<p><strong>ಚಿತ್ರದುರ್ಗ:</strong> ಕೃಷಿಕರ ಸಮಸ್ಯೆಗಳು ಪ್ರಧಾನ ವಿಷಯವಾಗಿ ಚರ್ಚೆಯಾಗಬೇಕು, ದೇಶ ಸೇವಕರಾಗಿರುವ ಕೃಷಿಕರಿಗೂ ಪಿಂಚಣಿ ಕೊಡಬೇಕು ಎಂಬ ಬೇಡಿಕೆಗಳೊಂದಿಗೆ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಮಾರ್ಚ್ 23ರಿಂದ ಬೃಹತ್ ರೈತ ಚಳವಳಿ ಆರಂಭಿಸಲಾಗುವುದು ಎಂದು ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ತಿಳಿಸಿದರು.</p>.<p>ಇಲ್ಲಿನ ಮುರುಘಾಮಠಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ದೇಶದಲ್ಲಿ 12 ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವ ಸರ್ಕಾರಗಳೂ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲಿಲ್ಲ. ಕೃಷಿ ಕ್ಷೇತ್ರ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಚಳವಳಿ ನಡೆಸಲಾಗುತ್ತದೆ ಎಂದರು.</p>.<p>ಸಂವಿಧಾನ ಬದಲಾಯಿಸುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅಣ್ಣಾ ಹಜಾರೆ, ‘ನಮ್ಮ ಸಂವಿಧಾನ ಚೆನ್ನಾಗಿದೆ. ಎಲ್ಲರಿಗೂ ಬದುಕುವ ಹಕ್ಕು ಕೊಟ್ಟಿದೆ. ಅದನ್ನು ಏಕೆ ಬದಲಾಯಿಸಬೇಕು. ಸಂವಿಧಾನವನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ' ಎಂದರಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಕೃಷಿಕರ ಸಮಸ್ಯೆಗಳು ಪ್ರಧಾನ ವಿಷಯವಾಗಿ ಚರ್ಚೆಯಾಗಬೇಕು, ದೇಶ ಸೇವಕರಾಗಿರುವ ಕೃಷಿಕರಿಗೂ ಪಿಂಚಣಿ ಕೊಡಬೇಕು ಎಂಬ ಬೇಡಿಕೆಗಳೊಂದಿಗೆ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಮಾರ್ಚ್ 23ರಿಂದ ಬೃಹತ್ ರೈತ ಚಳವಳಿ ಆರಂಭಿಸಲಾಗುವುದು ಎಂದು ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ತಿಳಿಸಿದರು.</p>.<p>ಇಲ್ಲಿನ ಮುರುಘಾಮಠಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ದೇಶದಲ್ಲಿ 12 ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವ ಸರ್ಕಾರಗಳೂ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲಿಲ್ಲ. ಕೃಷಿ ಕ್ಷೇತ್ರ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಚಳವಳಿ ನಡೆಸಲಾಗುತ್ತದೆ ಎಂದರು.</p>.<p>ಸಂವಿಧಾನ ಬದಲಾಯಿಸುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅಣ್ಣಾ ಹಜಾರೆ, ‘ನಮ್ಮ ಸಂವಿಧಾನ ಚೆನ್ನಾಗಿದೆ. ಎಲ್ಲರಿಗೂ ಬದುಕುವ ಹಕ್ಕು ಕೊಟ್ಟಿದೆ. ಅದನ್ನು ಏಕೆ ಬದಲಾಯಿಸಬೇಕು. ಸಂವಿಧಾನವನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ' ಎಂದರಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>