<p><strong>ಹುಬ್ಬಳ್ಳಿ:</strong> ‘ಬಿ.ಸಿ.ಪಾಟೀಲ ಯಾರು? ಅವರು, ಬೇರೆ, ಬೇರೆ ಪಕ್ಷ ಸುತ್ತಿ ಬಂದಿದ್ದಾರೆ. ಹಾವೇರಿ ಜಿಲ್ಲೆಯವರಲ್ಲ. ನಾನು ಹಾವೇರಿ ಜಿಲ್ಲೆಯವಳು. ಪಾಟೀಲರು ಬೇಕಾದರೆ ಬೇರೆ ಕಡೆ ಕ್ಷೇತ್ರ ಹುಡುಕಿಕೊಳ್ಳಲಿ’ ಎಂದು ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಶಿಕಲಾ ಕವಲಿ ಹೇಳಿದರು.</p>.<p>‘ಹಾವೇರಿ ಜಿಲ್ಲೆಯ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಾಗಿದ್ದೇನೆ. ಇಂದಿರಾಗಾಂಧಿ ಇದ್ದಾಗ ಕಾಂಗ್ರೆಸ್ ಸೇರಿದ್ದೇನೆ. ಪಕ್ಷದಲ್ಲಿ ವಿವಿಧ ಹುದ್ದೆ ನಿರ್ವಹಿಸಿದ್ದೇನೆ. ನಾನೇ ಹೈಕಮಾಂಡ್ ಅಭ್ಯರ್ಥಿ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಪಾಟೀಲರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನವರು. ಹಾಗಾಗಿ ಅವರೇ ಬೇರೆ ಕಡೆಯಿಂದ ಸ್ಪರ್ಧಿಸಲಿ’ ಎಂದರು.</p>.<p>‘ನಾನು ತತ್ವ ಅಂದಿದ್ದಕ್ಕೆ ಇಲ್ಲಿದ್ದೇನೆ. ನನ್ನ ಜೊತೆಗಿದ್ದ ಸಚಿವರಾದ ಡಿ.ಕೆ. ಶಿವಕುಮಾರ್, ಕೆ.ಜೆ.ಜಾರ್ಜ್, ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಅಲ್ಲಿದ್ದಾರೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಬಿ.ಸಿ.ಪಾಟೀಲ ಯಾರು? ಅವರು, ಬೇರೆ, ಬೇರೆ ಪಕ್ಷ ಸುತ್ತಿ ಬಂದಿದ್ದಾರೆ. ಹಾವೇರಿ ಜಿಲ್ಲೆಯವರಲ್ಲ. ನಾನು ಹಾವೇರಿ ಜಿಲ್ಲೆಯವಳು. ಪಾಟೀಲರು ಬೇಕಾದರೆ ಬೇರೆ ಕಡೆ ಕ್ಷೇತ್ರ ಹುಡುಕಿಕೊಳ್ಳಲಿ’ ಎಂದು ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಶಿಕಲಾ ಕವಲಿ ಹೇಳಿದರು.</p>.<p>‘ಹಾವೇರಿ ಜಿಲ್ಲೆಯ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಾಗಿದ್ದೇನೆ. ಇಂದಿರಾಗಾಂಧಿ ಇದ್ದಾಗ ಕಾಂಗ್ರೆಸ್ ಸೇರಿದ್ದೇನೆ. ಪಕ್ಷದಲ್ಲಿ ವಿವಿಧ ಹುದ್ದೆ ನಿರ್ವಹಿಸಿದ್ದೇನೆ. ನಾನೇ ಹೈಕಮಾಂಡ್ ಅಭ್ಯರ್ಥಿ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಪಾಟೀಲರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನವರು. ಹಾಗಾಗಿ ಅವರೇ ಬೇರೆ ಕಡೆಯಿಂದ ಸ್ಪರ್ಧಿಸಲಿ’ ಎಂದರು.</p>.<p>‘ನಾನು ತತ್ವ ಅಂದಿದ್ದಕ್ಕೆ ಇಲ್ಲಿದ್ದೇನೆ. ನನ್ನ ಜೊತೆಗಿದ್ದ ಸಚಿವರಾದ ಡಿ.ಕೆ. ಶಿವಕುಮಾರ್, ಕೆ.ಜೆ.ಜಾರ್ಜ್, ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಅಲ್ಲಿದ್ದಾರೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>