‘ಸಿದ್ದರಾಮಯ್ಯ ಅವರು ತಮ್ಮದು ಭ್ರಷ್ಟಾಚಾರ ರಹಿತ, ಹಗರಣ ರಹಿತ ಸರ್ಕಾರ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಇಲ್ಲಿ ನಿಯಮ ಉಲ್ಲಂಘಿಸಿ ಭೂಮಿಯನ್ನು ಖಾಸಗಿಯವರಿಗೆ ಪರಭಾರೆ ಮಾಡಲಾಗಿದ್ದು, 42 ನಿವೇಶನದಾರರು ಬೀದಿಪಾಲಾಗಿದ್ದಾರೆ. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಬುಧವಾರ (ಅ.11) ದೂರು ನೀಡಲಾಗುವುದು. ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಪುಟ್ಟಸ್ವಾಮಿ ಆಗ್ರಹಿಸಿದರು.