<p><strong>ಮೈಸೂರು:</strong> ‘ನಾವು ಭಾರತೀಯರು, ನಮ್ಮನ್ನು ಪಾಕಿಸ್ತಾನಿಗಳಂತೆ ಶಿಕ್ಷಿಸದಿರಿ...’</p>.<p>ಹೀಗೆ ಪ್ರತಿಕ್ರಿಯಿಸಿರುವುದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು. ‘ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನಿಗಳ ಜೀವ ಉಳಿಸುತ್ತಿದ್ದಾರೆ; ಆದರೆ, ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು ಕೆಎಸ್ಒಯು ವಿದ್ಯಾರ್ಥಿಗಳನ್ನು ಕೊಲ್ಲುತ್ತಿದ್ದಾರೆ’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.</p>.<p>ಕೆಎಸ್ಒಯುಗೆ ಮಾನ್ಯತೆ ನೀಡಲು ಕೇಂದ್ರ ಸರ್ಕಾರಕ್ಕೆ ಆಸಕ್ತಿಯಿಲ್ಲ. ವಿ.ವಿ.ಗೆ ಮಾನ್ಯತೆ ಕೊಡಿಸಲು ಜಾವಡೇಕರ್ ಅವರಿಗೆ ಸಾಧ್ಯವಾಗದೇ ಇದ್ದಲ್ಲಿ ರಾಜೀನಾಮೆ ಕೊಟ್ಟು ಮನೆಗೆ ತೆರಳಲಿ. ವಿದ್ಯಾರ್ಥಿಗಳ ಜೀವನದ ಜತೆ ಆಟವಾಡಬೇಡಿ ಎಂದು ನೇರವಾಗಿ ಟ್ವೀಟ್ ಮಾಡಿದ್ದಾರೆ.</p>.<p>‘ವಿ.ವಿ ಪ್ರಮಾಣ ಪತ್ರ ಹೊಂದಿರುವ ನಾವು 3 ವರ್ಷಗಳಿಂದ ತೊಂದರೆ ಅನುಭವಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಈಗಲಾದರೂ ನಮಗೆ ನ್ಯಾಯ ದೊರಕಿಸಿಕೊಡಲಿ’ ಎಂದು ಮೊರೆಯಿಟ್ಟಿದ್ದಾರೆ.</p>.<p>ಕೆಎಸ್ಒಯುಗೆ ಮಾನ್ಯತೆ ಸಿಗದಿರುವುದಕ್ಕೆ ಟ್ವಿಟರ್ನಲ್ಲಿ ವಿದ್ಯಾರ್ಥಿಗಳು ಟೀಕೆ ಮುಂದುವರಿಸಿದ್ದಾರೆ. ಕಳೆದ ವಾರ ನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಚಿವ ಜಾವಡೇಕರ್ ಪಾಲ್ಗೊಂಡಿದ್ದರು. ಆ ಸಮಯದಲ್ಲಿ ಸ್ಥಳೀಯರು, ಹೋರಾಟಗಾರರು ಸಚಿವರ ಭೇಟಿಗೆ ಪ್ರಯತ್ನಿಸಿದ್ದರು. ಭೇಟಿಗೆ ಅವಕಾಶ ಆಗಲಿಲ್ಲ. ಆನಂತರ ಸಚಿವರು, ಕೇಂದ್ರ ಸರ್ಕಾರದ ವಿರುದ್ಧ ಟ್ವಿಟರ್ ಸಮರ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಾವು ಭಾರತೀಯರು, ನಮ್ಮನ್ನು ಪಾಕಿಸ್ತಾನಿಗಳಂತೆ ಶಿಕ್ಷಿಸದಿರಿ...’</p>.<p>ಹೀಗೆ ಪ್ರತಿಕ್ರಿಯಿಸಿರುವುದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು. ‘ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನಿಗಳ ಜೀವ ಉಳಿಸುತ್ತಿದ್ದಾರೆ; ಆದರೆ, ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು ಕೆಎಸ್ಒಯು ವಿದ್ಯಾರ್ಥಿಗಳನ್ನು ಕೊಲ್ಲುತ್ತಿದ್ದಾರೆ’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.</p>.<p>ಕೆಎಸ್ಒಯುಗೆ ಮಾನ್ಯತೆ ನೀಡಲು ಕೇಂದ್ರ ಸರ್ಕಾರಕ್ಕೆ ಆಸಕ್ತಿಯಿಲ್ಲ. ವಿ.ವಿ.ಗೆ ಮಾನ್ಯತೆ ಕೊಡಿಸಲು ಜಾವಡೇಕರ್ ಅವರಿಗೆ ಸಾಧ್ಯವಾಗದೇ ಇದ್ದಲ್ಲಿ ರಾಜೀನಾಮೆ ಕೊಟ್ಟು ಮನೆಗೆ ತೆರಳಲಿ. ವಿದ್ಯಾರ್ಥಿಗಳ ಜೀವನದ ಜತೆ ಆಟವಾಡಬೇಡಿ ಎಂದು ನೇರವಾಗಿ ಟ್ವೀಟ್ ಮಾಡಿದ್ದಾರೆ.</p>.<p>‘ವಿ.ವಿ ಪ್ರಮಾಣ ಪತ್ರ ಹೊಂದಿರುವ ನಾವು 3 ವರ್ಷಗಳಿಂದ ತೊಂದರೆ ಅನುಭವಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಈಗಲಾದರೂ ನಮಗೆ ನ್ಯಾಯ ದೊರಕಿಸಿಕೊಡಲಿ’ ಎಂದು ಮೊರೆಯಿಟ್ಟಿದ್ದಾರೆ.</p>.<p>ಕೆಎಸ್ಒಯುಗೆ ಮಾನ್ಯತೆ ಸಿಗದಿರುವುದಕ್ಕೆ ಟ್ವಿಟರ್ನಲ್ಲಿ ವಿದ್ಯಾರ್ಥಿಗಳು ಟೀಕೆ ಮುಂದುವರಿಸಿದ್ದಾರೆ. ಕಳೆದ ವಾರ ನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಚಿವ ಜಾವಡೇಕರ್ ಪಾಲ್ಗೊಂಡಿದ್ದರು. ಆ ಸಮಯದಲ್ಲಿ ಸ್ಥಳೀಯರು, ಹೋರಾಟಗಾರರು ಸಚಿವರ ಭೇಟಿಗೆ ಪ್ರಯತ್ನಿಸಿದ್ದರು. ಭೇಟಿಗೆ ಅವಕಾಶ ಆಗಲಿಲ್ಲ. ಆನಂತರ ಸಚಿವರು, ಕೇಂದ್ರ ಸರ್ಕಾರದ ವಿರುದ್ಧ ಟ್ವಿಟರ್ ಸಮರ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>