<p><strong>ಬೆಂಗಳೂರು: </strong>ಕಾರ್ಮಿಕರು, ಆಟೊ, ಟ್ಯಾಕ್ಸಿ, ಟ್ರಕ್, ಬಸ್ ಚಾಲಕರೂ ಸೇರಿದಂತೆ ಮೆಕ್ಯಾನಿಕ್, ಕ್ಲೀನರ್ಗಳು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ ₹ 5 ಲಕ್ಷದವರೆಗೆ ಪರಿಹಾರ ನೀಡಲು ಕಾಯ್ದೆ ರೂಪಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದರು.</p>.<p>ಕಾರ್ಮಿಕರ ಬದುಕು ಹಸನಾಗಿಸಲು ಹಲವು ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕಾರ್ಮಿಕ ಅದಾಲತ್ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕಾರ್ಮಿಕರಿಗೆ ಸಹಾಯಧನ, ಮಕ್ಕಳ ವಿದ್ಯಾಭ್ಯಾಸ, ಮದುವೆ– ಮುಂಜಿಯಂತಹ ಸಂದರ್ಭದಲ್ಲಿ ಧನ ಸಹಾಯ ನೀಡಲು ವಿಶೇಷ ಕಾರ್ಯಕ್ರಮ ರೂಪಿಸ ಲಾಗುವುದು ಎಂದು ಹೇಳಿದರು.</p>.<p>ಆಟೊ, ಟ್ಯಾಕ್ಸಿ, ಟ್ರಕ್, ಬಸ್ ಚಾಲಕರೂ ಸೇರಿ ಮೆಕ್ಯಾನಿಕ್, ಕ್ಲೀನರ್ಗಳಿಗೂ ನೆರವಾಗುವುದು ಉದ್ದೇಶಿತ ಕಾಯ್ದೆಯ ಗುರಿ. ಇದಕ್ಕೆ ಸಂಪನ್ಮೂಲ ಸಂಗ್ರಹಿಸಲು ವಾಹನಗಳ ಮೇಲೆ 0.5 ವಿಶೇಷ ಸೆಸ್ ವಿಧಿಸಲು ಚಿಂತನೆ ನಡೆಸಲಾಗಿದೆ ಎಂದರು.</p>.<p>‘ಕಳೆದ ಒಂದು ವರ್ಷದಿಂದ ಕಾರ್ಮಿಕ ಸಚಿವನಾಗಿದ್ದು, ಕಾರ್ಮಿಕರ ಸಮಸ್ಯೆಗಳನ್ನು ಅರಿಯುವಲ್ಲಿ ಸಹಕಾರಿಯಾಗಿದೆ. ಸಂಘಟಿತ, ಅಸಂಘಟಿತ, ವಲಸೆ ಕಾರ್ಮಿಕರಿಗೆ ಪ್ರತ್ಯೇಕ ಕಾಯ್ದೆಗಳಿವೆ. ಎಲ್ಲ ಕಾರ್ಮಿಕರಿಗೂ ಅನುಕೂಲ ಆಗಲು ಹೊಸ ಕಾನೂನು ಜಾರಿ ಮಾಡಲಾಗುವುದು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು’ ಎಂದು ಹೇಳಿದರು.</p>.<p>ರಾಜ್ಯದ ಕಾರ್ಮಿಕರಿಗೆ ಸಂಬಂಧಿಸಿ ದಂತೆ ಹಲವಾರು ಸಮಸ್ಯೆಗಳು ಇಲಾಖೆಯ ವಿವಿಧ ಹಂತಗಳಲ್ಲಿ ಬಾಕಿ ಉಳಿದಿದ್ದು, ಈ ಎಲ್ಲ ಸಮಸ್ಯೆಗಳನ್ನು ಒಂದೇ ಬಾರಿಗೆ ಪರಿಹರಿಸಲು ಕಾರ್ಮಿಕ ಅದಾಲತ್ಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.</p>.