<p><strong>ಹೊಸಪೇಟೆ:</strong> ಸರ್ಕಾರದ ನಿಯಮ ಉಲ್ಲಂಘಿಸಿ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ₹36 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಪರಿಷತ್ತಿನ ತನಿಖಾ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.</p>.<p>2015ರ ಮೇ ತಿಂಗಳಿನಿಂದ 2019ರ ಫೆಬ್ರುವರಿವರೆಗೆ ಈ ಕಾಮಗಾರಿಗಳು ನಡೆದಿದ್ದು, ಈ ಅವಧಿಯಲ್ಲಿ ಪ್ರೊ.ಮಲ್ಲಿಕಾ ಎಸ್. ಘಂಟಿ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.ನಿಯಮ ಉಲ್ಲಂಘಿಸಿ ಕಾಮಗಾರಿ ಕೈಗೆತ್ತಿಕೊಂಡು ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಎಸಗಲಾಗಿದೆ ಎಂದು ವಿಶ್ವವಿದ್ಯಾಲಯದ ಸೂಪರಿಟೆಂಡೆಂಟ್ ಎಚ್.ಎಂ.ಸೋಮನಾಥ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ಕುರಿತು ಲೋಕಾಯುಕ್ತ ಉನ್ನತ ಶಿಕ್ಷಣ ಪರಿಷತ್ತಿಗೆ ನೋಟಿಸ್ ಜಾರಿ ಮಾಡಿತ್ತು. ಈ ಕುರಿತ ದಾಖಲೆಗಳು ‘ಪ್ರಜಾವಾಣಿ’ಗೆ ಲಭಿಸಿವೆ.</p>.<p>ಪರಿಷತ್ತು, 2018ರ ಆಗಸ್ಟ್ನಲ್ಲಿ ರಾಜ್ಯ ಲೆಕ್ಕಪತ್ರ ಇಲಾಖೆ ಅಧಿಕಾರಿಗಳಾದ ವಿಶ್ವನಾಥ್, ಎಲ್.ವಿ.ಉಮಾಪತಿ, ಪರಿಷತ್ತಿನ ಲೆಕ್ಕಾಧಿಕಾರಿ ಎಚ್.ಸಿ.ಜಯಪ್ರಕಾಶ್ ಮತ್ತು ಲೋಕೋಪಯೋಗಿ ಇಲಾಖೆನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪರಶುರಾಮ ರೆಡ್ಡಿ ಅವರನ್ನು ಒಳಗೊಂಡ ಸಮಿತಿ ರಚಿಸಿತ್ತು. ಈ ಸಮಿತಿ 2018ರ ಆಗಸ್ಟ್ 27, 28ರಂದು ಕನ್ನಡ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ರೂಸಾ ಮತ್ತು ಇತರ ಅನುದಾನಗಳ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿ, ಅವುಗಳಿಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿ ತನಿಖಾ ವರದಿ ಸಲ್ಲಿಸಿದೆ.