<p><strong>ಮಂಗಳೂರು: </strong>ಇಲ್ಲಿನ ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಬುಧವಾರ ಮಧ್ಯಾಹ್ನ ಬೈಕಿನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬೆನ್ನಟ್ಟಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.</p>.<p>ಕಾಟಿಪಳ್ಳ ಕೈಕಂಬ ನಿವಾಸಿ ದೀಪಕ್ (32) ಕೊಲೆಯಾದ ಯುವಕ. ಈತ ದೂರಸಂಪರ್ಕ ಕಂಪೆನಿಯೊಂದರ ಸಿಮ್ ವಿತರಕನಾಗಿದ್ದ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಈತನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶವವನ್ನು ಎ.ಜೆ. ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಆಸ್ಪತ್ರೆಗೆ ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಭೇಟಿ ನೀಡಿದ್ದಾರೆ.</p>.<p>ಮೃತ ದೀಪಕ್ ಮೊದಲು ಬಜರಂಗದಳದ ಕಾರ್ಯಕರ್ತನಾಗಿದ್ದ. ಈಗ ಬಿಜೆಪಿಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಅಲ್ಲಿ ಆತನಿಗೆ ಕೆಲವು ಜವಾಬ್ದಾರಿ ನೀಡಲಾಗಿತ್ತು. ಈತ ಮುಸ್ಲಿಂ ಸಮುದಾಯದ ಮಾಲೀಕರೊಬ್ಬರ ಮೊಬೈಲ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.</p>.<p>ಈದ್ ಮಿಲಾದ್ ಸಮಯದಲ್ಲೇ ಕೃಷ್ಣಾಪುರದಲ್ಲಿ ಕೋಲವೂ ಇತ್ತು. ಆಗ ದೀಪಕ್ ನೇತೃತ್ವದ ಹಿಂದೂ ಯುವಕರ ಗುಂಪು ಹಾಗೂ ಮುಸ್ಲಿಂ ಯುವಕರ ಗುಂಪಿನ ನಡುವೆ ಬ್ಯಾನರ್ ಕಟ್ಟುವ ಸ್ಥಳದ ವಿಚಾರದಲ್ಲಿ ಗಲಾಟೆ ನಡೆದಿತ್ತು ಎಂಬ ಮಾಹಿತಿ ಪೊಲೀಸರ ಪ್ರಾಥಮಿಕ ಪರಿಶೀಲನೆ ವೇಳೆ ಲಭ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಇಲ್ಲಿನ ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಬುಧವಾರ ಮಧ್ಯಾಹ್ನ ಬೈಕಿನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬೆನ್ನಟ್ಟಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.</p>.<p>ಕಾಟಿಪಳ್ಳ ಕೈಕಂಬ ನಿವಾಸಿ ದೀಪಕ್ (32) ಕೊಲೆಯಾದ ಯುವಕ. ಈತ ದೂರಸಂಪರ್ಕ ಕಂಪೆನಿಯೊಂದರ ಸಿಮ್ ವಿತರಕನಾಗಿದ್ದ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಈತನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶವವನ್ನು ಎ.ಜೆ. ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಆಸ್ಪತ್ರೆಗೆ ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಭೇಟಿ ನೀಡಿದ್ದಾರೆ.</p>.<p>ಮೃತ ದೀಪಕ್ ಮೊದಲು ಬಜರಂಗದಳದ ಕಾರ್ಯಕರ್ತನಾಗಿದ್ದ. ಈಗ ಬಿಜೆಪಿಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಅಲ್ಲಿ ಆತನಿಗೆ ಕೆಲವು ಜವಾಬ್ದಾರಿ ನೀಡಲಾಗಿತ್ತು. ಈತ ಮುಸ್ಲಿಂ ಸಮುದಾಯದ ಮಾಲೀಕರೊಬ್ಬರ ಮೊಬೈಲ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.</p>.<p>ಈದ್ ಮಿಲಾದ್ ಸಮಯದಲ್ಲೇ ಕೃಷ್ಣಾಪುರದಲ್ಲಿ ಕೋಲವೂ ಇತ್ತು. ಆಗ ದೀಪಕ್ ನೇತೃತ್ವದ ಹಿಂದೂ ಯುವಕರ ಗುಂಪು ಹಾಗೂ ಮುಸ್ಲಿಂ ಯುವಕರ ಗುಂಪಿನ ನಡುವೆ ಬ್ಯಾನರ್ ಕಟ್ಟುವ ಸ್ಥಳದ ವಿಚಾರದಲ್ಲಿ ಗಲಾಟೆ ನಡೆದಿತ್ತು ಎಂಬ ಮಾಹಿತಿ ಪೊಲೀಸರ ಪ್ರಾಥಮಿಕ ಪರಿಶೀಲನೆ ವೇಳೆ ಲಭ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>