<p>‘ರಾಜ್ಯದಲ್ಲಿ ವಲಸೆ ಕಾರ್ಮಿಕರಿಗೆ ವಸತಿ ಯೋಜನೆ ರೂಪಿಸಿದ್ದು, ಬೆಂಗಳೂರು, ಬೆಳಗಾವಿ, ಹಾಸನ, ಶಿವಮೊಗ್ಗ, ಮೈಸೂರು ಸೇರಿ ಹಲವೆಡೆ ವಸತಿ ಸಮುಚ್ಛಯ ನಿರ್ಮಿಸಲು ಚಿಂತನೆ ನಡೆಸಲಾಗಿದೆ’ ಎಂದು ಹೆಬ್ಬಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಾರ್ಮಿಕರು, ಆಟೊ, ಟ್ಯಾಕ್ಸಿ, ಟ್ರಕ್, ಬಸ್ ಚಾಲಕರೂ ಸೇರಿದಂತೆ ಮೆಕ್ಯಾನಿಕ್, ಕ್ಲೀನರ್ಗಳು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ ₹ 5 ಲಕ್ಷದವರೆಗೆ ಪರಿಹಾರ ನೀಡಲು ಕಾಯ್ದೆ ರೂಪಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದರು.</p>.<p>ಕಾರ್ಮಿಕರ ಬದುಕು ಹಸನಾಗಿಸಲು ಹಲವು ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕಾರ್ಮಿಕ ಅದಾಲತ್ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕಾರ್ಮಿಕರಿಗೆ ಸಹಾಯಧನ, ಮಕ್ಕಳ ವಿದ್ಯಾಭ್ಯಾಸ, ಮದುವೆ– ಮುಂಜಿಯಂತಹ ಸಂದರ್ಭದಲ್ಲಿ ಧನ ಸಹಾಯ ನೀಡಲು ವಿಶೇಷ ಕಾರ್ಯಕ್ರಮ ರೂಪಿಸ ಲಾಗುವುದು ಎಂದು ಹೇಳಿದರು.</p>.<p>ಆಟೊ, ಟ್ಯಾಕ್ಸಿ, ಟ್ರಕ್, ಬಸ್ ಚಾಲಕರೂ ಸೇರಿ ಮೆಕ್ಯಾನಿಕ್, ಕ್ಲೀನರ್ಗಳಿಗೂ ನೆರವಾಗುವುದು ಉದ್ದೇಶಿತ ಕಾಯ್ದೆಯ ಗುರಿ. ಇದಕ್ಕೆ ಸಂಪನ್ಮೂಲ ಸಂಗ್ರಹಿಸಲು ವಾಹನಗಳ ಮೇಲೆ 0.5 ವಿಶೇಷ ಸೆಸ್ ವಿಧಿಸಲು ಚಿಂತನೆ ನಡೆಸಲಾಗಿದೆ ಎಂದರು.</p>.<p>‘ಕಳೆದ ಒಂದು ವರ್ಷದಿಂದ ಕಾರ್ಮಿಕ ಸಚಿವನಾಗಿದ್ದು, ಕಾರ್ಮಿಕರ ಸಮಸ್ಯೆಗಳನ್ನು ಅರಿಯುವಲ್ಲಿ ಸಹಕಾರಿಯಾಗಿದೆ. ಸಂಘಟಿತ, ಅಸಂಘಟಿತ, ವಲಸೆ ಕಾರ್ಮಿಕರಿಗೆ ಪ್ರತ್ಯೇಕ ಕಾಯ್ದೆಗಳಿವೆ. ಎಲ್ಲ ಕಾರ್ಮಿಕರಿಗೂ ಅನುಕೂಲ ಆಗಲು ಹೊಸ ಕಾನೂನು ಜಾರಿ ಮಾಡಲಾಗುವುದು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು’ ಎಂದು ಹೇಳಿದರು.</p>.<p>ರಾಜ್ಯದ ಕಾರ್ಮಿಕರಿಗೆ ಸಂಬಂಧಿಸಿ ದಂತೆ ಹಲವಾರು ಸಮಸ್ಯೆಗಳು ಇಲಾಖೆಯ ವಿವಿಧ ಹಂತಗಳಲ್ಲಿ ಬಾಕಿ ಉಳಿದಿದ್ದು, ಈ ಎಲ್ಲ ಸಮಸ್ಯೆಗಳನ್ನು ಒಂದೇ ಬಾರಿಗೆ ಪರಿಹರಿಸಲು ಕಾರ್ಮಿಕ ಅದಾಲತ್ಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.</p>.<p>‘ರಾಜ್ಯದಲ್ಲಿ ವಲಸೆ ಕಾರ್ಮಿಕರಿಗೆ ವಸತಿ ಯೋಜನೆ ರೂಪಿಸಿದ್ದು, ಬೆಂಗಳೂರು, ಬೆಳಗಾವಿ, ಹಾಸನ, ಶಿವಮೊಗ್ಗ, ಮೈಸೂರು ಸೇರಿ ಹಲವೆಡೆ ವಸತಿ ಸಮುಚ್ಛಯ ನಿರ್ಮಿಸಲು ಚಿಂತನೆ ನಡೆಸಲಾಗಿದೆ’ ಎಂದು ಹೆಬ್ಬಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>