<p><strong>ಬೆಂಗಳೂರು:</strong> ಉಪಗ್ರಹ ಸೆರೆ ಹಿಡಿಯುವ ಚಿತ್ರಗಳನ್ನು ಅಕ್ರಮ ಗಣಿಗಾರಿಗೆ ತನಿಖೆಗೆ ಬಳಸಿಕೊಳ್ಳಲು ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್ಐಟಿ) ಮುಂದಾಗಿದೆ.</p>.<p>20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಉಪಗ್ರಹ ದೂರ ಸಂವೇದಿ ಚಿತ್ರಗಳನ್ನು (ಸ್ಯಾಟಲೈಟ್ ರಿಮೋಟ್ ಸೆನ್ಸಿಂಗ್ ಇಮೇಜ್) ಆಧರಿಸಿ ಎಷ್ಟು ಪ್ರಮಾಣದ ಅದಿರು ತೆಗೆಯಲಾಗಿದೆ ಎಂಬುದನ್ನು ವೈಜ್ಞಾನಿಕ ಲೆಕ್ಕಾಚಾರದಿಂದ ಪತ್ತೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಲು ಪ್ರಯತ್ನಿಸುತ್ತಿದೆ.</p>.<p>ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನೀಡಿದ್ದ ವರದಿ ಆಧರಿಸಿ 50 ಲಕ್ಷ ಟನ್ಗೂ ಕಡಿಮೆ ಅದಿರು ರಫ್ತಿಗೆ ಸಂಬಂಧಿಸಿದ 69 ಪ್ರಕರಣಗಳ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಈ ಪೈಕಿ 28 ಪ್ರಕರಣಗಳಲ್ಲಿ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದೆ. 19 ಪ್ರಕರಣಗಳಲ್ಲಿ ‘ಬಿ’ ರಿಪೋರ್ಟ್ ಸಲ್ಲಿಕೆಯಾಗಿದ್ದು, ಉಳಿದ ಪ್ರಕರಣಗಳ ತನಿಖೆ ನಡೆಸುತ್ತಿದೆ.</p>.<p>ವಿವಿಧ ಬಂದರುಗಳಿಂದ ಎಷ್ಟು ಪ್ರಮಾಣದ ಅದಿರು ಸಾಗಣೆಯಾಗಿದೆ ಎಂಬ ಮಾಹಿತಿಗಳನ್ನು ಕಲೆ ಹಾಕಲಾಗಿದೆ. ಆದರೆ, ಗಣಿ ಪ್ರದೇಶದಿಂದ ಎಷ್ಟು ಪ್ರಮಾಣದ ಅದಿರು ತೆಗೆಯಲಾಗಿದೆ ಎಂಬುದನ್ನು ನಿಖರವಾಗಿ ತಿಳಿದುಕೊಳ್ಳಲು ಈ ಹೊಸ ಪ್ರಯತ್ನಕ್ಕೆ ಎಸ್ಐಟಿ ಕೈ ಹಾಕಿದೆ.</p>.<p>ಈ ಸಂಬಂಧ ತೆಲಂಗಾಣದ ಸಿಂಗರೇಣಿ ಕಲ್ಲಿದ್ದಲು ಕಂಪನಿ ಜೊತೆ ಎಸ್ಐಟಿ ಅಧಿಕಾರಿಗಳು ಪತ್ರ ವ್ಯವಹಾರ ನಡೆಸಿದ್ದು, ಉಪಗ್ರಹ ಚಿತ್ರಗಳನ್ನು ಆಧರಿಸಿ ವರದಿ ಸಿದ್ಧಪಡಿಸಿಕೊಡಲು ಕೋರಿದ್ದರು. ಆದರೆ, ಈ ಕೆಲಸಕ್ಕೆ ಕೋಟ್ಯಂತರ ರೂಪಾಯಿ ಶುಲ್ಕ ಕೊಡಬೇಕಾಗುತ್ತದೆ ಎಂದು ಕಂಪನಿ ವರದಿ ನೀಡಿದ ಬಳಿಕ ಪ್ರಸ್ತಾಪ ಕೈಬಿಡಲಾಗಿದೆ.</p>.