<p><strong>ಬೆಂಗಳೂರು: </strong>ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅಧ್ಯಕ್ಷತೆಯಲ್ಲಿ ರಚಿಸಿರುವ ಆರನೇ ವೇತನ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ (ಇದೇ 31) ವರದಿ ಸಲ್ಲಿಸಲಿದೆ.</p>.<p>ಬೆಳಿಗ್ಗೆ 10.30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಆಯೋಗದ ಅಧ್ಯಕ್ಷ ಎಂ.ಆರ್. ಶ್ರೀನಿವಾಸ ಮೂರ್ತಿ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮೊದಲ ವರದಿಯನ್ನು ಸಲ್ಲಿಸಲಿದ್ದಾರೆ.</p>.<p>ಇನ್ನು ಮೂರು ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.</p>.<p>ರಾಜ್ಯದಲ್ಲಿರುವ 5.45 ಲಕ್ಷ ನೌಕರರು, 3 ಲಕ್ಷ ನಿವೃತ್ತ ನೌಕರರು ಹಾಗೂ ಅವರ ಅವಲಂಬಿತರನ್ನು ಓಲೈಸುವ ದೃಷ್ಟಿಯಿಂದ ಗಣನೀಯವಾಗಿ ವೇತನ ಹೆಚ್ಚಿಸುವಂತೆ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಕಡಿಮೆ ವೇತನ ಶ್ರೇಣಿ ಇರುವವರಿಗೆ ಹೆಚ್ಚಿನ ಪ್ರಮಾಣದ ಫಿಟ್ಮೆಂಟ್ (ವೇತನ ತಾರತಮ್ಯ ನಿವಾರಿಸಲು ನೀಡುವ ಮೊತ್ತ) ಹಾಗೂ ಈಗಾಗಲೇ ₹40,000 ಮೂಲ ವೇತನ ಇರುವ ನೌಕರರಿಗೆ ಕಡಿಮೆ ಪ್ರಮಾಣದ ಫಿಟ್ಮೆಂಟ್ ನೀಡಲು ಆಯೋಗ ಶಿಫಾರಸು ಮಾಡುವ ಸಂಭವ ಇದೆ.</p>.<p>ವಾರದಲ್ಲಿ ಐದು ದಿನ ಕೆಲಸದ ಅವಧಿ ನಿಗದಿ ಮಾಡಬೇಕು ಎಂಬ ಬೇಡಿಕೆ ಇತ್ತು.</p>.<p>ಅದರ ಬದಲು ಈಗ ನೀಡುತ್ತಿರುವ ಪ್ರತಿ ಎರಡನೇ ಶನಿವಾರದ ರಜೆ ಜತೆ, ನಾಲ್ಕನೇ ಶನಿವಾರವೂ ರಜೆ ನೀಡುವ ಬಗ್ಗೆ ಆಯೋಗ ಶಿಫಾರಸು ಮಾಡುವ ಸಾಧ್ಯತೆಯೂ ಇದೆ.</p>.<p>ಆಡಳಿತ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ನಡೆಸಿ ಶಿಫಾರಸು ಮಾಡುವಂತೆ ಆಯೋಗಕ್ಕೆ ಸರ್ಕಾರ ಸೂಚಿಸಿತ್ತು. ಈ ವರದಿ ಸಲ್ಲಿಸಲು ಇನ್ನೂ ಮೂರು ತಿಂಗಳು ಕಾಲಾವಕಾಶ ಬೇಕು ಎಂದು ಕೋರಿ ಆಯೋಗ ಸರ್ಕಾರಕ್ಕೆ ಪತ್ರ ಬರೆದಿದೆ.</p>.