<p><strong>ಬೆಂಗಳೂರು: </strong>ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿರುವ ಬೆನ್ನಲ್ಲೇ ರಾಜ್ಯದಾದ್ಯಂತ ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಂಘಟನೆಗಳಿಗೆ ಸೇರಿದ್ದ 42 ಕಚೇರಿಗಳಿಗೆ ಬೀಗ ಹಾಕಿದರು.</p>.<p>ಕಲಬುರಗಿ, ಬೀದರ್, ಕೊಪ್ಪಳ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಹಾಗೂ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಂಘಟನೆಗಳಿಗೆ ಸೇರಿದ್ದ ಆಸ್ತಿಗಳನ್ನು ಗುರುತಿಸಿ ಶೋಧ ನಡೆಸಿದರು. ತಾಲ್ಲೂಕು ದಂಡಾಧಿಕಾರಿ ಸಮ್ಮುಖದಲ್ಲಿ ಕಚೇರಿಗಳಿಗೆ ಬೀಗಮುದ್ರೆ ಹಾಕಿದರು.</p>.<p>ನಿಷೇಧ ಆದೇಶ ಜಾರಿ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೃಹ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸೂಚನೆ ಸಹ ನೀಡಿದ್ದರು.</p>.<p>ಕಾರ್ಯಾಚರಣೆ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ‘ಬೆಂಗಳೂರು ಹೊರತುಪಡಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪಿಎಫ್ಐನ 38 ಕಚೇರಿಗಳಿಗೆ ಬೀಗ ಹಾಕಲಾಗಿದೆ. ಬೆಂಗಳೂರಿನ ಪೊಲೀಸರು ನಾಲ್ಕು ಕಚೇರಿಗಳಿಗೆ ಬೀಗ ಹಾಕಿ ಜಪ್ತಿ ಮಾಡಿದ್ದಾರೆ’ ಎಂದರು.</p>.<p class="Subhead">ನಾಲ್ವರು ವಶಕ್ಕೆ: ನಿಷೇಧದ ಬಳಿಕವೂ ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪಿಎಫ್ಐ ಕಚೇರಿ ತೆರೆದಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>‘ಹಲಸೂರು ಗೇಟ್, ಹೈಗ್ರೌಂಡ್ಸ್ ಹಾಗೂ ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿದ್ದ ಪಿಎಫ್ಐನ ನಾಲ್ಕು ಕಚೇರಿಗಳಿಗೆ ಬೀಗ ಹಾಕಲಾಗಿದೆ. ಕಚೇರಿಗಳ ಬಳಿ ಭದ್ರತೆಗಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಬೆಂಗಳೂರು ಕಮಿಷನರೇಟ್ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿರುವ ಬೆನ್ನಲ್ಲೇ ರಾಜ್ಯದಾದ್ಯಂತ ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಂಘಟನೆಗಳಿಗೆ ಸೇರಿದ್ದ 42 ಕಚೇರಿಗಳಿಗೆ ಬೀಗ ಹಾಕಿದರು.</p>.<p>ಕಲಬುರಗಿ, ಬೀದರ್, ಕೊಪ್ಪಳ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಹಾಗೂ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಂಘಟನೆಗಳಿಗೆ ಸೇರಿದ್ದ ಆಸ್ತಿಗಳನ್ನು ಗುರುತಿಸಿ ಶೋಧ ನಡೆಸಿದರು. ತಾಲ್ಲೂಕು ದಂಡಾಧಿಕಾರಿ ಸಮ್ಮುಖದಲ್ಲಿ ಕಚೇರಿಗಳಿಗೆ ಬೀಗಮುದ್ರೆ ಹಾಕಿದರು.</p>.<p>ನಿಷೇಧ ಆದೇಶ ಜಾರಿ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೃಹ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸೂಚನೆ ಸಹ ನೀಡಿದ್ದರು.</p>.<p>ಕಾರ್ಯಾಚರಣೆ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ‘ಬೆಂಗಳೂರು ಹೊರತುಪಡಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪಿಎಫ್ಐನ 38 ಕಚೇರಿಗಳಿಗೆ ಬೀಗ ಹಾಕಲಾಗಿದೆ. ಬೆಂಗಳೂರಿನ ಪೊಲೀಸರು ನಾಲ್ಕು ಕಚೇರಿಗಳಿಗೆ ಬೀಗ ಹಾಕಿ ಜಪ್ತಿ ಮಾಡಿದ್ದಾರೆ’ ಎಂದರು.</p>.<p class="Subhead">ನಾಲ್ವರು ವಶಕ್ಕೆ: ನಿಷೇಧದ ಬಳಿಕವೂ ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪಿಎಫ್ಐ ಕಚೇರಿ ತೆರೆದಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>‘ಹಲಸೂರು ಗೇಟ್, ಹೈಗ್ರೌಂಡ್ಸ್ ಹಾಗೂ ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿದ್ದ ಪಿಎಫ್ಐನ ನಾಲ್ಕು ಕಚೇರಿಗಳಿಗೆ ಬೀಗ ಹಾಕಲಾಗಿದೆ. ಕಚೇರಿಗಳ ಬಳಿ ಭದ್ರತೆಗಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಬೆಂಗಳೂರು ಕಮಿಷನರೇಟ್ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>