<p><strong>ಬೆಂಗಳೂರು:</strong> ಮ್ಯಾನೇಜ್ಮೆಂಟ್ ಕೋರ್ಸ್ಗಾಗಿ ನವೆಂಬರ್ನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಎಟಿ)ಯಲ್ಲಿ ನಗರದ ಮೂವರು ವಿದ್ಯಾರ್ಥಿಗಳು ಟಾಪರ್ ಆಗಿ ಹೊರಹೊಮ್ಮಿದ್ದಾರೆ.</p>.<p>ಕುಮಾರ್ ರವಿ (ಶೇ 99.99), ಅಶೋಕ್ ಸುರೇಶ್ ದಾಸ್ (ಶೇ. 99.97) ಮತ್ತು ಬಿಸ್ವದೀಪ್ ಬಗ್ಚಿ (ಶೇ 99.96) ರಷ್ಟು ಅಂಕ ಪಡೆದಿದ್ದಾರೆ.</p>.<p>ಬಿಹಾರದ ಮುಂಗೇರ್ ಜಿಲ್ಲೆಯ ಕುಮಾರ್ ರವಿ ನಗರದ ಟೈಮ್ ಕೋಚಿಂಗ್ ಸೆಂಟರ್ನಲ್ಲಿ ತರಬೇತಿ ಪಡೆದಿದ್ದರು. ನಾಗಪುರದಲ್ಲಿ ಎನ್ಐಟಿಯಲ್ಲಿ ಎಂಜಿನಿಯರಿಂಗ್ ಮುಗಿಸಿ, ಮಧ್ಯಪ್ರದೇಶದಲ್ಲಿ ಖಾಸಗಿ ಕಂಪೆನಿಯಲ್ಲಿದ್ದರು.<br /> <br /> ‘ಎಂಬಿಎ ಮಾಡಲೆಂದು ಬೆಂಗಳೂರಿಗೆ ಕೋಚಿಂಗ್ ಪಡೆಯಲು ಬಂದೆ. ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಕೋಚಿಂಗ್ ಚೆನ್ನಾಗಿರುವುದಿಲ್ಲ. ಮೆಟ್ರೊ ನಗರಗಳಲ್ಲಿ ಉತ್ತಮ ಕೋಚಿಂಗ್ ಸಿಗುತ್ತದೆ. ನನ್ನ ಸಹೋದರ ಬೆಂಗಳೂರಿನಲ್ಲಿ ಇದ್ದ ಕಾರಣ ಇಲ್ಲಿಗೆ ಬಂದೆ’ ಎಂದು ಪ್ರತಿಕ್ರಿಯೆ ನೀಡಿದರು.</p>.<p>ನಗರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬಿಎಸ್ಸಿ (ಸಂಶೋಧನೆ) ಅಂತಿಮ ವರ್ಷದ ವಿದ್ಯಾರ್ಥಿ. ‘ಅಹಮದಾಬಾದ್ ಮತ್ತು ಬೆಂಗಳೂರು ಐಐಎಂಗಳಲ್ಲಿ ಪ್ರವೇಶಕ್ಕೆ ಅವಕಾಶ ಸಿಕ್ಕಿದೆ. ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ನನ್ನ ಇಬ್ಬರು ಚಿಕ್ಕಪ್ಪಂದಿರು ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿದ್ದಾರೆ. ಅವರಿಂದ ಪ್ರೇರಿತನಾಗಿ ಈ ಕ್ಷೇತ್ರ ಪ್ರವೇಶಿಸಲು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದರು.</p>.<p>ಬಿಸ್ವದೀಪ್ ಬಗ್ಚಿ ನಗರದ ಖಾಸಗಿ ಕಂಪನಿಯಲ್ಲಿ ಡೆಟಾ ವಿಶ್ಲೇಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎರಡನೇ ಪ್ರಯತ್ನದಲ್ಲಿ ಉತ್ತಮ ಅಂಕಗಳೊಂದಿಗೆ ಟಾಪರ್ ಆಗಿದ್ದಾರೆ. ‘ಬೆಂಗಳೂರು, ಅಹಮದಾಬಾದ್ ಮತ್ತು ಕೋಲ್ಕತ್ತ ಐಐಎಂಗಳಲ್ಲಿ ಅವಕಾಶ ಸಿಕ್ಕಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮ್ಯಾನೇಜ್ಮೆಂಟ್ ಕೋರ್ಸ್ಗಾಗಿ ನವೆಂಬರ್ನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಎಟಿ)ಯಲ್ಲಿ ನಗರದ ಮೂವರು ವಿದ್ಯಾರ್ಥಿಗಳು ಟಾಪರ್ ಆಗಿ ಹೊರಹೊಮ್ಮಿದ್ದಾರೆ.