<p><strong>ಹಾವೇರಿ:</strong> ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಬಿಸಿಲಿನ ಝಳ ಹೆಚ್ಚಿದ್ದು, ಗುರುವಾರ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 19.60 ಡಿಗ್ರಿ ಸೆಲ್ಸಿಯಸ್ ಇತ್ತು.</p>.<p>ಬುಧವಾರ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ಗೆ ತಲುಪಿತ್ತು. ಆದರೆ, ಸಂಜೆಯ ವೇಳೆಗೆ ಜಿಲ್ಲೆಯ ವಿವಿಧೆಡೆ ಮಳೆಯಾಗಿತ್ತು.</p>.<p>‘ಈಚಿನ ಕೆಲ ವರ್ಷಗಳ ವಾಡಿಕೆಯಂತೆ ಏಪ್ರಿಲ್ ತಿಂಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಈ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ 2 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಿದೆ. ಅಧಿಕ ತಾಪಮಾನದ ಪರಿಣಾಮ ವಾಯುಭಾರದಲ್ಲಿ ವ್ಯತ್ಯಯವಾಗಿ ಸಂಜೆ ವೇಳೆ ಮಳೆ ಬರುತ್ತಿದೆ’ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಘಟಕದ ಮೂಲಗಳು ತಿಳಿಸಿವೆ.</p>.<p>‘ಮಧ್ಯಾಹ್ನ 12 ಗಂಟೆ ಬಳಿಕ ಅಂಗಡಿಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಮಧ್ಯಾಹ್ನ ಮನೆಗೆ ಹೋಗುತ್ತೇವೆ. ಸಂಜೆ 4ರ ಬಳಿಕವೇ ಅಂಗಡಿ ತೆರೆಯುತ್ತೇವೆ’ ಎಂದು ರಟ್ಟೀಹಳ್ಳಿಯ 75ರ ಹರೆಯದ ವ್ಯಾಪಾರಿ ಮಾರುತೆಪ್ಪ ಸುಣಗಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಬಿಸಿಲಿನ ಝಳ ಹೆಚ್ಚಿದ್ದು, ಗುರುವಾರ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 19.60 ಡಿಗ್ರಿ ಸೆಲ್ಸಿಯಸ್ ಇತ್ತು.</p>.<p>ಬುಧವಾರ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ಗೆ ತಲುಪಿತ್ತು. ಆದರೆ, ಸಂಜೆಯ ವೇಳೆಗೆ ಜಿಲ್ಲೆಯ ವಿವಿಧೆಡೆ ಮಳೆಯಾಗಿತ್ತು.</p>.<p>‘ಈಚಿನ ಕೆಲ ವರ್ಷಗಳ ವಾಡಿಕೆಯಂತೆ ಏಪ್ರಿಲ್ ತಿಂಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಈ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ 2 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಿದೆ. ಅಧಿಕ ತಾಪಮಾನದ ಪರಿಣಾಮ ವಾಯುಭಾರದಲ್ಲಿ ವ್ಯತ್ಯಯವಾಗಿ ಸಂಜೆ ವೇಳೆ ಮಳೆ ಬರುತ್ತಿದೆ’ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಘಟಕದ ಮೂಲಗಳು ತಿಳಿಸಿವೆ.</p>.<p>‘ಮಧ್ಯಾಹ್ನ 12 ಗಂಟೆ ಬಳಿಕ ಅಂಗಡಿಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಮಧ್ಯಾಹ್ನ ಮನೆಗೆ ಹೋಗುತ್ತೇವೆ. ಸಂಜೆ 4ರ ಬಳಿಕವೇ ಅಂಗಡಿ ತೆರೆಯುತ್ತೇವೆ’ ಎಂದು ರಟ್ಟೀಹಳ್ಳಿಯ 75ರ ಹರೆಯದ ವ್ಯಾಪಾರಿ ಮಾರುತೆಪ್ಪ ಸುಣಗಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>