<p><strong>ಬೆಂಗಳೂರು:</strong> ಕಾವೇರಿ ನದಿ ನೀರು ಬಿಡುಗಡೆಗೆ ಮನವಿ ಮಾಡಲು ತಾವು ಕರ್ನಾಟಕಕ್ಕೆ ಬರಲಿದ್ದು ಭೇಟಿಗೆ ಸಮಯ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಪತ್ರ ಬರೆದಿದ್ದಾರೆ.</p>.<p>ಸಿದ್ದರಾಮಯ್ಯ ಮತ್ತು ಮುಖ್ಯ ಕಾರ್ಯದರ್ಶಿ ರತ್ನಪ್ರಭಾಗೆ ಮಂಗಳವಾರ ಪಳನಿಸ್ವಾಮಿ ಪತ್ರ ತಲುಪಿದೆ. ಆದರೆ, ಭೇಟಿಗೆ ಇನ್ನು ಸಮಯ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ರಾಜ್ಯದಲ್ಲೇ ಸಮಸ್ಯೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆ ಉದ್ಭವಿಸದು. ಈ ಬಗ್ಗೆ ಮುಖ್ಯಮಂತ್ರಿ ಇನ್ನೂ ನಿರ್ಣಯ ತೆಗೆದು<br /> ಕೊಂಡಿಲ್ಲ. ಈಗಲೇ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಸಾಧ್ಯತೆ ಕಡಿಮೆ ಎಂದೂ ಮೂಲಗಳು ತಿಳಿಸಿವೆ.</p>.<p>ಮೆಟ್ಟೂರು ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ಅಚ್ಚುಕಟ್ಟು ಪ್ರದೇಶದ ಕೃಷಿ ಕಾರ್ಯಗಳಿಗೆ ತೊಂದರೆ ಆಗಿದೆ. ಆದ್ದರಿಂದ ತಕ್ಷಣವೇ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಗೂ ಪಳನಿಸ್ವಾಮಿ ಈಗಾಗಲೇ ಪತ್ರ ಬರೆದಿದ್ದಾರೆ.</p>.<p>ಈ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿ ಮಾಡಿ ಮನವಿ ಮಾಡಲು ಪಳನಿಸ್ವಾಮಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಪಳನಿಸ್ವಾಮಿ ಜತೆಗೆ ಸಚಿವರು ಮತ್ತು ತಜ್ಞರ ತಂಡ ರಾಜ್ಯಕ್ಕೆ ಭೇಟಿ ನೀಡಲು ಸಿದ್ಧತೆ ನಡೆಸಿದೆ. ಈ ಸಂಬಂಧ ಮಂಗಳವಾರ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿತು. ಸಭೆಯಲ್ಲಿ ಉಪಮುಖ್ಯಮಂತ್ರಿ ಓ.ಪನ್ನೀರಸೆಲ್ವಂ ಭಾಗವಹಿಸಿದ್ದರು. ಬಳಿಕ ಸಿದ್ದರಾಮಯ್ಯ ಅವರಿಗೆ ಪತ್ರ ಕಳುಹಿಸಲಾಯಿತು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾವೇರಿ ನದಿ ನೀರು ಬಿಡುಗಡೆಗೆ ಮನವಿ ಮಾಡಲು ತಾವು ಕರ್ನಾಟಕಕ್ಕೆ ಬರಲಿದ್ದು ಭೇಟಿಗೆ ಸಮಯ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಪತ್ರ ಬರೆದಿದ್ದಾರೆ.</p>.<p>ಸಿದ್ದರಾಮಯ್ಯ ಮತ್ತು ಮುಖ್ಯ ಕಾರ್ಯದರ್ಶಿ ರತ್ನಪ್ರಭಾಗೆ ಮಂಗಳವಾರ ಪಳನಿಸ್ವಾಮಿ ಪತ್ರ ತಲುಪಿದೆ. ಆದರೆ, ಭೇಟಿಗೆ ಇನ್ನು ಸಮಯ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ರಾಜ್ಯದಲ್ಲೇ ಸಮಸ್ಯೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆ ಉದ್ಭವಿಸದು. ಈ ಬಗ್ಗೆ ಮುಖ್ಯಮಂತ್ರಿ ಇನ್ನೂ ನಿರ್ಣಯ ತೆಗೆದು<br /> ಕೊಂಡಿಲ್ಲ. ಈಗಲೇ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಸಾಧ್ಯತೆ ಕಡಿಮೆ ಎಂದೂ ಮೂಲಗಳು ತಿಳಿಸಿವೆ.</p>.<p>ಮೆಟ್ಟೂರು ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ಅಚ್ಚುಕಟ್ಟು ಪ್ರದೇಶದ ಕೃಷಿ ಕಾರ್ಯಗಳಿಗೆ ತೊಂದರೆ ಆಗಿದೆ. ಆದ್ದರಿಂದ ತಕ್ಷಣವೇ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಗೂ ಪಳನಿಸ್ವಾಮಿ ಈಗಾಗಲೇ ಪತ್ರ ಬರೆದಿದ್ದಾರೆ.</p>.<p>ಈ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿ ಮಾಡಿ ಮನವಿ ಮಾಡಲು ಪಳನಿಸ್ವಾಮಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಪಳನಿಸ್ವಾಮಿ ಜತೆಗೆ ಸಚಿವರು ಮತ್ತು ತಜ್ಞರ ತಂಡ ರಾಜ್ಯಕ್ಕೆ ಭೇಟಿ ನೀಡಲು ಸಿದ್ಧತೆ ನಡೆಸಿದೆ. ಈ ಸಂಬಂಧ ಮಂಗಳವಾರ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿತು. ಸಭೆಯಲ್ಲಿ ಉಪಮುಖ್ಯಮಂತ್ರಿ ಓ.ಪನ್ನೀರಸೆಲ್ವಂ ಭಾಗವಹಿಸಿದ್ದರು. ಬಳಿಕ ಸಿದ್ದರಾಮಯ್ಯ ಅವರಿಗೆ ಪತ್ರ ಕಳುಹಿಸಲಾಯಿತು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>