</p>.<p class="Subhead"><strong>ವರದಿಯಲ್ಲಿ ಏನಿದೆ?:</strong></p>.<p>* ಸರ್ಕಾರದ ಯಾವುದೇ ಇಲಾಖೆಯಾಗಲಿ, ಯಾವುದೇ ಕಾಮಗಾರಿಗಳನ್ನು ತುಂಡು ಗುತ್ತಿಗೆ ಮೂಲಕ ಕೆ.ಆರ್.ಐ.ಡಿ.ಎಲ್.ಗೆ ವಹಿಸಬಾರದು ಎಂಬ ಸರ್ಕಾರದ ಷರತ್ತು ಉಲ್ಲಂಘಿಸಲಾಗಿದೆ.</p>.<p>*ರೂಸಾ ಅನುದಾನದಲ್ಲಿ ₹86.26 ಲಕ್ಷವನ್ನು ಕೆ.ಟಿ.ಪಿ.ಪಿ. ಕಾಯ್ದೆ (ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ) ಉಲ್ಲಂಘಿಸಿ ತುಂಡುಗುತ್ತಿಗೆ ಮೂಲಕ ಖರ್ಚು ಮಾಡಿದ್ದನ್ನು ತಪಾಸಣಾ ಸಮಿತಿ ಒಪ್ಪದ ಕಾರಣ, ವಿಶ್ವವಿದ್ಯಾಲಯವು ತನ್ನ ಅಭಿವೃದ್ಧಿ ಅನುದಾನದಿಂದ ಆ ಹಣವನ್ನು ರೂಸಾ ಖಾತೆಗೆ ಹಿಂದಿರುಗಿಸಿದೆ. ಹಣ ವರ್ಗಾಯಿಸಿದ ಮಾತ್ರಕ್ಕೆ ಉಲ್ಲಂಘಿಸಿರುವ ನಿಯಮ ಕಾಯ್ದೆಬದ್ಧ ಆಗುವುದಿಲ್ಲ.</p>.<p>* ಭಾಷಾ ನಿಕಾಯ ಮತ್ತು ವಿಜ್ಞಾನ ನಿಕಾಯದ ತರಗತಿಗಳ ಕಟ್ಟಡಗಳ ಬಿಲ್ ಮತ್ತು ಎಂ.ಬಿ.(ಮೆಶರ್ಮೆಂಟ್ ಬುಕ್)ಗಳನ್ನು ವಿಧಿಸಿದ್ದ ಷರತ್ತು ಅನ್ವಯ ಕೆ.ಆರ್.ಐ.ಡಿ.ಎಲ್. ಸಂಸ್ಥೆಯವರು ವಿಶ್ವವಿದ್ಯಾಲಯಕ್ಕೆ ಒಪ್ಪಿಸಿಲ್ಲ. ಕಾರ್ಯಾದೇಶದ ಅನುಸಾರ ವಿಶ್ವವಿದ್ಯಾಲಯದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳು ಬಿಲ್ಗಳ ನೈಜತೆ ಪರಿಶೀಲಿಸಿಲ್ಲ.</p>.<p>*ಲೋಕೋಪಯೋಗಿ ಇಲಾಖೆಯ ಆದೇಶ ಉಲ್ಲಂಘಿಸಿ, ಕ್ರಿಯಾಶಕ್ತಿ ಕಟ್ಟಡದ ವಿವಿಧ ಭಾಗಗಳಿಗೆ ಒಟ್ಟು 23 ಕಾಮಗಾರಿಗಳನ್ನು ವಿಭಜಿಸಿ, ತುಂಡುಗುತ್ತಿಗೆ ಆಧಾರದ ಮೇಲೆ ವಹಿಸಿರುವುದು ಕಾನೂನುಬಾಹಿರವಾಗಿದೆ.</p>.<p>*ವಿಶ್ವವಿದ್ಯಾಲಯ ತಾಂತ್ರಿಕ ವಿಭಾಗದ ಎಂಜಿನಿಯರ್ಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಲು ವಿಫಲವಾಗಿದೆ. ವಿಶ್ವವಿದ್ಯಾಲಯದ ಎಂಜಿನಿಯರ್ಗಳ ಮೂಲಕ ಕಾಮಗಾರಿ ನಿರ್ವಹಿಸದೆ ಅಂದಾಜಿನ ಮೊತ್ತದಲ್ಲಿ ಶೇ 8ರಷ್ಟು ಸೇವಾ ಶುಲ್ಕವನ್ನು ಕೆ.