<p>ಆಡಳಿತ ಸುಧಾರಣೆ ಹಾಗೂ ವಿವಿಧ ಭತ್ಯೆಗಳ ಹೆಚ್ಚಳಕ್ಕೆ ಸಂಬಂಧಿಸಿದ ಶಿಫಾರಸುಗಳನ್ನು ಎರಡನೇ ವರದಿಯಲ್ಲಿ ಸಲ್ಲಿಸಲಾಗುವುದು ಎಂದು ಆಯೋಗದ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅಧ್ಯಕ್ಷತೆಯಲ್ಲಿ ರಚಿಸಿರುವ ಆರನೇ ವೇತನ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ (ಇದೇ 31) ವರದಿ ಸಲ್ಲಿಸಲಿದೆ.</p>.<p>ಬೆಳಿಗ್ಗೆ 10.30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಆಯೋಗದ ಅಧ್ಯಕ್ಷ ಎಂ.ಆರ್. ಶ್ರೀನಿವಾಸ ಮೂರ್ತಿ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮೊದಲ ವರದಿಯನ್ನು ಸಲ್ಲಿಸಲಿದ್ದಾರೆ.</p>.<p>ಇನ್ನು ಮೂರು ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.</p>.<p>ರಾಜ್ಯದಲ್ಲಿರುವ 5.45 ಲಕ್ಷ ನೌಕರರು, 3 ಲಕ್ಷ ನಿವೃತ್ತ ನೌಕರರು ಹಾಗೂ ಅವರ ಅವಲಂಬಿತರನ್ನು ಓಲೈಸುವ ದೃಷ್ಟಿಯಿಂದ ಗಣನೀಯವಾಗಿ ವೇತನ ಹೆಚ್ಚಿಸುವಂತೆ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಕಡಿಮೆ ವೇತನ ಶ್ರೇಣಿ ಇರುವವರಿಗೆ ಹೆಚ್ಚಿನ ಪ್ರಮಾಣದ ಫಿಟ್ಮೆಂಟ್ (ವೇತನ ತಾರತಮ್ಯ ನಿವಾರಿಸಲು ನೀಡುವ ಮೊತ್ತ) ಹಾಗೂ ಈಗಾಗಲೇ ₹40,000 ಮೂಲ ವೇತನ ಇರುವ ನೌಕರರಿಗೆ ಕಡಿಮೆ ಪ್ರಮಾಣದ ಫಿಟ್ಮೆಂಟ್ ನೀಡಲು ಆಯೋಗ ಶಿಫಾರಸು ಮಾಡುವ ಸಂಭವ ಇದೆ.</p>.<p>ವಾರದಲ್ಲಿ ಐದು ದಿನ ಕೆಲಸದ ಅವಧಿ ನಿಗದಿ ಮಾಡಬೇಕು ಎಂಬ ಬೇಡಿಕೆ ಇತ್ತು.</p>.<p>ಅದರ ಬದಲು ಈಗ ನೀಡುತ್ತಿರುವ ಪ್ರತಿ ಎರಡನೇ ಶನಿವಾರದ ರಜೆ ಜತೆ, ನಾಲ್ಕನೇ ಶನಿವಾರವೂ ರಜೆ ನೀಡುವ ಬಗ್ಗೆ ಆಯೋಗ ಶಿಫಾರಸು ಮಾಡುವ ಸಾಧ್ಯತೆಯೂ ಇದೆ.</p>.<p>ಆಡಳಿತ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ನಡೆಸಿ ಶಿಫಾರಸು ಮಾಡುವಂತೆ ಆಯೋಗಕ್ಕೆ ಸರ್ಕಾರ ಸೂಚಿಸಿತ್ತು. ಈ ವರದಿ ಸಲ್ಲಿಸಲು ಇನ್ನೂ ಮೂರು ತಿಂಗಳು ಕಾಲಾವಕಾಶ ಬೇಕು ಎಂದು ಕೋರಿ ಆಯೋಗ ಸರ್ಕಾರಕ್ಕೆ ಪತ್ರ ಬರೆದಿದೆ.</p>.<p>ಆಡಳಿತ ಸುಧಾರಣೆ ಹಾಗೂ ವಿವಿಧ ಭತ್ಯೆಗಳ ಹೆಚ್ಚಳಕ್ಕೆ ಸಂಬಂಧಿಸಿದ ಶಿಫಾರಸುಗಳನ್ನು ಎರಡನೇ ವರದಿಯಲ್ಲಿ ಸಲ್ಲಿಸಲಾಗುವುದು ಎಂದು ಆಯೋಗದ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>