<p><strong>ವಿಜಯಪುರ:</strong> ‘ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಆಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಇದ್ದರೆ ಅದನ್ನು ಗೃಹ ಸಚಿವ ರಾಮಲಿಂಗಾರೆಡ್ಡಿ ಬಹಿರಂಗಪಡಿಸಬೇಕು’ ಎಂದು ಜೆಡಿಎಸ್ ರಾಜ್ಯ ಘಟಕದ<br /> ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಇಲ್ಲಿ ಒತ್ತಾಯಿಸಿದರು.</p>.<p>‘ಮುಸ್ಲಿಮರ ಮತಗಳು ಕೈತಪ್ಪಲಿವೆ ಎನ್ನುವ ಭಯದಿಂದ ಕಾಂಗ್ರೆಸ್ ಮುಖಂಡರು ಈ ರೀತಿಯ ಊಹಾಪೋಹದ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>‘ಚುನಾವಣಾ ಪೂರ್ವದಲ್ಲಿ ಬಿಜೆಪಿಯವರು ಬಿ.ಎಸ್.ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಾರೆ. ನಂತರದ ವಿದ್ಯಮಾನ ನೋಡಿಕೊಂಡು ಏನು ಮಾಡಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ’ ಎಂದು ಅವರು ಹೇಳಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾರ್ಯಕ್ರಮ ವಿಫಲವಾಗಿದೆ. ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವ ಸಮೂಹ ಬೇಸತ್ತು ಪಕೋಡ ಮಾಡಲು ಬೀದಿಗಿಳಿಯುವಂತಾಗಿದೆ’ ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಆಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಇದ್ದರೆ ಅದನ್ನು ಗೃಹ ಸಚಿವ ರಾಮಲಿಂಗಾರೆಡ್ಡಿ ಬಹಿರಂಗಪಡಿಸಬೇಕು’ ಎಂದು ಜೆಡಿಎಸ್ ರಾಜ್ಯ ಘಟಕದ<br /> ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಇಲ್ಲಿ ಒತ್ತಾಯಿಸಿದರು.</p>.<p>‘ಮುಸ್ಲಿಮರ ಮತಗಳು ಕೈತಪ್ಪಲಿವೆ ಎನ್ನುವ ಭಯದಿಂದ ಕಾಂಗ್ರೆಸ್ ಮುಖಂಡರು ಈ ರೀತಿಯ ಊಹಾಪೋಹದ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>‘ಚುನಾವಣಾ ಪೂರ್ವದಲ್ಲಿ ಬಿಜೆಪಿಯವರು ಬಿ.ಎಸ್.ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಾರೆ. ನಂತರದ ವಿದ್ಯಮಾನ ನೋಡಿಕೊಂಡು ಏನು ಮಾಡಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ’ ಎಂದು ಅವರು ಹೇಳಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾರ್ಯಕ್ರಮ ವಿಫಲವಾಗಿದೆ. ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವ ಸಮೂಹ ಬೇಸತ್ತು ಪಕೋಡ ಮಾಡಲು ಬೀದಿಗಿಳಿಯುವಂತಾಗಿದೆ’ ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>