<p><strong>ಮೈಸೂರು:</strong> ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗುರುತಿಸಿರುವ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ನಟಿ ಭಾರತಿ ವಿಷ್ಣುವರ್ಧನ್ ಮಂಗಳವಾರ ಜಿಲ್ಲಾಧಿಕಾರಿ ಡಿ.ರಂದೀಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಮಾರು 40 ನಿಮಿಷ ಮಾತುಕತೆ ನಡೆಯಿತು. ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ‘ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಸ್ಮಾರಕ ನಿರ್ಮಾಣ ಕೆಲಸ ನನೆಗುದಿಗೆ ಬಿದ್ದಿದೆ. ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯುವಂತೆ ರೈತರಲ್ಲಿ ಮನವಿ ಮಾಡಿಕೊಳ್ಳುವೆ’ ಎಂದು ಹೇಳಿದರು.</p>.<p>‘ತಡೆಯಾಜ್ಞೆ ಆದೇಶವನ್ನು ಹೈಕೋರ್ಟ್ ವಾಪಸ್ ತೆಗೆದುಕೊಂಡರೆ ಸ್ಮಾರಕ ನಿರ್ಮಾಣದ ಕೆಲಸ ಶುರುಮಾಡಲು ಸುಲಭವಾಗುತ್ತದೆ. ಹೈಕೋರ್ಟ್ ಮೊರೆಹೋಗಿರುವ ರೈತರ ಜತೆ ಮಾತನಾಡುತ್ತೇನೆ. ರೈತರು ನಮ್ಮ ಮನವಿಗೆ ಸ್ಪಂದಿಸುವ ವಿಶ್ವಾಸವಿದೆ’ ಎಂದರು.</p>.<p>‘ರೈತರು ಕೂಡಾ ವಿಷ್ಣು ಅಭಿಮಾನಿಗಳಾಗಿದ್ದಾರೆ. ಸ್ಮಾರಕ ನಿರ್ಮಾಣ ಪೂರ್ಣಗೊಂಡ ಬಳಿಕ ಕೆಲಸ ಕೊಡಿಸುವುದಾಗಿ ರೈತರಿಗೆ ಭರವಸೆ ನೀಡಿದ್ದೇನೆ. ಅವರು ಮನಸ್ಸು ಮಾಡಿ ಕೆಲಸ ಶುರುಮಾಡಲು ಅವಕಾಶ ಮಾಡಿಕೊಟ್ಟರೆ ಎಲ್ಲರಿಗೂ ಸಂತಸವಾಗುತ್ತದೆ’ ಎಂದು ಭಾರತಿ ತಿಳಿಸಿದರು.</p>.<p>‘ವಿವಾದವನ್ನು ಶೀಘ್ರ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಕೋರಲು ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ. ಭೂಮಿ ಕಳೆದುಕೊಂಡ ರೈತರಿಗೆ ಬೇರೆ ಕಡೆ ಜಮೀನು ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ’ ಎಂದರು.<br /> ***<br /> <strong>ಏನಿದು ವಿವಾದ</strong></p>.<p>ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮೈಸೂರು ಸಮೀಪ ಎಚ್.ಡಿ.ಕೋಟೆ ರಸ್ತೆಯ ಉದ್ಬೂರಿನಲ್ಲಿ ಜಾಗ ಗುರುತಿಸಿ ಶಂಕುಸ್ಥಾಪನೆ ನಡೆಸಲಾಗಿತ್ತು. ಆದರೆ ಕಾಮಗಾರಿ ಅರಂಭಗೊಂಡ ಕೆಲ ದಿನಗಳಲ್ಲೇ ಜಮೀನಿನ ರೈತರು ಹೈಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ.</p>.<p>ಸ್ಮಾರಕ ನಿರ್ಮಾಣಕ್ಕೆ ಗುರುತಿಸಿರುವ ಜಮೀನು ಸರ್ಕಾರಕ್ಕೆ ಸೇರಿಲ್ಲ. ರೈತರ ಜಮೀನಿನಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂಬುದು ರೈತರ ವಾದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗುರುತಿಸಿರುವ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ನಟಿ ಭಾರತಿ ವಿಷ್ಣುವರ್ಧನ್ ಮಂಗಳವಾರ ಜಿಲ್ಲಾಧಿಕಾರಿ ಡಿ.ರಂದೀಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಮಾರು 40 ನಿಮಿಷ ಮಾತುಕತೆ ನಡೆಯಿತು. ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ‘ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಸ್ಮಾರಕ ನಿರ್ಮಾಣ ಕೆಲಸ ನನೆಗುದಿಗೆ ಬಿದ್ದಿದೆ. ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯುವಂತೆ ರೈತರಲ್ಲಿ ಮನವಿ ಮಾಡಿಕೊಳ್ಳುವೆ’ ಎಂದು ಹೇಳಿದರು.</p>.<p>‘ತಡೆಯಾಜ್ಞೆ ಆದೇಶವನ್ನು ಹೈಕೋರ್ಟ್ ವಾಪಸ್ ತೆಗೆದುಕೊಂಡರೆ ಸ್ಮಾರಕ ನಿರ್ಮಾಣದ ಕೆಲಸ ಶುರುಮಾಡಲು ಸುಲಭವಾಗುತ್ತದೆ. ಹೈಕೋರ್ಟ್ ಮೊರೆಹೋಗಿರುವ ರೈತರ ಜತೆ ಮಾತನಾಡುತ್ತೇನೆ. ರೈತರು ನಮ್ಮ ಮನವಿಗೆ ಸ್ಪಂದಿಸುವ ವಿಶ್ವಾಸವಿದೆ’ ಎಂದರು.</p>.<p>‘ರೈತರು ಕೂಡಾ ವಿಷ್ಣು ಅಭಿಮಾನಿಗಳಾಗಿದ್ದಾರೆ. ಸ್ಮಾರಕ ನಿರ್ಮಾಣ ಪೂರ್ಣಗೊಂಡ ಬಳಿಕ ಕೆಲಸ ಕೊಡಿಸುವುದಾಗಿ ರೈತರಿಗೆ ಭರವಸೆ ನೀಡಿದ್ದೇನೆ. ಅವರು ಮನಸ್ಸು ಮಾಡಿ ಕೆಲಸ ಶುರುಮಾಡಲು ಅವಕಾಶ ಮಾಡಿಕೊಟ್ಟರೆ ಎಲ್ಲರಿಗೂ ಸಂತಸವಾಗುತ್ತದೆ’ ಎಂದು ಭಾರತಿ ತಿಳಿಸಿದರು.</p>.<p>‘ವಿವಾದವನ್ನು ಶೀಘ್ರ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಕೋರಲು ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ. ಭೂಮಿ ಕಳೆದುಕೊಂಡ ರೈತರಿಗೆ ಬೇರೆ ಕಡೆ ಜಮೀನು ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ’ ಎಂದರು.<br /> ***<br /> <strong>ಏನಿದು ವಿವಾದ</strong></p>.<p>ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮೈಸೂರು ಸಮೀಪ ಎಚ್.ಡಿ.ಕೋಟೆ ರಸ್ತೆಯ ಉದ್ಬೂರಿನಲ್ಲಿ ಜಾಗ ಗುರುತಿಸಿ ಶಂಕುಸ್ಥಾಪನೆ ನಡೆಸಲಾಗಿತ್ತು. ಆದರೆ ಕಾಮಗಾರಿ ಅರಂಭಗೊಂಡ ಕೆಲ ದಿನಗಳಲ್ಲೇ ಜಮೀನಿನ ರೈತರು ಹೈಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ.</p>.<p>ಸ್ಮಾರಕ ನಿರ್ಮಾಣಕ್ಕೆ ಗುರುತಿಸಿರುವ ಜಮೀನು ಸರ್ಕಾರಕ್ಕೆ ಸೇರಿಲ್ಲ. ರೈತರ ಜಮೀನಿನಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂಬುದು ರೈತರ ವಾದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>