<p><strong>ಬೆಂಗಳೂರು</strong>: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿ 60 ವರ್ಷ ತುಂಬಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ ₹5 ಲಕ್ಷ ಇಡುಗಂಟು ನೀಡಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. </p>.<p>ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ 2024ರಲ್ಲಿ ಅತಿಥಿ ಉಪನ್ಯಾಸಕರು ನಡೆಸಿದ್ದ ಧರಣಿ, ಪಾದಯಾತ್ರೆಯ ನಂತರ ಸರ್ಕಾರ ನಡೆಸಿದ ಮಾತುಕತೆಯಲ್ಲಿ ಇಡುಗಂಟು ನೀಡುವ ಭರವಸೆಯೂ ಸೇರಿತ್ತು. ಅಂದು ನೀಡಿದ್ದ ಭರವಸೆಯಂತೆ ಉನ್ನತ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.</p>.<p>ಇಡುಗಂಟು ಯೋಜನೆ ಜನವರಿ 2024ರಿಂದಲೇ ಪೂರ್ವಾನ್ವಯವಾಗಲಿದ್ದು, ಆ ದಿನಾಂಕಕ್ಕೆ ಹಾಗೂ ನಂತರ 60 ವರ್ಷ ಪೂರೈಸಿದ ಎಲ್ಲರಿಗೂ ಸೌಲಭ್ಯ ಸಿಗಲಿದೆ. 2024ರ ಜನವರಿ 1ಕ್ಕಿಂತ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ದಾಟಿದವರು ಇಟುಗಂಟು ಸೌಲಭ್ಯ ಪಡೆಯಬಹುದು.</p>.<p>ಆಯಾ ಕಾಲೇಜುಗಳ ಪ್ರಾಂಶುಪಾಲರು ಸೇವಾ ದೃಢೀಕರಣ ಪತ್ರ ನೀಡಬೇಕು. ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ವರ್ಷಗಳ ಆಧಾರದಲ್ಲಿ ಪ್ರತಿ ವರ್ಷಕ್ಕೆ ₹50 ಸಾವಿರದಂತೆ ಗರಿಷ್ಠ 10 ವರ್ಷಗಳ ಸೇವೆಯನ್ನು ಪರಿಗಣಿಸಲಾಗುವುದು. ಆಯಾ ಶೈಕ್ಷಣಿಕ ವರ್ಷದಲ್ಲಿ 240 ದಿನಗಳು ಕೆಲಸ ಮಾಡಿರಬೇಕು. 8 ತಿಂಗಳಿಗಿಂತ ಕಡಿಮೆ ಅವಧಿ ಕೆಲಸ ಮಾಡಿದ್ದರೆ ಅದನ್ನು ಭಾಗಶಃ ವರ್ಷ ಎಂದು ಲೆಕ್ಕಕ್ಕೆ ತೆಗೆದುಕೊಳ್ಳಲಾಗುವುದು. ಕೆಲಸದ ಅವಧಿಯಲ್ಲೇ ಮರಣ ಹೊಂದಿದರೆ ಅವರ ಕುಟುಂಬಕ್ಕೆ ಮೊತ್ತವನ್ನು ಹಸ್ತಾಂತರಿಸಲಾಗುವುದು ಎಂದು ಆದೇಶದಲ್ಲಿ ವಿವರಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿ 60 ವರ್ಷ ತುಂಬಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ ₹5 ಲಕ್ಷ ಇಡುಗಂಟು ನೀಡಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. </p>.<p>ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ 2024ರಲ್ಲಿ ಅತಿಥಿ ಉಪನ್ಯಾಸಕರು ನಡೆಸಿದ್ದ ಧರಣಿ, ಪಾದಯಾತ್ರೆಯ ನಂತರ ಸರ್ಕಾರ ನಡೆಸಿದ ಮಾತುಕತೆಯಲ್ಲಿ ಇಡುಗಂಟು ನೀಡುವ ಭರವಸೆಯೂ ಸೇರಿತ್ತು. ಅಂದು ನೀಡಿದ್ದ ಭರವಸೆಯಂತೆ ಉನ್ನತ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.</p>.<p>ಇಡುಗಂಟು ಯೋಜನೆ ಜನವರಿ 2024ರಿಂದಲೇ ಪೂರ್ವಾನ್ವಯವಾಗಲಿದ್ದು, ಆ ದಿನಾಂಕಕ್ಕೆ ಹಾಗೂ ನಂತರ 60 ವರ್ಷ ಪೂರೈಸಿದ ಎಲ್ಲರಿಗೂ ಸೌಲಭ್ಯ ಸಿಗಲಿದೆ. 2024ರ ಜನವರಿ 1ಕ್ಕಿಂತ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ದಾಟಿದವರು ಇಟುಗಂಟು ಸೌಲಭ್ಯ ಪಡೆಯಬಹುದು.</p>.<p>ಆಯಾ ಕಾಲೇಜುಗಳ ಪ್ರಾಂಶುಪಾಲರು ಸೇವಾ ದೃಢೀಕರಣ ಪತ್ರ ನೀಡಬೇಕು. ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ವರ್ಷಗಳ ಆಧಾರದಲ್ಲಿ ಪ್ರತಿ ವರ್ಷಕ್ಕೆ ₹50 ಸಾವಿರದಂತೆ ಗರಿಷ್ಠ 10 ವರ್ಷಗಳ ಸೇವೆಯನ್ನು ಪರಿಗಣಿಸಲಾಗುವುದು. ಆಯಾ ಶೈಕ್ಷಣಿಕ ವರ್ಷದಲ್ಲಿ 240 ದಿನಗಳು ಕೆಲಸ ಮಾಡಿರಬೇಕು. 8 ತಿಂಗಳಿಗಿಂತ ಕಡಿಮೆ ಅವಧಿ ಕೆಲಸ ಮಾಡಿದ್ದರೆ ಅದನ್ನು ಭಾಗಶಃ ವರ್ಷ ಎಂದು ಲೆಕ್ಕಕ್ಕೆ ತೆಗೆದುಕೊಳ್ಳಲಾಗುವುದು. ಕೆಲಸದ ಅವಧಿಯಲ್ಲೇ ಮರಣ ಹೊಂದಿದರೆ ಅವರ ಕುಟುಂಬಕ್ಕೆ ಮೊತ್ತವನ್ನು ಹಸ್ತಾಂತರಿಸಲಾಗುವುದು ಎಂದು ಆದೇಶದಲ್ಲಿ ವಿವರಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>