ಆರ್.ಐ.ಡಿ.ಎಲ್ ಸಂಸ್ಥೆಗೆ ನೀಡಿ, ಆರ್ಥಿಕ ನಷ್ಟ ಉಂಟು ಮಾಡಲಾಗಿದೆ.</p>.<p>*ಅವಧಿ ನಂತರ ಪೂರ್ಣಗೊಂಡ ಕಾಮಗಾರಿಗಳಿಗೆ ಗುತ್ತಿಗೆ ಒಪ್ಪಂದದ ಷರತ್ತಿನ ಅನ್ವಯ ‘ಲಿಕ್ವಿಡಿಟಿ ಡ್ಯಾಮೇಜಸ್’ ವಿಧಿಸಿಲ್ಲ. ಕಾಮಗಾರಿ ವಿಳಂಬಕ್ಕೆ ಕೆ.ಆರ್.ಐ.ಡಿ.ಎಲ್ ಸಂಸ್ಥೆಗೆ ದಂಡ ಹಾಕಿಲ್ಲ.</p>.<p>*ಲೋಕೋಪಯೋಗಿ ಇಲಾಖೆಯ ನಿಯಮದ ಪ್ರಕಾರ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಸಿವಿಲ್ ಕಾಮಗಾರಿಗೆ ₹ 10 ಲಕ್ಷ ಮತ್ತು ವಿದ್ಯುತ್ ಶಕ್ತಿ ಕಾಮಗಾರಿಗೆ ₹ 1 ಲಕ್ಷದವರೆಗೆ ತಾಂತ್ರಿಕ ಪರಿಶೀಲನೆ ಮಾಡುವ ಅಧಿಕಾರವಿದೆ. ಆದರೆ, ಕೆ.ಆರ್.ಐ.ಡಿ.ಎಲ್ ಸಂಸ್ಥೆಯ ಕಾರ್ಯಪಾಲಕ ಎಂಜಿನಿಯರ್ಗಳು ₹22.65 ಕೋಟಿ ಮೊತ್ತಕ್ಕೆ ಸಹಿ ಮಾಡಿ, ಆರ್ಥಿಕ ಯೋಜನೆಯ ನಿಯಮವನ್ನು ಉಲ್ಲಂಘಿಸಿದ್ದಾರೆ.</p>.<p><strong>ಆ ಅವಧಿಯಲ್ಲಿ ಇದ್ದವರು</strong></p>.<p>ಪ್ರೊ.ಮಲ್ಲಿಕಾ ಎಸ್. ಘಂಟಿ– ಕುಲಪತಿ</p>.<p>ಡಿ.ಪಾಂಡುರಂಗಬಾಬು, ಅಶೋಕಕುಮಾರ ರಂಜೇರೆ– ಕುಲಸಚಿವರು</p>.<p>ಜೆ.ಎಸ್.ನಂಜಯ್ಯನವರ– ತಾಂತ್ರಿಕ ವಿಭಾಗದ ಮುಖ್ಯಸ್ಥ</p>.<p>ಪಿ.ಮಹಾದೇವಯ್ಯ, ಸಿದ್ಧಗಂಗಮ್ಮ– ಹಣಕಾಸು ಅಧಿಕಾರಿಗಳು</p>.<p>ತನಿಖಾ ಸಮಿತಿ ಹೇಳಿದ್ದೇನು?</p>.<p>* ಕನ್ನಡ ವಿಶ್ವವಿದ್ಯಾಲಯ ತಾಂತ್ರಿಕ ಸಿಬ್ಬಂದಿಯನ್ನು ಬಳಸಿಕೊಂಡು ಕಾಮಗಾರಿಗಳನ್ನು ಕೆ.ಟಿ.ಪಿ.ಪಿ. ಕಾಯ್ದೆ ಪ್ರಕಾರ ನಿರ್ವಹಿಸಿದ್ದಲ್ಲಿ ಆರ್ಥಿಕ ನಷ್ಟ ಉಂಟಾಗುತ್ತಿರಲಿಲ್ಲ. ಸರ್ಕಾರದ ನಿಯಮಗಳ ಉಲ್ಲಂಘನೆ ತಡೆಯಬಹುದಿತ್ತು.</p>.<p>* ಕನ್ನಡ ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥರನ್ನು ರಾಜ್ಯ ಲೆಕ್ಕಪತ್ರ ಇಲಾಖೆಯಿಂದ ಪಡೆದು ಕೆಲಸ ನಿರ್ವಹಿಸುವುದು ಸೂಕ್ತ.</p>.