<p><strong>ಬೆಂಗಳೂರು:</strong> ಪ್ರಸಕ್ತ ಸಾಲಿನಲ್ಲಿ ಜೂನ್ನಿಂದ ಅಕ್ಟೋಬರ್ ತಿಂಗಳವರೆಗಿನ ಐದು ತಿಂಗಳ ಅವಧಿಗೆ ಮಧ್ಯಾಹ್ನ ಉಪಾಹಾರ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ₹ 449.87 ಕೋಟಿ ಅನುದಾನ ಬಿಡುಗಡೆ ಮಾಡಿದೆ.</p>.<p>ಒಂದನೇ ತರಗತಿಯಿಂದ 10ನೇ ತರಗತಿವರೆಗೆ ಅರ್ಹ ಮಕ್ಕಳಿಗೆ ಆಹಾರ ಧಾನ್ಯ ಮತ್ತು ಅಗತ್ಯ ಪ್ರಮಾಣದ ತೊಗರಿ ಬೇಳೆ ವಿತರಿಸಲು ಈ ಅನುದಾನ ಬಳಕೆ ಆಗಲಿದೆ. ಕೊರೊನಾ ಸೋಂಕಿನ ಕಾರಣ ಶಾಲಾ ಮಕ್ಕಳಿಗೆ ವಿತರಿಸಲು ಶಾಲಾ ಹಂತದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಸಮಗ್ರವಾದ ಮಾರ್ಗಸೂಚಿಯನ್ನು ಇಲಾಖೆಯ ಆಯುಕ್ತರು ಹೊರಡಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.</p>.<p>ಮಧ್ಯಾಹ್ನ ಉಪಾಹಾರ ಯೋಜನೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಶೀಘ್ರ ವೆಚ್ಚ ಮಾಡಿ, ಕೇಂದ್ರ ಸರ್ಕಾರದ ಪಾಲಿನ ಎರಡನೇ ಕಂತಿನ ಅನುದಾನ ಬಿಡುಗಡೆ ಮಾಡಲು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲು ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದೂ ಆದೇಶ ಹೇಳಲಾಗಿದೆ.</p>.<p>‘ಈ ಅವಧಿಯ ಆಹಾರ ಧಾನ್ಯಗಳನ್ನು ವಿತರಿಸಲು ಇಲಾಖೆಯು ತುರ್ತು ಕ್ರಮ ತೆಗೆದುಕೊಳ್ಳಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಸಕ್ತ ಸಾಲಿನಲ್ಲಿ ಜೂನ್ನಿಂದ ಅಕ್ಟೋಬರ್ ತಿಂಗಳವರೆಗಿನ ಐದು ತಿಂಗಳ ಅವಧಿಗೆ ಮಧ್ಯಾಹ್ನ ಉಪಾಹಾರ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ₹ 449.87 ಕೋಟಿ ಅನುದಾನ ಬಿಡುಗಡೆ ಮಾಡಿದೆ.</p>.<p>ಒಂದನೇ ತರಗತಿಯಿಂದ 10ನೇ ತರಗತಿವರೆಗೆ ಅರ್ಹ ಮಕ್ಕಳಿಗೆ ಆಹಾರ ಧಾನ್ಯ ಮತ್ತು ಅಗತ್ಯ ಪ್ರಮಾಣದ ತೊಗರಿ ಬೇಳೆ ವಿತರಿಸಲು ಈ ಅನುದಾನ ಬಳಕೆ ಆಗಲಿದೆ. ಕೊರೊನಾ ಸೋಂಕಿನ ಕಾರಣ ಶಾಲಾ ಮಕ್ಕಳಿಗೆ ವಿತರಿಸಲು ಶಾಲಾ ಹಂತದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಸಮಗ್ರವಾದ ಮಾರ್ಗಸೂಚಿಯನ್ನು ಇಲಾಖೆಯ ಆಯುಕ್ತರು ಹೊರಡಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.</p>.<p>ಮಧ್ಯಾಹ್ನ ಉಪಾಹಾರ ಯೋಜನೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಶೀಘ್ರ ವೆಚ್ಚ ಮಾಡಿ, ಕೇಂದ್ರ ಸರ್ಕಾರದ ಪಾಲಿನ ಎರಡನೇ ಕಂತಿನ ಅನುದಾನ ಬಿಡುಗಡೆ ಮಾಡಲು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲು ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದೂ ಆದೇಶ ಹೇಳಲಾಗಿದೆ.</p>.<p>‘ಈ ಅವಧಿಯ ಆಹಾರ ಧಾನ್ಯಗಳನ್ನು ವಿತರಿಸಲು ಇಲಾಖೆಯು ತುರ್ತು ಕ್ರಮ ತೆಗೆದುಕೊಳ್ಳಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>