<p><strong>ಮಂಗಳೂರು:</strong> ಕಾಟಿಪಳ್ಳ ದೀಪಕ್ ರಾವ್ ಮತ್ತು ಆಕಾಶಭವನದ ಅಬ್ದುಲ್ ಬಶೀರ್ ಮತೀಯ ದ್ವೇಷದಲ್ಲಿ ಕೊಲೆಗೀಡಾದ ಸಂದರ್ಭದಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಿ, ಪ್ರಾಣ ಉಳಿಸಲು ಯತ್ನಿಸಿ ಸೌಹಾರ್ದ ಮೆರೆದ ಅಬ್ದುಲ್ ಮಜೀದ್ ಹಾಗೂ ಶೇಖರ್ ಕುಲಾಲ್ ಅವರಿಗೆ ಕಲಬುರ್ಗಿಯ ವಕೀಲರೊಬ್ಬರು ತಲಾ ₹ 50 ಸಾವಿರ ನೀಡಿ ಗೌರವಿಸಿದ್ದಾರೆ.</p>.<p>ಕಲಬುರ್ಗಿಯ ವಕೀಲ ಪಿ.ವಿಲಾಸ್ಕುಮಾರ್ ಅವರು ಕಳುಹಿಸಿದ್ದ ₹ 50 ಸಾವಿರ ಮೊತ್ತದ ಚೆಕ್ ಹಾಗೂ ಪ್ರಶಂಸಾ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಅವರು ಮಂಗಳವಾರ ಮಜೀದ್ ಮತ್ತು ಶೇಖರ್ ಅವರಿಗೆ ಹಸ್ತಾಂತರ ಮಾಡಿದರು. ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ಉಪಸ್ಥಿತರಿದ್ದರು.</p>.<p>‘ದಕ್ಷಿಣ ಕನ್ನಡ ಜಿಲ್ಲೆ ಮತೀಯ ದ್ವೇಷದಿಂದ ಸುಡುತ್ತಿರುವ ಸಂದರ್ಭದಲ್ಲಿ ಮಜೀದ್ ಮತ್ತು ಶೇಖರ್ ಮಾಡಿರುವ ಕೆಲಸಗಳು ಅನನ್ಯವಾದವು. ಇತರೆ ಧರ್ಮಕ್ಕೆ ಸೇರಿದ ವ್ಯಕ್ತಿಗಳು ಜೀವನ್ಮರಣದ ನಡುವೆ ಹೋರಾಡುತ್ತಿರುವಾಗ ಅವರ ನೆರವಿಗೆ ಬಂದಿರುವುದು ಶ್ಲಾಘನೀಯ’ ಎಂದು ವಿಲಾಸ್ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.</p>.<p>800 ಕಿ.ಮೀ. ದೂರದವರೆಗೆ ಪ್ರಯಾಣ ಮಾಡಿಕೊಂಡು ಬರಲು ಸಾಧ್ಯವಾಗದಿರುವುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದ ವಕೀಲರು, ಚೆಕ್ ಮತ್ತು ಪತ್ರವನ್ನು ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ್ದರು. ಪುರಸ್ಕಾರದ ಮೊತ್ತ ಸ್ವೀಕರಿಸಲು ನಿರಾಕರಿಸಿದಲ್ಲಿ ಅವರು ಬಯಸುವಂತಹ ರೀತಿಯಲ್ಲಿ ಸಾಮಾಜಿಕ ಚಟುವಟಿಕೆಗೆ ಬಳಸಲು ಕೋರಿದ್ದರು.</p>.<p><strong>ಜೀವ ಉಳಿಸಲಾಗದ ಕೊರಗು: </strong>‘ಏಳು ವರ್ಷಗಳಿಂದ ದೀಪಕ್ ನನ್ನ ಜೊತೆಗಿದ್ದ. ಹಲ್ಲೆ ನಡೆದಾಗ ಕೂಗಿಕೊಳ್ಳುತ್ತಲೇ ಮನೆಯಿಂದ ಓಡಿಬಂದೆ. ಆತನ ಜೀವ ಉಳಿಸಲು ನನ್ನಿಂದ ಆಗಲಿಲ್ಲ. ಈಗ ಈ ಗೌರವ ನನಗೆ ಬೇಕಿತ್ತಾ ಎಂದು ಅನಿಸುತ್ತಿದೆ’ ಎಂದು ಮಜೀದ್ ಭಾವುಕರಾದರು.</p>.<p>ಶೇಖರ್ ಮಾತನಾಡಿ, ‘ನನ್ನ ಬಳಿ ಆಂಬುಲೆನ್ಸ್ ಇದೆ. ಬಶೀರ್ ಕೊಲೆಯಾದ ದಿನ ನಾನು ಕೊಟ್ಟಾರ ಚೌಕಿಗೆ ಬರುತ್ತಿದ್ದಾಗ ಯುವಕನೊಬ್ಬ ಗಾಬರಿಯಲ್ಲಿ ಮೊಬೈಲ್ನಿಂದ ಪೊಲೀಸರಿಗೆ ಕರೆ ಮಾಡುತ್ತಿದ್ದ. ಇಳಿದು ನೋಡಿದಾಗ ಬಶೀರ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆ ಕ್ಷಣಕ್ಕೆ ಅವರ ಜೀವ ಉಳಿಸಬೇಕೆಂಬ ಆಶಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕಾಟಿಪಳ್ಳ ದೀಪಕ್ ರಾವ್ ಮತ್ತು ಆಕಾಶಭವನದ ಅಬ್ದುಲ್ ಬಶೀರ್ ಮತೀಯ ದ್ವೇಷದಲ್ಲಿ ಕೊಲೆಗೀಡಾದ ಸಂದರ್ಭದಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಿ, ಪ್ರಾಣ ಉಳಿಸಲು ಯತ್ನಿಸಿ ಸೌಹಾರ್ದ ಮೆರೆದ ಅಬ್ದುಲ್ ಮಜೀದ್ ಹಾಗೂ ಶೇಖರ್ ಕುಲಾಲ್ ಅವರಿಗೆ ಕಲಬುರ್ಗಿಯ ವಕೀಲರೊಬ್ಬರು ತಲಾ ₹ 50 ಸಾವಿರ ನೀಡಿ ಗೌರವಿಸಿದ್ದಾರೆ.</p>.<p>ಕಲಬುರ್ಗಿಯ ವಕೀಲ ಪಿ.ವಿಲಾಸ್ಕುಮಾರ್ ಅವರು ಕಳುಹಿಸಿದ್ದ ₹ 50 ಸಾವಿರ ಮೊತ್ತದ ಚೆಕ್ ಹಾಗೂ ಪ್ರಶಂಸಾ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಅವರು ಮಂಗಳವಾರ ಮಜೀದ್ ಮತ್ತು ಶೇಖರ್ ಅವರಿಗೆ ಹಸ್ತಾಂತರ ಮಾಡಿದರು. ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ಉಪಸ್ಥಿತರಿದ್ದರು.</p>.<p>‘ದಕ್ಷಿಣ ಕನ್ನಡ ಜಿಲ್ಲೆ ಮತೀಯ ದ್ವೇಷದಿಂದ ಸುಡುತ್ತಿರುವ ಸಂದರ್ಭದಲ್ಲಿ ಮಜೀದ್ ಮತ್ತು ಶೇಖರ್ ಮಾಡಿರುವ ಕೆಲಸಗಳು ಅನನ್ಯವಾದವು. ಇತರೆ ಧರ್ಮಕ್ಕೆ ಸೇರಿದ ವ್ಯಕ್ತಿಗಳು ಜೀವನ್ಮರಣದ ನಡುವೆ ಹೋರಾಡುತ್ತಿರುವಾಗ ಅವರ ನೆರವಿಗೆ ಬಂದಿರುವುದು ಶ್ಲಾಘನೀಯ’ ಎಂದು ವಿಲಾಸ್ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.</p>.<p>800 ಕಿ.ಮೀ. ದೂರದವರೆಗೆ ಪ್ರಯಾಣ ಮಾಡಿಕೊಂಡು ಬರಲು ಸಾಧ್ಯವಾಗದಿರುವುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದ ವಕೀಲರು, ಚೆಕ್ ಮತ್ತು ಪತ್ರವನ್ನು ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ್ದರು. ಪುರಸ್ಕಾರದ ಮೊತ್ತ ಸ್ವೀಕರಿಸಲು ನಿರಾಕರಿಸಿದಲ್ಲಿ ಅವರು ಬಯಸುವಂತಹ ರೀತಿಯಲ್ಲಿ ಸಾಮಾಜಿಕ ಚಟುವಟಿಕೆಗೆ ಬಳಸಲು ಕೋರಿದ್ದರು.</p>.<p><strong>ಜೀವ ಉಳಿಸಲಾಗದ ಕೊರಗು: </strong>‘ಏಳು ವರ್ಷಗಳಿಂದ ದೀಪಕ್ ನನ್ನ ಜೊತೆಗಿದ್ದ. ಹಲ್ಲೆ ನಡೆದಾಗ ಕೂಗಿಕೊಳ್ಳುತ್ತಲೇ ಮನೆಯಿಂದ ಓಡಿಬಂದೆ. ಆತನ ಜೀವ ಉಳಿಸಲು ನನ್ನಿಂದ ಆಗಲಿಲ್ಲ. ಈಗ ಈ ಗೌರವ ನನಗೆ ಬೇಕಿತ್ತಾ ಎಂದು ಅನಿಸುತ್ತಿದೆ’ ಎಂದು ಮಜೀದ್ ಭಾವುಕರಾದರು.</p>.<p>ಶೇಖರ್ ಮಾತನಾಡಿ, ‘ನನ್ನ ಬಳಿ ಆಂಬುಲೆನ್ಸ್ ಇದೆ. ಬಶೀರ್ ಕೊಲೆಯಾದ ದಿನ ನಾನು ಕೊಟ್ಟಾರ ಚೌಕಿಗೆ ಬರುತ್ತಿದ್ದಾಗ ಯುವಕನೊಬ್ಬ ಗಾಬರಿಯಲ್ಲಿ ಮೊಬೈಲ್ನಿಂದ ಪೊಲೀಸರಿಗೆ ಕರೆ ಮಾಡುತ್ತಿದ್ದ. ಇಳಿದು ನೋಡಿದಾಗ ಬಶೀರ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆ ಕ್ಷಣಕ್ಕೆ ಅವರ ಜೀವ ಉಳಿಸಬೇಕೆಂಬ ಆಶಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>