<p><strong>ಬೆಳಗಾವಿ:</strong> ಕರ್ನಾಟಕ ಹಾಗೂ ಗೋವಾ ನಡುವಿನ ಮಹದಾಯಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಗೋವಾ ಸಂಸದರೂ ಆಗಿರುವ ಕೇಂದ್ರ ಆಯುಷ್ ಸಚಿವ ಶ್ರೀಪಾದ ಯಸ್ಸೊ ನಾಯಕ ಇಲ್ಲಿ ಸೋಮವಾರ ಅಭಿಪ್ರಾಯಪಟ್ಟರು.</p>.<p>ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗೋವಾ-ಕರ್ನಾಟಕ ನೆರೆ–ಹೊರೆಯ ರಾಜ್ಯಗಳು. ಅಕ್ಕಪಕ್ಕದಲ್ಲಿ ಇರುವವರು ಒಬ್ಬರಿಗೊಬ್ಬರು ಆಗಬೇಕು. ಈ ವಿವಾದ ಇಷ್ಟೊಂದು ಮುಂದೆ ಹೋಗಬಾರದಿತ್ತು. ನಮಗೆ ಎದುರಾಗುವ ಸಂಕಷ್ಟಗಳನ್ನು ಒಟ್ಟಾಗಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕು’ ಎಂದು ಪ್ರತಿಕ್ರಿಯಿಸಿದರು.</p>.<p>ನ್ಯಾಯಮಂಡಳಿ ಒಳಗೆ ಅಥವಾ ಹೊರಗೆ ವಿವಾದವನ್ನು ಬೇಗನೆ ಇತ್ಯರ್ಥಪಡಿಸಬೇಕು. ಕುಡಿಯುವ ನೀರಿನ ವಿಚಾರವನ್ನು ಮಾನವೀಯತೆ ಆಧಾರದ ಮೇಲೆ ಪರಿಗಣಿಸಬೇಕು ಎಂದರು.</p>.<p>ಸಂಸದ ಸುರೇಶ ಅಂಗಡಿ ಮಾತನಾಡಿ, ‘ ಈ ವಿಚಾರವಾಗಿ, ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಗೋವಾ ಹಾಗೂ ಕರ್ನಾಟಕದವರು ಬಡಿದಾಡಲಿ ಎನ್ನುವುದು ಆ ಪಕ್ಷದ ಬಯಕೆ. ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರೇ ಕರ್ನಾಟಕಕ್ಕೆ ನೀರು ಕೊಡಬೇಡಿ ಎಂದಿದ್ದರು. ಹೀಗಿರುವಾಗ ವಿವಾದ ಹೇಗೆ ಬಗೆಹರಿಯುತ್ತದೆ?’ ಎಂದು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕರ್ನಾಟಕ ಹಾಗೂ ಗೋವಾ ನಡುವಿನ ಮಹದಾಯಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಗೋವಾ ಸಂಸದರೂ ಆಗಿರುವ ಕೇಂದ್ರ ಆಯುಷ್ ಸಚಿವ ಶ್ರೀಪಾದ ಯಸ್ಸೊ ನಾಯಕ ಇಲ್ಲಿ ಸೋಮವಾರ ಅಭಿಪ್ರಾಯಪಟ್ಟರು.</p>.<p>ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗೋವಾ-ಕರ್ನಾಟಕ ನೆರೆ–ಹೊರೆಯ ರಾಜ್ಯಗಳು. ಅಕ್ಕಪಕ್ಕದಲ್ಲಿ ಇರುವವರು ಒಬ್ಬರಿಗೊಬ್ಬರು ಆಗಬೇಕು. ಈ ವಿವಾದ ಇಷ್ಟೊಂದು ಮುಂದೆ ಹೋಗಬಾರದಿತ್ತು. ನಮಗೆ ಎದುರಾಗುವ ಸಂಕಷ್ಟಗಳನ್ನು ಒಟ್ಟಾಗಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕು’ ಎಂದು ಪ್ರತಿಕ್ರಿಯಿಸಿದರು.</p>.<p>ನ್ಯಾಯಮಂಡಳಿ ಒಳಗೆ ಅಥವಾ ಹೊರಗೆ ವಿವಾದವನ್ನು ಬೇಗನೆ ಇತ್ಯರ್ಥಪಡಿಸಬೇಕು. ಕುಡಿಯುವ ನೀರಿನ ವಿಚಾರವನ್ನು ಮಾನವೀಯತೆ ಆಧಾರದ ಮೇಲೆ ಪರಿಗಣಿಸಬೇಕು ಎಂದರು.</p>.<p>ಸಂಸದ ಸುರೇಶ ಅಂಗಡಿ ಮಾತನಾಡಿ, ‘ ಈ ವಿಚಾರವಾಗಿ, ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಗೋವಾ ಹಾಗೂ ಕರ್ನಾಟಕದವರು ಬಡಿದಾಡಲಿ ಎನ್ನುವುದು ಆ ಪಕ್ಷದ ಬಯಕೆ. ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರೇ ಕರ್ನಾಟಕಕ್ಕೆ ನೀರು ಕೊಡಬೇಡಿ ಎಂದಿದ್ದರು. ಹೀಗಿರುವಾಗ ವಿವಾದ ಹೇಗೆ ಬಗೆಹರಿಯುತ್ತದೆ?’ ಎಂದು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>