<p><strong>ಉಲ್ಲಂಘನೆಗೆ 3 ವರ್ಷ ಜೈಲು</strong></p>.<p>ಕನ್ನಡ ವಿಶ್ವವಿದ್ಯಾಲಯದ 2014–15 ಮತ್ತು 2015–16ನೇ ಸಾಲಿನ ರಾಜ್ಯ ಲೆಕ್ಕಪತ್ರ ಇಲಾಖೆಯ ತಪಾಸಣಾ ವರದಿಯಲ್ಲಿ, ಕೆ.ಟಿ.ಪಿ.ಪಿ. ಕಾಯ್ದೆಯನ್ನು ಪೂರ್ಣವಾಗಿ ಪಾಲಿಸದಿರುವುದಕ್ಕೆ ಮತ್ತು ಕಾಯ್ದೆಯ ಉಲ್ಲಂಘನೆಗೆ ಸೆಕ್ಷನ್ 23ರ ಅಡಿಯಲ್ಲಿ 3 ವರ್ಷ ಜೈಲು ಶಿಕ್ಷೆ ಮತ್ತು ₹ 5 ಸಾವಿರ ದಂಡ ವಿಧಿಸುವ ನಿಯಮವಿದೆ. ವಿಶ್ವವಿದ್ಯಾಲಯದವರು ಸಲ್ಲಿಸಿದ್ದ ಉತ್ತರವನ್ನು ಲೆಕ್ಕ ತಪಾಸಣೆಯಲ್ಲಿ ಒಪ್ಪಿರುವುದಿಲ್ಲ. ನಿಯಮ ಉಲ್ಲಂಘಿಸಿದ್ದಕ್ಕೆ ಕಾರ್ಯಕಾರಿ ಸಮಿತಿ ಸದಸ್ಯರು, ಕಟ್ಟಡ ಸಲಹಾ ಸಮಿತಿ ಸದಸ್ಯರು, ತಾಂತ್ರಿಕ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್, ಕಿರಿಯ ಎಂಜಿನಿಯರ್, ಹಣಕಾಸು ಅಧಿಕಾರಿಗಳು ಸಂಪೂರ್ಣ ಜವಾಬ್ದಾರರು ಎಂದು ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಸರ್ಕಾರದ ನಿಯಮ ಉಲ್ಲಂಘಿಸಿ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ₹36 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಪರಿಷತ್ತಿನ ತನಿಖಾ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.</p>.<p>2015ರ ಮೇ ತಿಂಗಳಿನಿಂದ 2019ರ ಫೆಬ್ರುವರಿವರೆಗೆ ಈ ಕಾಮಗಾರಿಗಳು ನಡೆದಿದ್ದು, ಈ ಅವಧಿಯಲ್ಲಿ ಪ್ರೊ.ಮಲ್ಲಿಕಾ ಎಸ್. ಘಂಟಿ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.ನಿಯಮ ಉಲ್ಲಂಘಿಸಿ ಕಾಮಗಾರಿ ಕೈಗೆತ್ತಿಕೊಂಡು ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಎಸಗಲಾಗಿದೆ ಎಂದು ವಿಶ್ವವಿದ್ಯಾಲಯದ ಸೂಪರಿಟೆಂಡೆಂಟ್ ಎಚ್.ಎಂ.