ಮಂಗಳವಾರ ಬೆಳಿಗ್ಗೆ 10.30ಕ್ಕೆ ಅಲಂಗಾರ್ನಿಂದ ಹೊರಡುವ ಸಿಪಿಎಂ ಕಾರ್ಯಕರ್ತರು, ವಿವಿಧ ಮುಂಚೂಣಿ ಸಂಘಟನೆಗಳ ಸದಸ್ಯರ ಬೃಹತ್ ಮೆರವಣಿಗೆ ಸ್ವರಾಜ್ ಮೈದಾನ ತಲುಪಲಿದೆ. ಅಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಪ್ರಧಾನ ಭಾಷಣ ಮಾಡುವರು. ಪಕ್ಷದ ಪಾಲಿಟ್ ಬ್ಯೂರೊ ಸದಸ್ಯ ಎಂ.ಎ.ಬೇಬಿ, ರಾಜ್ಯ ಮಂಡಳಿ ಕಾರ್ಯದರ್ಶಿ ಜಿ.ವಿ.ಶ್ರೀರಾಮ ರೆಡ್ಡಿ ಸೇರಿದಂತೆ ಹಲವು ನಾಯಕರು ಭಾಗವಹಿಸುವರು.