<p>ಬೆಂಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ₹4,000 ಕೋಟಿ ವೆಚ್ಚದಲ್ಲಿ ಯಾದಗಿರಿ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಯಾದಗಿರಿ ಜಿಲ್ಲೆಯ ಎಲ್ಲ ಗ್ರಾಮೀಣ ಜನವಸತಿಗಳಿಗೆ ಹಾಗೂ 3 ನಗರ ಸ್ಥಳೀಯ ಸಂಸ್ಥೆಗಳಾದ ಕಕ್ಕೆರಾ, ಕೆಂಭಾವಿ ಮತ್ತು ಹುಣಸಗಿ ಪಟ್ಟಣಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ₹2,054 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ಅವರು ಹೇಳಿದರು.</p>.<p>* ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿ ತಾಲ್ಲೂಕಿನ ಬೋರನಕಣಿವೆ ಅಣೆಕಟ್ಟಿನಿಂದ ಗಾಣದಾಳು, ಹೊಯ್ಸಳಕಟ್ಟೆ, ಕೆಂಕೆರೆ, ಬರಕನಾಳು, ದೊಡ್ಡ ಬಿದರೆ ಮತ್ತು ದಸೂಡಿ ಗ್ರಾಮ ಪಂಚಾಯಿತಿಗಳ 147 ಜನ ವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ₹115 ಕೋಟಿ ಅಂದಾಜು ವೆಚ್ಚದಲ್ಲಿ ಜಾರಿಗೆ ಒಪ್ಪಿಗೆ.</p>.<p>*ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ 398 ಜನವಸತಿಗಳಿಗೆ ಹೇಮಾವತಿ ನದಿಯಿಂದ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ₹435 ಕೋಟಿ ಅಂದಾಜು ವೆಚ್ಚದಲ್ಲಿ ಜಾರಿಗೆ ಅನುಮೋದನೆ.</p>.<p>*ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತ್ತು ಸಿಂದಗಿ ಪಟ್ಟಣಗಳು ಹಾಗೂ ಇವೆರಡೂ ತಾಲ್ಲೂಕುಗಳಲ್ಲಿನ ಎಲ್ಲಾ ಗ್ರಾಮೀಣ ಜನವಸತಿಗಳು, ದೇವರ ಹಿಪ್ಪರಗಿ, ಆಲ್ಮೇಲ್, ತಾಳಿಕೋಟೆ ಮತ್ತು ನಲತವಾಡ್ಗಳಲ್ಲಿ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ ₹1,358 ಕೋಟಿ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ.</p>.<p>* ಹಾವೇರಿ ಜಿಲ್ಲೆಯ 285 ಜನವಸತಿಗಳಿಗೆ ₹837 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಗೆ ಒಪ್ಪಿಗೆ.</p>.<p>*ಚಳ್ಳಕೆರೆ ತಾಲ್ಲೂಕಿನ ಮೈಲನಹಳ್ಳಿ ಗ್ರಾಮದ ಬಳಿ ವೇದಾವತಿ ನದಿಗೆ ಅಡ್ಡಲಾಗಿ ₹19.90 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.</p>.<p>* ಮಂಗಳೂರಿನ ಉಳ್ಳಾಲ ನಗರಸಭಾ ವ್ಯಾಪ್ತಿ ಕೋಟೆಕಾರ್ ಪಟ್ಟಣ ಪಂಚಾಯಿತಿ, ಸೋಮೇಶ್ವರ ಪುರಸಭೆ ವ್ಯಾಪ್ತಿಯ 24 ಗ್ರಾಮಗಳ ಕುಡಿಯುವ ನೀರು ಸರಬರಾಜು ಯೋಜನೆಯ ₹249.98 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.</p>.<p>* ಶಿರಸಿ ತಾಲ್ಲೂಕಿನ ಖಾನಾಪುರ, ತಾಳಗುಪ್ಪ ರಸ್ತೆಯ ರಾಜ್ಯ ಹೆದ್ದಾರಿ 93 ರ ಐದು ರಸ್ತೆ, ವೃತ್ತಗಳ ಸುಧಾರಣೆಗೆ ₹14.72 ಕೋಟಿ ವೆಚ್ಚದಲ್ಲಿ ಭೂಸ್ವಾದೀನಪಡಿಸಿಕೊಳ್ಳಲು ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ಒಪ್ಪಿಗೆ.</p>.