ಮಂಡ್ಯ: ರೈತಸಂಘ ಹಾಗೂ ಹಸಿರುಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಕೋಣಸಾಲೆ ನರಸರಾಜು (65) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು.
ಅವಿವಾಹಿತರಾಗಿದ್ದು, ಸಹೋದರ, ಸಹೋದರಿ ಇದ್ದಾರೆ. ಪಾರ್ಥಿವ ಶರೀರವನ್ನು ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಸಂಜೆ ಮದ್ದೂರು ತಾಲ್ಲೂಕಿನ ಕೋಣಸಾಲೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಿತು.
ಕಳೆದ 38 ವರ್ಷಗಳಿಂದ ರೈತ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರೈತ ನಾಯಕರಾದ ಪ್ರೊ.ನಂಜುಂಡಸ್ವಾಮಿ, ಎಚ್.ಸುಂದರೇಶ್, ಬಾಬಗೌಡ ಪಾಟೀಲ ಮುಂತಾದವರ ಜೊತೆ ಒಡನಾಟ ಹೊಂದಿದ್ದರು.