ಸೋಮನಾಥ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ಕುರಿತು ಲೋಕಾಯುಕ್ತ ಉನ್ನತ ಶಿಕ್ಷಣ ಪರಿಷತ್ತಿಗೆ ನೋಟಿಸ್ ಜಾರಿ ಮಾಡಿತ್ತು. ಈ ಕುರಿತ ದಾಖಲೆಗಳು ‘ಪ್ರಜಾವಾಣಿ’ಗೆ ಲಭಿಸಿವೆ.</p>.<p>ಪರಿಷತ್ತು, 2018ರ ಆಗಸ್ಟ್ನಲ್ಲಿ ರಾಜ್ಯ ಲೆಕ್ಕಪತ್ರ ಇಲಾಖೆ ಅಧಿಕಾರಿಗಳಾದ ವಿಶ್ವನಾಥ್, ಎಲ್.ವಿ.ಉಮಾಪತಿ, ಪರಿಷತ್ತಿನ ಲೆಕ್ಕಾಧಿಕಾರಿ ಎಚ್.ಸಿ.ಜಯಪ್ರಕಾಶ್ ಮತ್ತು ಲೋಕೋಪಯೋಗಿ ಇಲಾಖೆನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪರಶುರಾಮ ರೆಡ್ಡಿ ಅವರನ್ನು ಒಳಗೊಂಡ ಸಮಿತಿ ರಚಿಸಿತ್ತು. ಈ ಸಮಿತಿ 2018ರ ಆಗಸ್ಟ್ 27, 28ರಂದು ಕನ್ನಡ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ರೂಸಾ ಮತ್ತು ಇತರ ಅನುದಾನಗಳ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿ, ಅವುಗಳಿಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿ ತನಿಖಾ ವರದಿ ಸಲ್ಲಿಸಿದೆ.</p>.<p class="Subhead"><strong>ವರದಿಯಲ್ಲಿ ಏನಿದೆ?:</strong></p>.<p>* ಸರ್ಕಾರದ ಯಾವುದೇ ಇಲಾಖೆಯಾಗಲಿ, ಯಾವುದೇ ಕಾಮಗಾರಿಗಳನ್ನು ತುಂಡು ಗುತ್ತಿಗೆ ಮೂಲಕ ಕೆ.ಆರ್.ಐ.ಡಿ.ಎಲ್.ಗೆ ವಹಿಸಬಾರದು ಎಂಬ ಸರ್ಕಾರದ ಷರತ್ತು ಉಲ್ಲಂಘಿಸಲಾಗಿದೆ.</p>.<p>*ರೂಸಾ ಅನುದಾನದಲ್ಲಿ ₹86.26 ಲಕ್ಷವನ್ನು ಕೆ.ಟಿ.ಪಿ.ಪಿ. ಕಾಯ್ದೆ (ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ) ಉಲ್ಲಂಘಿಸಿ ತುಂಡುಗುತ್ತಿಗೆ ಮೂಲಕ ಖರ್ಚು ಮಾಡಿದ್ದನ್ನು ತಪಾಸಣಾ ಸಮಿತಿ ಒಪ್ಪದ ಕಾರಣ, ವಿಶ್ವವಿದ್ಯಾಲಯವು ತನ್ನ ಅಭಿವೃದ್ಧಿ ಅನುದಾನದಿಂದ ಆ ಹಣವನ್ನು ರೂಸಾ ಖಾತೆಗೆ ಹಿಂದಿರುಗಿಸಿದೆ. ಹಣ ವರ್ಗಾಯಿಸಿದ ಮಾತ್ರಕ್ಕೆ ಉಲ್ಲಂಘಿಸಿರುವ ನಿಯಮ ಕಾಯ್ದೆಬದ್ಧ ಆಗುವುದಿಲ್ಲ.</p>.<p>* ಭಾಷಾ ನಿಕಾಯ ಮತ್ತು ವಿಜ್ಞಾನ ನಿಕಾಯದ ತರಗತಿಗಳ ಕಟ್ಟಡಗಳ ಬಿಲ್ ಮತ್ತು ಎಂ.