<p><strong>ಬೆಂಗಳೂರು: </strong>ಹಕ್ಕಿಜ್ವರ ಕಾಣಿಸಿಕೊಂಡ ಕಾರಣ ಪರಿವೀಕ್ಷಣೆಗೆ ಕೇಂದ್ರ ತಂಡ ಗುರುವಾರ ನಗರಕ್ಕೆ ಬರಲಿದೆ ಎಂದು ಪಶು ಸಂಗೋಪನಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್ಕುಮಾರ್ ಖತ್ರಿ ತಿಳಿಸಿದರು.</p>.<p>ಉತ್ತರ ತಾಲ್ಲೂಕಿನ ಥಣಿಸಂದ್ರ ಬಳಿಯ ದಾಸರಹಳ್ಳಿಯ ಕೆ.ಜಿ.ಎನ್. ಕೋಳಿ ಮಾಂಸದ ಅಂಗಡಿಯಲ್ಲಿ ಹಕ್ಕಿಜ್ವರ (ಎಚ್5ಎನ್1) ಕಾಣಿಸಿಕೊಂಡ ಕಾರಣ ಬುಧವಾರ ಅಧಿಕಾರಿಗಳ ಸಭೆ ನಡೆಸಿದರು.</p>.<p>ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಕ್ಕಿಜ್ವರ ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ತಂಡ ನೀಡುವ ಸಲಹೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದರು.</p>.<p>ಕೋಳಿ ಫಾರಂನಿಂದ ಹಕ್ಕಿಜ್ವರ ಹರಡಿರುವ ಸಾಧ್ಯತೆ ಇಲ್ಲ. ಕೋಳಿ ಮಾಂಸದ ಅಂಗಡಿಯಿಂದ ಹರಡಿರುವ ಶಂಕೆ ಇದೆ. ಹೀಗಾಗಿ, ಶಂಕಿತ ಎರಡು ಅಂಗಡಿಗಳನ್ನು ಮುಚ್ಚಲಾಗಿದೆ. ಹಕ್ಕಿಜ್ವರ ಎಲ್ಲಿಂದ ಬಂದಿದೆ ಎಂದು ತಿಳಿದುಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.</p>.<p>ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ. ಆದರೆ, ಕೋಳಿ ಮಾಂಸ ತಿನ್ನುವ ಮೊದಲು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಯ್ ಸೇಠ್ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಪ್ರತಿ 10 ಕಿ.ಮೀ. ವ್ಯಾಪ್ತಿಯಲ್ಲಿ 100 ಸಿಬ್ಬಂದಿಯನ್ನು ಸರ್ವೇಕ್ಷಣೆಗೆ ನೇಮಿಸಲಾಗಿದೆ. ಡಿ. 15ರ ನಂತರ ಕೋಳಿಗಳು ಸತ್ತರೆ ಗಮನಕ್ಕೆ ತರುವಂತೆ ತಿಳಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಕ್ಕಿಜ್ವರ ಕಾಣಿಸಿಕೊಂಡ ಕಾರಣ ಪರಿವೀಕ್ಷಣೆಗೆ ಕೇಂದ್ರ ತಂಡ ಗುರುವಾರ ನಗರಕ್ಕೆ ಬರಲಿದೆ ಎಂದು ಪಶು ಸಂಗೋಪನಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್ಕುಮಾರ್ ಖತ್ರಿ ತಿಳಿಸಿದರು.</p>.<p>ಉತ್ತರ ತಾಲ್ಲೂಕಿನ ಥಣಿಸಂದ್ರ ಬಳಿಯ ದಾಸರಹಳ್ಳಿಯ ಕೆ.ಜಿ.ಎನ್. ಕೋಳಿ ಮಾಂಸದ ಅಂಗಡಿಯಲ್ಲಿ ಹಕ್ಕಿಜ್ವರ (ಎಚ್5ಎನ್1) ಕಾಣಿಸಿಕೊಂಡ ಕಾರಣ ಬುಧವಾರ ಅಧಿಕಾರಿಗಳ ಸಭೆ ನಡೆಸಿದರು.</p>.<p>ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಕ್ಕಿಜ್ವರ ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ತಂಡ ನೀಡುವ ಸಲಹೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದರು.</p>.<p>ಕೋಳಿ ಫಾರಂನಿಂದ ಹಕ್ಕಿಜ್ವರ ಹರಡಿರುವ ಸಾಧ್ಯತೆ ಇಲ್ಲ. ಕೋಳಿ ಮಾಂಸದ ಅಂಗಡಿಯಿಂದ ಹರಡಿರುವ ಶಂಕೆ ಇದೆ. ಹೀಗಾಗಿ, ಶಂಕಿತ ಎರಡು ಅಂಗಡಿಗಳನ್ನು ಮುಚ್ಚಲಾಗಿದೆ. ಹಕ್ಕಿಜ್ವರ ಎಲ್ಲಿಂದ ಬಂದಿದೆ ಎಂದು ತಿಳಿದುಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.</p>.<p>ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ. ಆದರೆ, ಕೋಳಿ ಮಾಂಸ ತಿನ್ನುವ ಮೊದಲು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಯ್ ಸೇಠ್ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಪ್ರತಿ 10 ಕಿ.ಮೀ. ವ್ಯಾಪ್ತಿಯಲ್ಲಿ 100 ಸಿಬ್ಬಂದಿಯನ್ನು ಸರ್ವೇಕ್ಷಣೆಗೆ ನೇಮಿಸಲಾಗಿದೆ. ಡಿ. 15ರ ನಂತರ ಕೋಳಿಗಳು ಸತ್ತರೆ ಗಮನಕ್ಕೆ ತರುವಂತೆ ತಿಳಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>