<p><strong>ಬೆಂಗಳೂರು:</strong> ಆದಾಯಮೀರಿ ಆಸ್ತಿ ಗಳಿಸಿದ ಆರೋಪದಲ್ಲಿ ಬಳ್ಳಾರಿಯ ಉಪವಿಭಾಗಾಧಿಕಾರಿ ಸೇರಿ ರಾಜ್ಯದ ವಿವಿಧ ಕಡೆ 12 ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದರು.</p>.<p>ಬೆಂಗಳೂರು, ದಾವಣಗೆರೆ, ಗದಗ, ವಿಜಯಪುರ, ಹಾಸನ, ರಾಯಚೂರು, ಶಿವಮೊಗ್ಗ ಜಿಲ್ಲೆಯಲ್ಲಿ ದಾಳಿ ನಡೆದಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್), ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ.</p>.<p>ಈ ಅಧಿಕಾರಿಗಳು ಅಕ್ರಮವಾಗಿ ಆಸ್ತಿ ಗಳಿಸಿರುವ ಕುರಿತು ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಆದಾಯ ಮೀರಿ ಸಂಪತ್ತು ಗಳಿಸಿರುವ ಕುರಿತು ಪರಿಶೀಲನೆ ಮುಂದುವರಿದಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.</p>.<p><strong>ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳು</strong><br /> * ಬಿ.ಟಿ. ಕುಮಾರಸ್ವಾಮಿ– ಬಳ್ಳಾರಿ ಉಪವಿಭಾಗಾಧಿಕಾರಿ</p>.<p>* ಎನ್.ಆರ್.ಎಂ. ನಾಗರಾಜನ್– ಕೆಪಿಟಿಸಿಎಲ್ ಸೂಪರಿಂಟೆಂಡೆಂಟ್ ಎಂಜಿನಿಯರ್, ಬೆಂಗಳೂರು</p>.<p>* ಬಿ.ಎಸ್. ಪ್ರಹ್ಲಾದ್, ಸೂಪರಿಂಟೆಂಡೆಂಟ್ ಎಂಜಿನಿಯರ್, ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ), ಬೆಂಗಳೂರು</p>.<p>* ಆರ್.ವಿ. ಕಾಂತರಾಜು, ಬಿಡಿಎ(ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ನಗರ ಯೋಜನೆ ಉಪನಿರ್ದೇಶಕ, ಬೆಂಗಳೂರು</p>.<p>* ಬಿ.ಎಸ್. ಬಾಲನ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಕರ್ನಾಟಕ ನೀರಾವರಿ ನಿಗಮ, ಭದ್ರವತಿ, ಶಿವಮೊಗ್ಗ ಜಿಲ್ಲೆ</p>.<p>* ಜೆ.ಸಿ. ಜಗದೀಶಪ್ಪ, ಕೆಪಿಟಿಸಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಹೊನ್ನಾಳಿ, ದಾವಣೆಗರೆ ಜಿಲ್ಲೆ</p>.<p>* ವೆಂಕಟೇಶ್, ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್, ಸಕಲೇಶಪುರ, ಹಾಸನ ಜಿಲ್ಲೆ</p>.<p>* ಅಶೋಕಗೌಡಪ್ಪ ಪಾಟೀಲ, ನರಗುಂದ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ, ಗದಗ ಜಿಲ್ಲೆ</p>.<p>* ಸೋಮಪ್ಪ ಟಿ. ಲಮಾಣಿ, ವಿಜಯಪುರ ಜಿಲ್ಲಾ ಪಂಚಾಯ್ತಿ ಎಂಜಿನಿಯರಿಂಗ್ ವಿಭಾಗದ ಶಾಖಾಧೀಕ್ಷಕ</p>.<p>* ರೇಖಾ, ವಾಜರಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ನೆಲಮಂಗಲ ತಾಲ್ಲೂಕು</p>.<p>* ನರಸಿಂಹಲು, ತೆರಿಗೆ ಮೌಲ್ಯಮಾಪಕರು, ಬಿಬಿಎಂಪಿ ಸಿ.ವಿ. ರಾಮನ್ನಗರ ಉಪವಿಭಾಗ, ಬೆಂಗಳೂರು</p>.