ಬಿ.(ಮೆಶರ್ಮೆಂಟ್ ಬುಕ್)ಗಳನ್ನು ವಿಧಿಸಿದ್ದ ಷರತ್ತು ಅನ್ವಯ ಕೆ.ಆರ್.ಐ.ಡಿ.ಎಲ್. ಸಂಸ್ಥೆಯವರು ವಿಶ್ವವಿದ್ಯಾಲಯಕ್ಕೆ ಒಪ್ಪಿಸಿಲ್ಲ. ಕಾರ್ಯಾದೇಶದ ಅನುಸಾರ ವಿಶ್ವವಿದ್ಯಾಲಯದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳು ಬಿಲ್ಗಳ ನೈಜತೆ ಪರಿಶೀಲಿಸಿಲ್ಲ.</p>.<p>*ಲೋಕೋಪಯೋಗಿ ಇಲಾಖೆಯ ಆದೇಶ ಉಲ್ಲಂಘಿಸಿ, ಕ್ರಿಯಾಶಕ್ತಿ ಕಟ್ಟಡದ ವಿವಿಧ ಭಾಗಗಳಿಗೆ ಒಟ್ಟು 23 ಕಾಮಗಾರಿಗಳನ್ನು ವಿಭಜಿಸಿ, ತುಂಡುಗುತ್ತಿಗೆ ಆಧಾರದ ಮೇಲೆ ವಹಿಸಿರುವುದು ಕಾನೂನುಬಾಹಿರವಾಗಿದೆ.</p>.<p>*ವಿಶ್ವವಿದ್ಯಾಲಯ ತಾಂತ್ರಿಕ ವಿಭಾಗದ ಎಂಜಿನಿಯರ್ಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಲು ವಿಫಲವಾಗಿದೆ. ವಿಶ್ವವಿದ್ಯಾಲಯದ ಎಂಜಿನಿಯರ್ಗಳ ಮೂಲಕ ಕಾಮಗಾರಿ ನಿರ್ವಹಿಸದೆ ಅಂದಾಜಿನ ಮೊತ್ತದಲ್ಲಿ ಶೇ 8ರಷ್ಟು ಸೇವಾ ಶುಲ್ಕವನ್ನು ಕೆ.ಆರ್.ಐ.ಡಿ.ಎಲ್ ಸಂಸ್ಥೆಗೆ ನೀಡಿ, ಆರ್ಥಿಕ ನಷ್ಟ ಉಂಟು ಮಾಡಲಾಗಿದೆ.</p>.<p>*ಅವಧಿ ನಂತರ ಪೂರ್ಣಗೊಂಡ ಕಾಮಗಾರಿಗಳಿಗೆ ಗುತ್ತಿಗೆ ಒಪ್ಪಂದದ ಷರತ್ತಿನ ಅನ್ವಯ ‘ಲಿಕ್ವಿಡಿಟಿ ಡ್ಯಾಮೇಜಸ್’ ವಿಧಿಸಿಲ್ಲ. ಕಾಮಗಾರಿ ವಿಳಂಬಕ್ಕೆ ಕೆ.ಆರ್.ಐ.ಡಿ.ಎಲ್ ಸಂಸ್ಥೆಗೆ ದಂಡ ಹಾಕಿಲ್ಲ.</p>.<p>*ಲೋಕೋಪಯೋಗಿ ಇಲಾಖೆಯ ನಿಯಮದ ಪ್ರಕಾರ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಸಿವಿಲ್ ಕಾಮಗಾರಿಗೆ ₹ 10 ಲಕ್ಷ ಮತ್ತು ವಿದ್ಯುತ್ ಶಕ್ತಿ ಕಾಮಗಾರಿಗೆ ₹ 1 ಲಕ್ಷದವರೆಗೆ ತಾಂತ್ರಿಕ ಪರಿಶೀಲನೆ ಮಾಡುವ ಅಧಿಕಾರವಿದೆ. ಆದರೆ, ಕೆ.ಆರ್.ಐ.ಡಿ.ಎಲ್ ಸಂಸ್ಥೆಯ ಕಾರ್ಯಪಾಲಕ ಎಂಜಿನಿಯರ್ಗಳು ₹22.65 ಕೋಟಿ ಮೊತ್ತಕ್ಕೆ ಸಹಿ ಮಾಡಿ, ಆರ್ಥಿಕ ಯೋಜನೆಯ ನಿಯಮವನ್ನು ಉಲ್ಲಂಘಿಸಿದ್ದಾರೆ.</p>.<p><strong>ಆ ಅವಧಿಯಲ್ಲಿ ಇದ್ದವರು</strong></p>.