ಭಿನ್ನ ಧರ್ಮದ ಹುಡುಗ, ಹುಡುಗಿಯರು ಒಟ್ಟಾಗಿ ತಿರುಗಾಡುವುದು ಲವ್ ಜಿಹಾದ್ಗೆ ಕಾರಣವಾಗುತ್ತಿದೆ ಎಂದು ಆರೋಪಿಸಿ ಕೆಲವು ಸಂಘಟನೆಗಳ ಕಾರ್ಯಕರ್ತರು ಇತ್ತೀಚೆಗೆ ಹಲವೆಡೆ ಯುವಕ, ಯುವತಿಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇದೇ ರೀತಿ ಸಾಮಾಜಿಕ ಮಾಧ್ಯಮಗಳಲ್ಲಿ ನಡೆಸಿದ ಅಪಪ್ರಚಾರದಿಂದ ಮನನೊಂದ ವಿದ್ಯಾರ್ಥಿನಿಯೊಬ್ಬರು ಮೂಡಿಗೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ತಮ್ಮ ವಿರುದ್ಧ ಅಪಪ್ರಚಾರ ನಡೆಸಿ ಮಾನಸಿಕ ಹಿಂಸೆ, ನೋವಿಗೆ ಕಾರಣವಾಗಿರುವವರನ್ನು ಪತ್ತೆಮಾಡಿ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದಾರೆ.