<p><strong>ಬೆಂಗಳೂರು:</strong> ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿದ್ದ ಶೇ 40ರ ಲಂಚ ಕುರಿತು ನ್ಯಾಯಮೂರ್ತಿ ನಾಗಮೋಹನ್ದಾಸ್ ನೇತೃತ್ವದ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಮಂಡಿಸಲಾಯಿತು. ಈ ವರದಿಯ ಆಧಾರದಲ್ಲಿ ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಂಪುಟ ಸಭೆಯ ಬಳಿಕ ಈ ಕುರಿತು ವಿವರ ನೀಡಿದರು. ಶೇ 40 ಲಂಚ ನೀಡಿರುವುದು ಯಾವುದಾದರೂ ಪ್ರಕರಣಗಳಲ್ಲಿ ದೃಢಪಟ್ಟಿದೆಯೇ ಎಂಬ ಪ್ರಶ್ನೆಗೆ ಪಾಟೀಲ ಅವರು ನೇರ ಉತ್ತರ ನೀಡಲಿಲ್ಲ. ಇನ್ನಷ್ಟೇ ಅಧ್ಯಯನ ಮಾಡಬೇಕಿದೆ ಎಂದರು.</p>.<p>ಆಯೋಗವು ಮೂರು ಲಕ್ಷ ಕಾಮಗಾರಿಗಳಲ್ಲಿ 1729 ಕಾಮಗಾರಿಗಳನ್ನು ಸ್ಯಾಂಪಲ್ ಆಗಿ ತೆಗೆದುಕೊಂಡು ಪರಿಶೀಲನೆ ನಡೆಸಿದೆ. ಕೆಲವು ಪ್ರಕರಣಗಳಲ್ಲಿ ವ್ಯತ್ಯಾಸಗಳಿವೆ. ಕೆಲವು ಕಾಮಗಾರಿಗಳಲ್ಲಿ ಹೆಚ್ಚು ಹಣ ಪಾವತಿಯಾಗಿದೆ. ಕೆಲವು ಕಾಮಗಾರಿಗಳ ಬಗ್ಗೆ ಸಂಶಯವಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪವಾಗಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ತನಿಖೆಗೆ ಎಸ್ಐಟಿ ರಚಿಸಲು ತೀರ್ಮಾನಿಸಲಾಯಿತು. ಎಸ್ಐಟಿಯಲ್ಲಿ ಪರಿಗಣಿತರು, ಅಧಿಕಾರಿಗಳು ಇರಲಿದ್ದಾರೆ ಎಂದು ಪಾಟೀಲ ತಿಳಿಸಿದರು.</p>.ಬಿಜೆಪಿ ಅವಧಿಯಲ್ಲಿ ಶೇ 40 ಕಮಿಷನ್: ದಿಗ್ವಿಜಯ್ ಸಿಂಗ್ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿದ್ದ ಶೇ 40ರ ಲಂಚ ಕುರಿತು ನ್ಯಾಯಮೂರ್ತಿ ನಾಗಮೋಹನ್ದಾಸ್ ನೇತೃತ್ವದ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಮಂಡಿಸಲಾಯಿತು. ಈ ವರದಿಯ ಆಧಾರದಲ್ಲಿ ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಂಪುಟ ಸಭೆಯ ಬಳಿಕ ಈ ಕುರಿತು ವಿವರ ನೀಡಿದರು. ಶೇ 40 ಲಂಚ ನೀಡಿರುವುದು ಯಾವುದಾದರೂ ಪ್ರಕರಣಗಳಲ್ಲಿ ದೃಢಪಟ್ಟಿದೆಯೇ ಎಂಬ ಪ್ರಶ್ನೆಗೆ ಪಾಟೀಲ ಅವರು ನೇರ ಉತ್ತರ ನೀಡಲಿಲ್ಲ. ಇನ್ನಷ್ಟೇ ಅಧ್ಯಯನ ಮಾಡಬೇಕಿದೆ ಎಂದರು.</p>.<p>ಆಯೋಗವು ಮೂರು ಲಕ್ಷ ಕಾಮಗಾರಿಗಳಲ್ಲಿ 1729 ಕಾಮಗಾರಿಗಳನ್ನು ಸ್ಯಾಂಪಲ್ ಆಗಿ ತೆಗೆದುಕೊಂಡು ಪರಿಶೀಲನೆ ನಡೆಸಿದೆ. ಕೆಲವು ಪ್ರಕರಣಗಳಲ್ಲಿ ವ್ಯತ್ಯಾಸಗಳಿವೆ. ಕೆಲವು ಕಾಮಗಾರಿಗಳಲ್ಲಿ ಹೆಚ್ಚು ಹಣ ಪಾವತಿಯಾಗಿದೆ. ಕೆಲವು ಕಾಮಗಾರಿಗಳ ಬಗ್ಗೆ ಸಂಶಯವಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪವಾಗಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ತನಿಖೆಗೆ ಎಸ್ಐಟಿ ರಚಿಸಲು ತೀರ್ಮಾನಿಸಲಾಯಿತು. ಎಸ್ಐಟಿಯಲ್ಲಿ ಪರಿಗಣಿತರು, ಅಧಿಕಾರಿಗಳು ಇರಲಿದ್ದಾರೆ ಎಂದು ಪಾಟೀಲ ತಿಳಿಸಿದರು.</p>.ಬಿಜೆಪಿ ಅವಧಿಯಲ್ಲಿ ಶೇ 40 ಕಮಿಷನ್: ದಿಗ್ವಿಜಯ್ ಸಿಂಗ್ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>