<p>*ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಈ ತಿಂಗಳು (ಜುಲೈ) ನಡೆಸುವುದಿಲ್ಲ, ಆಗಸ್ಟ್ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ₹4,000 ಕೋಟಿ ವೆಚ್ಚದಲ್ಲಿ ಯಾದಗಿರಿ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಯಾದಗಿರಿ ಜಿಲ್ಲೆಯ ಎಲ್ಲ ಗ್ರಾಮೀಣ ಜನವಸತಿಗಳಿಗೆ ಹಾಗೂ 3 ನಗರ ಸ್ಥಳೀಯ ಸಂಸ್ಥೆಗಳಾದ ಕಕ್ಕೆರಾ, ಕೆಂಭಾವಿ ಮತ್ತು ಹುಣಸಗಿ ಪಟ್ಟಣಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ₹2,054 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ಅವರು ಹೇಳಿದರು.</p>.<p>* ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿ ತಾಲ್ಲೂಕಿನ ಬೋರನಕಣಿವೆ ಅಣೆಕಟ್ಟಿನಿಂದ ಗಾಣದಾಳು, ಹೊಯ್ಸಳಕಟ್ಟೆ, ಕೆಂಕೆರೆ, ಬರಕನಾಳು, ದೊಡ್ಡ ಬಿದರೆ ಮತ್ತು ದಸೂಡಿ ಗ್ರಾಮ ಪಂಚಾಯಿತಿಗಳ 147 ಜನ ವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ₹115 ಕೋಟಿ ಅಂದಾಜು ವೆಚ್ಚದಲ್ಲಿ ಜಾರಿಗೆ ಒಪ್ಪಿಗೆ.</p>.<p>*ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ 398 ಜನವಸತಿಗಳಿಗೆ ಹೇಮಾವತಿ ನದಿಯಿಂದ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ₹435 ಕೋಟಿ ಅಂದಾಜು ವೆಚ್ಚದಲ್ಲಿ ಜಾರಿಗೆ ಅನುಮೋದನೆ.</p>.<p>*ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತ್ತು ಸಿಂದಗಿ ಪಟ್ಟಣಗಳು ಹಾಗೂ ಇವೆರಡೂ ತಾಲ್ಲೂಕುಗಳಲ್ಲಿನ ಎಲ್ಲಾ ಗ್ರಾಮೀಣ ಜನವಸತಿಗಳು, ದೇವರ ಹಿಪ್ಪರಗಿ, ಆಲ್ಮೇಲ್, ತಾಳಿಕೋಟೆ ಮತ್ತು ನಲತವಾಡ್ಗಳಲ್ಲಿ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ ₹1,358 ಕೋಟಿ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ.</p>.<p>* ಹಾವೇರಿ ಜಿಲ್ಲೆಯ 285 ಜನವಸತಿಗಳಿಗೆ ₹837 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಗೆ ಒಪ್ಪಿಗೆ.</p>.<p>*ಚಳ್ಳಕೆರೆ ತಾಲ್ಲೂಕಿನ ಮೈಲನಹಳ್ಳಿ ಗ್ರಾಮದ ಬಳಿ ವೇದಾವತಿ ನದಿಗೆ ಅಡ್ಡಲಾಗಿ ₹19.90 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.</p>.<p>* ಮಂಗಳೂರಿನ ಉಳ್ಳಾಲ ನಗರಸಭಾ ವ್ಯಾಪ್ತಿ ಕೋಟೆಕಾರ್ ಪಟ್ಟಣ ಪಂಚಾಯಿತಿ, ಸೋಮೇಶ್ವರ ಪುರಸಭೆ ವ್ಯಾಪ್ತಿಯ 24 ಗ್ರಾಮಗಳ ಕುಡಿಯುವ ನೀರು ಸರಬರಾಜು ಯೋಜನೆಯ ₹249.98 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.</p>.<p>* ಶಿರಸಿ ತಾಲ್ಲೂಕಿನ ಖಾನಾಪುರ, ತಾಳಗುಪ್ಪ ರಸ್ತೆಯ ರಾಜ್ಯ ಹೆದ್ದಾರಿ 93 ರ ಐದು ರಸ್ತೆ, ವೃತ್ತಗಳ ಸುಧಾರಣೆಗೆ ₹14.72 ಕೋಟಿ ವೆಚ್ಚದಲ್ಲಿ ಭೂಸ್ವಾದೀನಪಡಿಸಿಕೊಳ್ಳಲು ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ಒಪ್ಪಿಗೆ.</p>.<p>*ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಈ ತಿಂಗಳು (ಜುಲೈ) ನಡೆಸುವುದಿಲ್ಲ, ಆಗಸ್ಟ್ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>