<p><strong>ಮಂಗಳೂರು:</strong> ಬುಧವಾರ ಹತ್ಯೆಗೀಡಾದ ದೀಪಕ್ ರಾವ್ ಮೃತದೇಹವನ್ನು ಎ.ಜೆ. ಆಸ್ಪತ್ರೆಯಿಂದ, ಕಾಟಿಪಳ್ಳದ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ.</p>.<p>ಗುರುವಾರ ಬೆಳಿಗ್ಗೆ ಶವವನ್ನು ಕಾಟಿಪಳ್ಳಕ್ಕೆ ತರುತ್ತಿದ್ದಂತೆಯೇ ತೀವ್ರ ಆಕ್ರೋಶ ವ್ಯಕ್ತವಾಯಿತು. ಶವವನ್ನು ಮತ್ತೆ ಎ.ಜೆ.ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಅಲ್ಲಿಂದ ಗೌರವದಿಂದ ಶವಯಾತ್ರೆಗೆ ಅವಕಾಶ ಕೊಡಬೇಕು ಎಂದು ಬಜರಂಗದಳ, ವಿಶ್ವಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ದುರ್ಗಾವಾಹಿನಿ ಸಂಘಟನೆಗಳ ಕಾರ್ಯಕರ್ತರು, ಪೋಷಕರು ಒತ್ತಾಯಿಸಿದರು.</p>.<p>ಯಾರಿಗೂ ತಿಳಿಸದೇ ಪೊಲೀಸರು ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಕೂಡಲೇ ಶವಯಾತ್ರೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.</p>.<p>ಆಂಬುಲೆನ್ಸ್ ನಿಂದ ಶವವನ್ನು ಕೆಳಗೆ ಇಳಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಸ್ಥಳದಲ್ಲಿ ಹಾಜರಿದ್ದು, ಗ್ರಾಮಸ್ಥರ ಮನವೊಲಿಕೆಗೆ ಮುಂದಾಗಿದ್ದಾರೆ. ಆದರೆ, ಜನರು ಮಾತ್ರ ಪಟ್ಟು ಸಡಿಲಿಸುತ್ತಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ.</p>.<p>ದೀಪಕ್ ರಾವ್ ತಾಯಿ, ತಮ್ಮ, ಕುಟುಂಬದ ಸದಸ್ಯರು ಹಾಗೂ ಗ್ರಾಮಸ್ಥರು, ಆಂಬುಲೆನ್ಸ್ ಎದುರು ಕುಳಿತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.</p>.<p><strong>ಕಾಟಿಪಳ್ಳದಲ್ಲಿ ಗೊಂದಲದ ಪರಿಸ್ಥಿತಿ</strong></p>.<p>ಈ ಹಿಂದೆ ಶರತ್ ಮಡಿವಾಳ ಅವರ ಶವಯಾತ್ರೆ ನಡೆದ ವೇಳೆ ಬಂಟ್ವಾಳದಲ್ಲಿ ಕಲ್ಲು ತೂರಾಟ ನಡೆದಿದ್ದ ಕಾರಣ ಪೊಲೀಸರು ಎ.ಜೆ.ಆಸ್ಪತ್ರೆಯ ಹಿಂಬಾಗಿಲಿನಿಂದ ಶವವನ್ನು ಸಾಗಿಸಿದ್ದರು.</p>.<p>* ಈ ಹಿಂದೆ ಮೆರವಣಿಗೆ ಆದಾಗ ಕೆಲ ಅಹಿತಕರ ಘಟನೆಗಳು ನಡೆದಿವೆ. ಅದಕ್ಕಾಗಿ ಪೊಲೀಸರು ಶವಯಾತ್ರೆಗೆ ಅನುಮತಿ ನೀಡಿರಲಿಕ್ಕಿಲ್ಲ. ಪಿಎಫ್ ಐ ಮತ್ತು ಬಜರಂಗದಳದಂತಹ ಮತೀಯ ಸಂಘಟನೆಗಳಿಂದ ಇಂತಹ ಕೃತ್ಯಗಳು ಮರುಕಳಿಸುತ್ತಿವೆ.</p>.<p><em><strong>–ರಮಾನಾಥ ರೈ, ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಬುಧವಾರ ಹತ್ಯೆಗೀಡಾದ ದೀಪಕ್ ರಾವ್ ಮೃತದೇಹವನ್ನು ಎ.ಜೆ. ಆಸ್ಪತ್ರೆಯಿಂದ, ಕಾಟಿಪಳ್ಳದ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ.</p>.<p>ಗುರುವಾರ ಬೆಳಿಗ್ಗೆ ಶವವನ್ನು ಕಾಟಿಪಳ್ಳಕ್ಕೆ ತರುತ್ತಿದ್ದಂತೆಯೇ ತೀವ್ರ ಆಕ್ರೋಶ ವ್ಯಕ್ತವಾಯಿತು. ಶವವನ್ನು ಮತ್ತೆ ಎ.ಜೆ.ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಅಲ್ಲಿಂದ ಗೌರವದಿಂದ ಶವಯಾತ್ರೆಗೆ ಅವಕಾಶ ಕೊಡಬೇಕು ಎಂದು ಬಜರಂಗದಳ, ವಿಶ್ವಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ದುರ್ಗಾವಾಹಿನಿ ಸಂಘಟನೆಗಳ ಕಾರ್ಯಕರ್ತರು, ಪೋಷಕರು ಒತ್ತಾಯಿಸಿದರು.</p>.<p>ಯಾರಿಗೂ ತಿಳಿಸದೇ ಪೊಲೀಸರು ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಕೂಡಲೇ ಶವಯಾತ್ರೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.</p>.<p>ಆಂಬುಲೆನ್ಸ್ ನಿಂದ ಶವವನ್ನು ಕೆಳಗೆ ಇಳಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಸ್ಥಳದಲ್ಲಿ ಹಾಜರಿದ್ದು, ಗ್ರಾಮಸ್ಥರ ಮನವೊಲಿಕೆಗೆ ಮುಂದಾಗಿದ್ದಾರೆ. ಆದರೆ, ಜನರು ಮಾತ್ರ ಪಟ್ಟು ಸಡಿಲಿಸುತ್ತಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ.</p>.<p>ದೀಪಕ್ ರಾವ್ ತಾಯಿ, ತಮ್ಮ, ಕುಟುಂಬದ ಸದಸ್ಯರು ಹಾಗೂ ಗ್ರಾಮಸ್ಥರು, ಆಂಬುಲೆನ್ಸ್ ಎದುರು ಕುಳಿತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.</p>.<p><strong>ಕಾಟಿಪಳ್ಳದಲ್ಲಿ ಗೊಂದಲದ ಪರಿಸ್ಥಿತಿ</strong></p>.<p>ಈ ಹಿಂದೆ ಶರತ್ ಮಡಿವಾಳ ಅವರ ಶವಯಾತ್ರೆ ನಡೆದ ವೇಳೆ ಬಂಟ್ವಾಳದಲ್ಲಿ ಕಲ್ಲು ತೂರಾಟ ನಡೆದಿದ್ದ ಕಾರಣ ಪೊಲೀಸರು ಎ.ಜೆ.ಆಸ್ಪತ್ರೆಯ ಹಿಂಬಾಗಿಲಿನಿಂದ ಶವವನ್ನು ಸಾಗಿಸಿದ್ದರು.</p>.<p>* ಈ ಹಿಂದೆ ಮೆರವಣಿಗೆ ಆದಾಗ ಕೆಲ ಅಹಿತಕರ ಘಟನೆಗಳು ನಡೆದಿವೆ. ಅದಕ್ಕಾಗಿ ಪೊಲೀಸರು ಶವಯಾತ್ರೆಗೆ ಅನುಮತಿ ನೀಡಿರಲಿಕ್ಕಿಲ್ಲ. ಪಿಎಫ್ ಐ ಮತ್ತು ಬಜರಂಗದಳದಂತಹ ಮತೀಯ ಸಂಘಟನೆಗಳಿಂದ ಇಂತಹ ಕೃತ್ಯಗಳು ಮರುಕಳಿಸುತ್ತಿವೆ.</p>.<p><em><strong>–ರಮಾನಾಥ ರೈ, ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>