<p><strong>ಹುಬ್ಬಳ್ಳಿ: </strong>ವಿಶ್ವ ಬುದ್ಧ ಧಮ್ಮ ಸಂಘದಿಂದ ನಗರದಲ್ಲಿ ಭಾನುವಾರ ನಡೆದ ಉತ್ತರ ಕರ್ನಾಟಕ ವಿಭಾಗ ಮಟ್ಟದ ಧಮ್ಮ ದೀಕ್ಷಾ ಸಮಾರಂಭದಲ್ಲಿ, ಸುಮಾರು 500 ಮಂದಿ ಬೌದ್ಧ ಧರ್ಮ ಸ್ವೀಕರಿಸಿದರು.</p>.<p>ರೈಲ್ವೆ ಆಫೀಸರ್ಸ್ ಕಾಲೊನಿಯಲ್ಲಿರುವ ಬುದ್ಧ ವಿಹಾರದಲ್ಲಿ ಬೀದರ್ನ ಧಮ್ಮದೀಪ ಭಂತೇಜಿ ಹಾಗೂ ಸಂಗಡಿಗರು ದೀಕ್ಷೆ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು.</p>.<p>ಸಂಘದ ಪ್ರಧಾನ ಸಂಚಾಲಕ ಹಾಗೂ ನಾಗಸೇನಾ ಬುದ್ಧ ವಿಹಾರದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಮಾತನಾಡಿ, ‘ಬುದ್ಧನೆಡೆಗೆ ಮರಳಿ ಮನೆಗೆ’ ಎಂಬ ಘೋಷ ವಾಕ್ಯದಡಿ 1956ರಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಬೌದ್ಧ ಧಮ್ಮ ಸ್ವೀಕರಿಸಿದರು. ಅಂದಿನಿಂದ ನಿರಂತರವಾಗಿ ದೇಶದಾದ್ಯಂತ ಧಮ್ಮಯಾನ ನಡೆಯುತ್ತಿದೆ’<br />ಎಂದರು.</p>.<p>‘ಬೆಂಗಳೂರಿನಲ್ಲಿಅ.14ರಂದು ಮಹಾ ಧಮ್ಮ ದೀಕ್ಷಾ ಸಮಾರಂಭ ನಡೆಯಲಿದ್ದು, ಸುಮಾರು 10 ಲಕ್ಷ ಮಂದಿ ದೀಕ್ಷೆ ಪಡೆಯುವರು. ಧಮ್ಮ ಸ್ವೀಕಾರ ಎಂದರೆ ಮತಾಂತರವಲ್ಲ. ನಮ್ಮ ಮನೆಗೆ ನಾವು ಮರಳುವುದು ಎಂದರ್ಥ’ ಎಂದರು.</p>.<p>‘ಶೋಷಿತರು ಜಾತಿ ಸಂಕೋಲೆಯಿಂದ ಬಿಡುಗಡೆಯಾಗಲು ಧಮ್ಮ ಮಾರ್ಗವೇ ಪರಿಹಾರ. ಇದರಿಂದ ನವ ಬೌದ್ಧರ ಮೀಸಲಾತಿಗೆ ತೊಂದರೆಯಾಗುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದನ್ನು ಖಚಿತಪಡಿಸಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ವಿಶ್ವ ಬುದ್ಧ ಧಮ್ಮ ಸಂಘದಿಂದ ನಗರದಲ್ಲಿ ಭಾನುವಾರ ನಡೆದ ಉತ್ತರ ಕರ್ನಾಟಕ ವಿಭಾಗ ಮಟ್ಟದ ಧಮ್ಮ ದೀಕ್ಷಾ ಸಮಾರಂಭದಲ್ಲಿ, ಸುಮಾರು 500 ಮಂದಿ ಬೌದ್ಧ ಧರ್ಮ ಸ್ವೀಕರಿಸಿದರು.</p>.<p>ರೈಲ್ವೆ ಆಫೀಸರ್ಸ್ ಕಾಲೊನಿಯಲ್ಲಿರುವ ಬುದ್ಧ ವಿಹಾರದಲ್ಲಿ ಬೀದರ್ನ ಧಮ್ಮದೀಪ ಭಂತೇಜಿ ಹಾಗೂ ಸಂಗಡಿಗರು ದೀಕ್ಷೆ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು.</p>.<p>ಸಂಘದ ಪ್ರಧಾನ ಸಂಚಾಲಕ ಹಾಗೂ ನಾಗಸೇನಾ ಬುದ್ಧ ವಿಹಾರದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಮಾತನಾಡಿ, ‘ಬುದ್ಧನೆಡೆಗೆ ಮರಳಿ ಮನೆಗೆ’ ಎಂಬ ಘೋಷ ವಾಕ್ಯದಡಿ 1956ರಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಬೌದ್ಧ ಧಮ್ಮ ಸ್ವೀಕರಿಸಿದರು. ಅಂದಿನಿಂದ ನಿರಂತರವಾಗಿ ದೇಶದಾದ್ಯಂತ ಧಮ್ಮಯಾನ ನಡೆಯುತ್ತಿದೆ’<br />ಎಂದರು.</p>.<p>‘ಬೆಂಗಳೂರಿನಲ್ಲಿಅ.14ರಂದು ಮಹಾ ಧಮ್ಮ ದೀಕ್ಷಾ ಸಮಾರಂಭ ನಡೆಯಲಿದ್ದು, ಸುಮಾರು 10 ಲಕ್ಷ ಮಂದಿ ದೀಕ್ಷೆ ಪಡೆಯುವರು. ಧಮ್ಮ ಸ್ವೀಕಾರ ಎಂದರೆ ಮತಾಂತರವಲ್ಲ. ನಮ್ಮ ಮನೆಗೆ ನಾವು ಮರಳುವುದು ಎಂದರ್ಥ’ ಎಂದರು.</p>.<p>‘ಶೋಷಿತರು ಜಾತಿ ಸಂಕೋಲೆಯಿಂದ ಬಿಡುಗಡೆಯಾಗಲು ಧಮ್ಮ ಮಾರ್ಗವೇ ಪರಿಹಾರ. ಇದರಿಂದ ನವ ಬೌದ್ಧರ ಮೀಸಲಾತಿಗೆ ತೊಂದರೆಯಾಗುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದನ್ನು ಖಚಿತಪಡಿಸಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>