<p>ಕರ್ನಾಟಕ ದೂರ ಸಂವೇದಿ ಅನ್ವಯಿಕ ಕೇಂದ್ರದ(ಕೆಎಸ್ಆರ್ಎಸ್ಎಸಿ) ನೆರವು ಪಡೆದು ಕಡಿಮೆ ಖರ್ಚಿನಲ್ಲಿ ‘ಸ್ಯಾಟಲೈಟ್ ರಿಮೋಟ್ ಸೆನ್ಸಿಂಗ್ ಇಮೇಜ್’ ವರದಿ ಪಡೆಯಲು ಪ್ರಯತ್ನ ಮುಂದುವರಿಸಲಾಗಿದೆ.</p>.<p>ಈ ವರದಿ ಬರಲು ಸಾಕಷ್ಟು ಕಾಲಾವಕಾಶ ಹಿಡಿಯಲಿದ್ದು, ಅಷ್ಟರೊಳಗೆ ಮಧ್ಯಂತರ ಆರೋಪ ಪಟ್ಟಿ ಸಲ್ಲಿಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.<br /> ***<br /> <strong>ಉಪಗ್ರಹ ಚಿತ್ರಗಳ ಬಳಕೆ ಹೇಗೆ:</strong></p>.<p>ಗಣಿ ಪ್ರದೇಶದಲ್ಲಿ ಅದಿರು ತೆಗೆಯುವ ಮುನ್ನ ಉಪಗ್ರಹ ಸೆರೆ ಹಿಡಿದ ಚಿತ್ರ ಮತ್ತು ಅದಿರು ತೆಗೆದ ಬಳಿಕ ಸೆರೆ ಹಿಡಿದಿರುವ ಚಿತ್ರಗಳನ್ನು ಹೋಲಿಕೆ ಮಾಡಲಾಗುತ್ತದೆ.</p>.<p>ಅದಿರಿನಿಂದ ಬೇರ್ಪಡಿಸಿದ ಮಣ್ಣಿನ ಚಿತ್ರವೂ ಅಲ್ಲೇ ಸಿಗಲಿದೆ. ಎರಡನ್ನೂ ವೈಜ್ಞಾನಿಕವಾಗಿ ಲೆಕ್ಕಚಾರ ಮಾಡಿ ಇಂತಿಷ್ಟೇ ಪ್ರಮಾಣದ ಅದಿರು ತೆಗೆಯಲಾಗಿದೆ ಎಂಬುದನ್ನು ನಿಖರವಾಗಿ ತಿಳಿದುಕೊಳ್ಳಬಹುದಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉಪಗ್ರಹ ಸೆರೆ ಹಿಡಿಯುವ ಚಿತ್ರಗಳನ್ನು ಅಕ್ರಮ ಗಣಿಗಾರಿಗೆ ತನಿಖೆಗೆ ಬಳಸಿಕೊಳ್ಳಲು ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್ಐಟಿ) ಮುಂದಾಗಿದೆ.</p>.<p>20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಉಪಗ್ರಹ ದೂರ ಸಂವೇದಿ ಚಿತ್ರಗಳನ್ನು (ಸ್ಯಾಟಲೈಟ್ ರಿಮೋಟ್ ಸೆನ್ಸಿಂಗ್ ಇಮೇಜ್) ಆಧರಿಸಿ ಎಷ್ಟು ಪ್ರಮಾಣದ ಅದಿರು ತೆಗೆಯಲಾಗಿದೆ ಎಂಬುದನ್ನು ವೈಜ್ಞಾನಿಕ ಲೆಕ್ಕಾಚಾರದಿಂದ ಪತ್ತೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಲು ಪ್ರಯತ್ನಿಸುತ್ತಿದೆ.</p>.<p>ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನೀಡಿದ್ದ ವರದಿ ಆಧರಿಸಿ 50 ಲಕ್ಷ ಟನ್ಗೂ ಕಡಿಮೆ ಅದಿರು ರಫ್ತಿಗೆ ಸಂಬಂಧಿಸಿದ 69 ಪ್ರಕರಣಗಳ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಈ ಪೈಕಿ 28 ಪ್ರಕರಣಗಳಲ್ಲಿ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದೆ. 