<p>* ಅಮರೇಶ ಬೆಂಚಮರಡಿ, ನಗರಸಭೆ ಸ್ಯಾನಿಟರಿ ಇನ್ಸ್ಪೆಕ್ಟರ್, ರಾಯಚೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆದಾಯಮೀರಿ ಆಸ್ತಿ ಗಳಿಸಿದ ಆರೋಪದಲ್ಲಿ ಬಳ್ಳಾರಿಯ ಉಪವಿಭಾಗಾಧಿಕಾರಿ ಸೇರಿ ರಾಜ್ಯದ ವಿವಿಧ ಕಡೆ 12 ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದರು.</p>.<p>ಬೆಂಗಳೂರು, ದಾವಣಗೆರೆ, ಗದಗ, ವಿಜಯಪುರ, ಹಾಸನ, ರಾಯಚೂರು, ಶಿವಮೊಗ್ಗ ಜಿಲ್ಲೆಯಲ್ಲಿ ದಾಳಿ ನಡೆದಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್), ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ.</p>.<p>ಈ ಅಧಿಕಾರಿಗಳು ಅಕ್ರಮವಾಗಿ ಆಸ್ತಿ ಗಳಿಸಿರುವ ಕುರಿತು ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಆದಾಯ ಮೀರಿ ಸಂಪತ್ತು ಗಳಿಸಿರುವ ಕುರಿತು ಪರಿಶೀಲನೆ ಮುಂದುವರಿದಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.</p>.<p><strong>ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳು</strong><br /> * ಬಿ.ಟಿ. ಕುಮಾರಸ್ವಾಮಿ– ಬಳ್ಳಾರಿ ಉಪವಿಭಾಗಾಧಿಕಾರಿ</p>.<p>* ಎನ್.ಆರ್.ಎಂ. ನಾಗರಾಜನ್– ಕೆಪಿಟಿಸಿಎಲ್ ಸೂಪರಿಂಟೆಂಡೆಂಟ್ ಎಂಜಿನಿಯರ್, ಬೆಂಗಳೂರು</p>.<p>* ಬಿ.ಎಸ್. ಪ್ರಹ್ಲಾದ್, ಸೂಪರಿಂಟೆಂಡೆಂಟ್ ಎಂಜಿನಿಯರ್, ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ), ಬೆಂಗಳೂರು</p>.<p>* ಆರ್.ವಿ. ಕಾಂತರಾಜು, ಬಿಡಿಎ(ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ನಗರ ಯೋಜನೆ ಉಪನಿರ್ದೇಶಕ, ಬೆಂಗಳೂರು</p>.<p>* ಬಿ.ಎಸ್. ಬಾಲನ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಕರ್ನಾಟಕ ನೀರಾವರಿ ನಿಗಮ, ಭದ್ರವತಿ, ಶಿವಮೊಗ್ಗ ಜಿಲ್ಲೆ</p>.<p>* ಜೆ.ಸಿ. ಜಗದೀಶಪ್ಪ, ಕೆಪಿಟಿಸಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಹೊನ್ನಾಳಿ, ದಾವಣೆಗರೆ ಜಿಲ್ಲೆ</p>.<p>* ವೆಂಕಟೇಶ್, ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್, ಸಕಲೇಶಪುರ, ಹಾಸನ ಜಿಲ್ಲೆ</p>.<p>* ಅಶೋಕಗೌಡಪ್ಪ ಪಾಟೀಲ, ನರಗುಂದ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ, ಗದಗ ಜಿಲ್ಲೆ</p>.<p>* ಸೋಮಪ್ಪ ಟಿ. ಲಮಾಣಿ, ವಿಜಯಪುರ ಜಿಲ್ಲಾ ಪಂಚಾಯ್ತಿ ಎಂಜಿನಿಯರಿಂಗ್ ವಿಭಾಗದ ಶಾಖಾಧೀಕ್ಷಕ</p>.<p>* ರೇಖಾ, ವಾಜರಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ನೆಲಮಂಗಲ ತಾಲ್ಲೂಕು</p>.<p>* ನರಸಿಂಹಲು, ತೆರಿಗೆ ಮೌಲ್ಯಮಾಪಕರು, ಬಿಬಿಎಂಪಿ ಸಿ.ವಿ. ರಾಮನ್ನಗರ ಉಪವಿಭಾಗ, ಬೆಂಗಳೂರು</p>.<p>* ಅಮರೇಶ ಬೆಂಚಮರಡಿ, ನಗರಸಭೆ ಸ್ಯಾನಿಟರಿ ಇನ್ಸ್ಪೆಕ್ಟರ್, ರಾಯಚೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>