ ಅಸ್ತಿತ್ವ</strong>: ಮಂಜೂರಾತಿ ನಕ್ಷೆಯಲ್ಲಿ ಗುರುತಿಸಿರುವ ಹೊಲದ ದಾರಿಯನ್ನು ದುರಸ್ತಿ ದಾಖಲೆಯಲ್ಲಿ ಪ್ರತ್ಯೇಕ ದಾರಿ ಎಂದೇ ಗುರುತಿಸಿ, ಕಾಯಂಗೊಳಿಸಬೇಕು. ಆ ಜಾಗವನ್ನು ಯಾರ ವಿಸ್ತೀರ್ಣದಲ್ಲೂ ಸೇರಿಸಬಾರದು ಎಂದು ಆದೇಶದಲ್ಲಿ ಸೂಚಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನಿಷ್ಠ ಮೂರು ದಾಖಲಾತಿಗಳು ಲಭ್ಯವಿದ್ದರೂ ರೈತರಿಗೆ ಮಂಜೂರಾಗಿರುವ ಜಮೀನುಗಳ ಪೋಡಿ ಕಾರ್ಯ ಪೂರ್ಣಗೊಳಿಸಬಹುದು.</p>.<p>ಈ ಕುರಿತು ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು, ಇನ್ನು ಮುಂದೆ ಕನಿಷ್ಠ ದಾಖಲೆಗಳ ಆಧಾರದಲ್ಲಿ ಆಯಾ ತಹಶೀಲ್ದಾರ್ ಅವರು, ದಾಖಲೆಗಳ ನೈಜತೆಯನ್ನು ಪರಿಶೀಲಿಸಿ, ಪೋಡಿ ಮಾಡಲು ಆದೇಶಿಸಬಹುದಾಗಿದೆ.</p>.<p>ಮೊದಲು ಯಾವುದೇ ಒಂದು ದಾಖಲಾತಿ ಲಭ್ಯವಿಲ್ಲದಿದ್ದರೂ ಆ ಕಡತವನ್ನು ‘ಗೈರುವಿಲೇ ಸಮಿತಿ’ ಮುಂದೆ ಮಂಡಿಸಬೇಕಿತ್ತು. ಈ ಪ್ರಕ್ರಿಯೆ ಸುದೀರ್ಘ ಅವಧಿ ತೆಗೆದುಕೊಳ್ಳುತ್ತಿದ್ದ ಕಾರಣ ಪೋಡಿ ಕಾರ್ಯಗಳು ಸಾಕಷ್ಟು ವಿಳಂಬವಾಗುತ್ತಿದ್ದವು. ಪೋಡಿ ದುರಸ್ತಿಗಾಗಿ ನಮೂನೆ 1ರಿಂದ 5 ಮತ್ತು 6ರಿಂದ 10ರವರೆಗಿನ ಭೂ ದಾಖಲೆಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿತ್ತು. ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದ್ದರೂ, ಸಮರ್ಪಕ ದಾಖಲೆಗಳ ಕೊರತೆಯ ಕಾರಣ ಜಮೀನು ಪೋಡಿ ಆಗಿರಲಿಲ್ಲ. ರೈತರು ಇಂದಿಗೂ ಸರ್ಕಾರಿ ಕಚೇರಿಗಳಿಗೆ ಸುತ್ತುತ್ತಿದ್ದಾರೆ.</p>.<p>ಈಗ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿದ್ದು, ಒಂದು ಸರ್ವೆ ನಂಬರಿನ ಎಲ್ಲ ಮಂಜೂರಾತಿಯ ನಮೂನೆ 1ರಿಂದ 5 ಮತ್ತು ಪೋಡಿ ಕೆಲಸವನ್ನು ಏಕಕಾಲದಲ್ಲಿ ನಿರ್ವಹಿಸಲಾಗುತ್ತದೆ. ಎಲ್ಲ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ, ಅಳವಡಿಸಲಾಗುತ್ತಿದೆ. ಒಂದು ಸರ್ವೆ ನಂಬರಿಗೆ ಒಮ್ಮೆ ದಾಖಲೆಗಳನ್ನು ಅಳವಡಿಸಿದ ನಂತರ ಅವು ಕಾಯಂ ಆಗಿ ಲಭ್ಯವಾಗುತ್ತವೆ. </p>.<p>ದರಖಾಸ್ತು ಪೋಡಿ ಪ್ರಕ್ರಿಯೆಯಲ್ಲಿ ಅಕ್ರಮಗಳನ್ನು ತಡೆಯುವ ಸಲುವಾಗಿ ಗ್ರಾಮ ಆಡಳಿತ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಶಿರಸ್ತೇದಾರರು ಹಾಗೂ ತಹಶೀಲ್ದಾರರು ನಮೂನೆ 1ರಿಂದ 5ರ ಮಾಹಿತಿಯನ್ನು ಭರ್ತಿ ಮಾಡಿ, ಡಿಜಿಟಲ್ ಸಹಿ ಮಾಡುವಂತಹ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಈ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಲಾಗುತ್ತಿದೆ.</p>.<p><strong>ದಾರಿಗೆ ಪ್ರತ್ಯೇಕ ಅಸ್ತಿತ್ವ</strong>: ಮಂಜೂರಾತಿ ನಕ್ಷೆಯಲ್ಲಿ ಗುರುತಿಸಿರುವ ಹೊಲದ ದಾರಿಯನ್ನು ದುರಸ್ತಿ ದಾಖಲೆಯಲ್ಲಿ ಪ್ರತ್ಯೇಕ ದಾರಿ ಎಂದೇ ಗುರುತಿಸಿ, ಕಾಯಂಗೊಳಿಸಬೇಕು. ಆ ಜಾಗವನ್ನು ಯಾರ ವಿಸ್ತೀರ್ಣದಲ್ಲೂ ಸೇರಿಸಬಾರದು ಎಂದು ಆದೇಶದಲ್ಲಿ ಸೂಚಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>