</p>.<p>ಕುಮಾರ್ ರವಿ (ಶೇ 99.99), ಅಶೋಕ್ ಸುರೇಶ್ ದಾಸ್ (ಶೇ. 99.97) ಮತ್ತು ಬಿಸ್ವದೀಪ್ ಬಗ್ಚಿ (ಶೇ 99.96) ರಷ್ಟು ಅಂಕ ಪಡೆದಿದ್ದಾರೆ.</p>.<p>ಬಿಹಾರದ ಮುಂಗೇರ್ ಜಿಲ್ಲೆಯ ಕುಮಾರ್ ರವಿ ನಗರದ ಟೈಮ್ ಕೋಚಿಂಗ್ ಸೆಂಟರ್ನಲ್ಲಿ ತರಬೇತಿ ಪಡೆದಿದ್ದರು. ನಾಗಪುರದಲ್ಲಿ ಎನ್ಐಟಿಯಲ್ಲಿ ಎಂಜಿನಿಯರಿಂಗ್ ಮುಗಿಸಿ, ಮಧ್ಯಪ್ರದೇಶದಲ್ಲಿ ಖಾಸಗಿ ಕಂಪೆನಿಯಲ್ಲಿದ್ದರು.<br /> <br /> ‘ಎಂಬಿಎ ಮಾಡಲೆಂದು ಬೆಂಗಳೂರಿಗೆ ಕೋಚಿಂಗ್ ಪಡೆಯಲು ಬಂದೆ. ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಕೋಚಿಂಗ್ ಚೆನ್ನಾಗಿರುವುದಿಲ್ಲ. ಮೆಟ್ರೊ ನಗರಗಳಲ್ಲಿ ಉತ್ತಮ ಕೋಚಿಂಗ್ ಸಿಗುತ್ತದೆ. ನನ್ನ ಸಹೋದರ ಬೆಂಗಳೂರಿನಲ್ಲಿ ಇದ್ದ ಕಾರಣ ಇಲ್ಲಿಗೆ ಬಂದೆ’ ಎಂದು ಪ್ರತಿಕ್ರಿಯೆ ನೀಡಿದರು.</p>.<p>ನಗರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬಿಎಸ್ಸಿ (ಸಂಶೋಧನೆ) ಅಂತಿಮ ವರ್ಷದ ವಿದ್ಯಾರ್ಥಿ. ‘ಅಹಮದಾಬಾದ್ ಮತ್ತು ಬೆಂಗಳೂರು ಐಐಎಂಗಳಲ್ಲಿ ಪ್ರವೇಶಕ್ಕೆ ಅವಕಾಶ ಸಿಕ್ಕಿದೆ. ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ನನ್ನ ಇಬ್ಬರು ಚಿಕ್ಕಪ್ಪಂದಿರು ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿದ್ದಾರೆ. ಅವರಿಂದ ಪ್ರೇರಿತನಾಗಿ ಈ ಕ್ಷೇತ್ರ ಪ್ರವೇಶಿಸಲು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದರು.</p>.<p>ಬಿಸ್ವದೀಪ್ ಬಗ್ಚಿ ನಗರದ ಖಾಸಗಿ ಕಂಪನಿಯಲ್ಲಿ ಡೆಟಾ ವಿಶ್ಲೇಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎರಡನೇ ಪ್ರಯತ್ನದಲ್ಲಿ ಉತ್ತಮ ಅಂಕಗಳೊಂದಿಗೆ ಟಾಪರ್ ಆಗಿದ್ದಾರೆ. ‘ಬೆಂಗಳೂರು, ಅಹಮದಾಬಾದ್ ಮತ್ತು ಕೋಲ್ಕತ್ತ ಐಐಎಂಗಳಲ್ಲಿ ಅವಕಾಶ ಸಿಕ್ಕಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>