‘ಮಹದಾಯಿ ವಿಷಯದಲ್ಲಿ ಬಿಜೆಪಿ ದೊಡ್ಡ ನಾಟಕವಾಡಿದೆ. ರಾಜ್ಯದ ಜನರನ್ನು ವಂಚಿಸುವ ಕೆಲಸ ಮಾಡುತ್ತಿದೆ. ಸಮಸ್ಯೆ ಬಗೆಹರಿಸಿಕೊಳ್ಳುವ ನೈಜ ಇಚ್ಚಾಶಕ್ತಿ ಇದ್ದರೆ ಗೋವಾ ಮುಖ್ಯಮಂತ್ರಿ ಅವರು, ಕರ್ನಾಟಕದ ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿಗೆ ಪತ್ರ ಬರೆಯಬೇಕಿತ್ತು. ಅದನ್ನು ಬಿಟ್ಟು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಿಗೆ ಪತ್ರ ಬರೆದಿದ್ದು ರಾಜಕೀಯವಲ್ಲದೆ ಮತ್ತೇನು’ ಎಂದು ಅವರು ಪ್ರಶ್ನಿಸಿದರು.