<p><strong>ಹೊಸಪೇಟೆ: </strong>‘ಬಡತನ ರೇಖೆಗಿಂತ ಕೆಳಗಿನ (ಬಿ.ಪಿ.ಎಲ್.) ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಕಂಬಳಿ ಕೊಡುವ ಉದ್ದೇಶ ಇದೆ. ಈ ಕುರಿತು ಬಜೆಟ್ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ’ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು.</p>.<p>ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹಾಲುಮತ ಅಧ್ಯಯನ ಪೀಠದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇತ್ತೀಚೆಗೆ ಕಂಬಳಿ ತಯಾರಿಸುವ ನೇಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ನಾನೂ ಅಲ್ಲಿಯೇ ಇದ್ದೆ. ಕಂಬಳಿ ನೇಕಾರರನ್ನು ರಕ್ಷಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದರು. ಅವರನ್ನು ಆರ್ಥಿಕವಾಗಿ ಸದೃಢ ಮಾಡಬಹುದು. ಕಂಬಳಿಯನ್ನು ಉಚಿತವಾಗಿ ಕೊಡಬೇಕೋ ಅಥವಾ ರಿಯಾಯಿತಿ ದರದಲ್ಲಿ ಕೊಡಬೇಕು ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>‘ಬಡತನ ರೇಖೆಗಿಂತ ಕೆಳಗಿನ (ಬಿ.ಪಿ.ಎಲ್.) ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಕಂಬಳಿ ಕೊಡುವ ಉದ್ದೇಶ ಇದೆ. ಈ ಕುರಿತು ಬಜೆಟ್ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ’ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು.</p>.<p>ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹಾಲುಮತ ಅಧ್ಯಯನ ಪೀಠದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇತ್ತೀಚೆಗೆ ಕಂಬಳಿ ತಯಾರಿಸುವ ನೇಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ನಾನೂ ಅಲ್ಲಿಯೇ ಇದ್ದೆ. ಕಂಬಳಿ ನೇಕಾರರನ್ನು ರಕ್ಷಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದರು. ಅವರನ್ನು ಆರ್ಥಿಕವಾಗಿ ಸದೃಢ ಮಾಡಬಹುದು. ಕಂಬಳಿಯನ್ನು ಉಚಿತವಾಗಿ ಕೊಡಬೇಕೋ ಅಥವಾ ರಿಯಾಯಿತಿ ದರದಲ್ಲಿ ಕೊಡಬೇಕು ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>