19 ಪ್ರಕರಣಗಳಲ್ಲಿ ‘ಬಿ’ ರಿಪೋರ್ಟ್ ಸಲ್ಲಿಕೆಯಾಗಿದ್ದು, ಉಳಿದ ಪ್ರಕರಣಗಳ ತನಿಖೆ ನಡೆಸುತ್ತಿದೆ.</p>.<p>ವಿವಿಧ ಬಂದರುಗಳಿಂದ ಎಷ್ಟು ಪ್ರಮಾಣದ ಅದಿರು ಸಾಗಣೆಯಾಗಿದೆ ಎಂಬ ಮಾಹಿತಿಗಳನ್ನು ಕಲೆ ಹಾಕಲಾಗಿದೆ. ಆದರೆ, ಗಣಿ ಪ್ರದೇಶದಿಂದ ಎಷ್ಟು ಪ್ರಮಾಣದ ಅದಿರು ತೆಗೆಯಲಾಗಿದೆ ಎಂಬುದನ್ನು ನಿಖರವಾಗಿ ತಿಳಿದುಕೊಳ್ಳಲು ಈ ಹೊಸ ಪ್ರಯತ್ನಕ್ಕೆ ಎಸ್ಐಟಿ ಕೈ ಹಾಕಿದೆ.</p>.<p>ಈ ಸಂಬಂಧ ತೆಲಂಗಾಣದ ಸಿಂಗರೇಣಿ ಕಲ್ಲಿದ್ದಲು ಕಂಪನಿ ಜೊತೆ ಎಸ್ಐಟಿ ಅಧಿಕಾರಿಗಳು ಪತ್ರ ವ್ಯವಹಾರ ನಡೆಸಿದ್ದು, ಉಪಗ್ರಹ ಚಿತ್ರಗಳನ್ನು ಆಧರಿಸಿ ವರದಿ ಸಿದ್ಧಪಡಿಸಿಕೊಡಲು ಕೋರಿದ್ದರು. ಆದರೆ, ಈ ಕೆಲಸಕ್ಕೆ ಕೋಟ್ಯಂತರ ರೂಪಾಯಿ ಶುಲ್ಕ ಕೊಡಬೇಕಾಗುತ್ತದೆ ಎಂದು ಕಂಪನಿ ವರದಿ ನೀಡಿದ ಬಳಿಕ ಪ್ರಸ್ತಾಪ ಕೈಬಿಡಲಾಗಿದೆ.</p>.<p>ಕರ್ನಾಟಕ ದೂರ ಸಂವೇದಿ ಅನ್ವಯಿಕ ಕೇಂದ್ರದ(ಕೆಎಸ್ಆರ್ಎಸ್ಎಸಿ) ನೆರವು ಪಡೆದು ಕಡಿಮೆ ಖರ್ಚಿನಲ್ಲಿ ‘ಸ್ಯಾಟಲೈಟ್ ರಿಮೋಟ್ ಸೆನ್ಸಿಂಗ್ ಇಮೇಜ್’ ವರದಿ ಪಡೆಯಲು ಪ್ರಯತ್ನ ಮುಂದುವರಿಸಲಾಗಿದೆ.</p>.<p>ಈ ವರದಿ ಬರಲು ಸಾಕಷ್ಟು ಕಾಲಾವಕಾಶ ಹಿಡಿಯಲಿದ್ದು, ಅಷ್ಟರೊಳಗೆ ಮಧ್ಯಂತರ ಆರೋಪ ಪಟ್ಟಿ ಸಲ್ಲಿಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.<br /> ***<br /> <strong>ಉಪಗ್ರಹ ಚಿತ್ರಗಳ ಬಳಕೆ ಹೇಗೆ:</strong></p>.<p>ಗಣಿ ಪ್ರದೇಶದಲ್ಲಿ ಅದಿರು ತೆಗೆಯುವ ಮುನ್ನ ಉಪಗ್ರಹ ಸೆರೆ ಹಿಡಿದ ಚಿತ್ರ ಮತ್ತು ಅದಿರು ತೆಗೆದ ಬಳಿಕ ಸೆರೆ ಹಿಡಿದಿರುವ ಚಿತ್ರಗಳನ್ನು ಹೋಲಿಕೆ ಮಾಡಲಾಗುತ್ತದೆ.</p>.<p>ಅದಿರಿನಿಂದ ಬೇರ್ಪಡಿಸಿದ ಮಣ್ಣಿನ ಚಿತ್ರವೂ ಅಲ್ಲೇ ಸಿಗಲಿದೆ. ಎರಡನ್ನೂ ವೈಜ್ಞಾನಿಕವಾಗಿ ಲೆಕ್ಕಚಾರ ಮಾಡಿ ಇಂತಿಷ್ಟೇ ಪ್ರಮಾಣದ ಅದಿರು ತೆಗೆಯಲಾಗಿದೆ ಎಂಬುದನ್ನು ನಿಖರವಾಗಿ ತಿಳಿದುಕೊಳ್ಳಬಹುದಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>