<p>ಪ್ರೊ.ಮಲ್ಲಿಕಾ ಎಸ್. ಘಂಟಿ– ಕುಲಪತಿ</p>.<p>ಡಿ.ಪಾಂಡುರಂಗಬಾಬು, ಅಶೋಕಕುಮಾರ ರಂಜೇರೆ– ಕುಲಸಚಿವರು</p>.<p>ಜೆ.ಎಸ್.ನಂಜಯ್ಯನವರ– ತಾಂತ್ರಿಕ ವಿಭಾಗದ ಮುಖ್ಯಸ್ಥ</p>.<p>ಪಿ.ಮಹಾದೇವಯ್ಯ, ಸಿದ್ಧಗಂಗಮ್ಮ– ಹಣಕಾಸು ಅಧಿಕಾರಿಗಳು</p>.<p>ತನಿಖಾ ಸಮಿತಿ ಹೇಳಿದ್ದೇನು?</p>.<p>* ಕನ್ನಡ ವಿಶ್ವವಿದ್ಯಾಲಯ ತಾಂತ್ರಿಕ ಸಿಬ್ಬಂದಿಯನ್ನು ಬಳಸಿಕೊಂಡು ಕಾಮಗಾರಿಗಳನ್ನು ಕೆ.ಟಿ.ಪಿ.ಪಿ. ಕಾಯ್ದೆ ಪ್ರಕಾರ ನಿರ್ವಹಿಸಿದ್ದಲ್ಲಿ ಆರ್ಥಿಕ ನಷ್ಟ ಉಂಟಾಗುತ್ತಿರಲಿಲ್ಲ. ಸರ್ಕಾರದ ನಿಯಮಗಳ ಉಲ್ಲಂಘನೆ ತಡೆಯಬಹುದಿತ್ತು.</p>.<p>* ಕನ್ನಡ ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥರನ್ನು ರಾಜ್ಯ ಲೆಕ್ಕಪತ್ರ ಇಲಾಖೆಯಿಂದ ಪಡೆದು ಕೆಲಸ ನಿರ್ವಹಿಸುವುದು ಸೂಕ್ತ.</p>.<p><strong>ಉಲ್ಲಂಘನೆಗೆ 3 ವರ್ಷ ಜೈಲು</strong></p>.<p>ಕನ್ನಡ ವಿಶ್ವವಿದ್ಯಾಲಯದ 2014–15 ಮತ್ತು 2015–16ನೇ ಸಾಲಿನ ರಾಜ್ಯ ಲೆಕ್ಕಪತ್ರ ಇಲಾಖೆಯ ತಪಾಸಣಾ ವರದಿಯಲ್ಲಿ, ಕೆ.ಟಿ.ಪಿ.ಪಿ. ಕಾಯ್ದೆಯನ್ನು ಪೂರ್ಣವಾಗಿ ಪಾಲಿಸದಿರುವುದಕ್ಕೆ ಮತ್ತು ಕಾಯ್ದೆಯ ಉಲ್ಲಂಘನೆಗೆ ಸೆಕ್ಷನ್ 23ರ ಅಡಿಯಲ್ಲಿ 3 ವರ್ಷ ಜೈಲು ಶಿಕ್ಷೆ ಮತ್ತು ₹ 5 ಸಾವಿರ ದಂಡ ವಿಧಿಸುವ ನಿಯಮವಿದೆ. ವಿಶ್ವವಿದ್ಯಾಲಯದವರು ಸಲ್ಲಿಸಿದ್ದ ಉತ್ತರವನ್ನು ಲೆಕ್ಕ ತಪಾಸಣೆಯಲ್ಲಿ ಒಪ್ಪಿರುವುದಿಲ್ಲ. ನಿಯಮ ಉಲ್ಲಂಘಿಸಿದ್ದಕ್ಕೆ ಕಾರ್ಯಕಾರಿ ಸಮಿತಿ ಸದಸ್ಯರು, ಕಟ್ಟಡ ಸಲಹಾ ಸಮಿತಿ ಸದಸ್ಯರು, ತಾಂತ್ರಿಕ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್, ಕಿರಿಯ ಎಂಜಿನಿಯರ್, ಹಣಕಾಸು ಅಧಿಕಾರಿಗಳು ಸಂಪೂರ್ಣ ಜವಾಬ್ದಾರರು ಎಂದು ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>